Categories: RipponpeteShivamogga

ರಿಪ್ಪನ್‌ಪೇಟೆ ಹಿಂದು ಮಹಾಸಭಾ ಗಣೇಶೋತ್ಸವ ಸಮಾರಂಭದಲ್ಲಿ ಗಣಪತಿ ಪ್ರತಿಷ್ಟಾಪನಾ ಮಹೋತ್ಸವ ಮತ್ತು ವಿವಿಧ ಮನೋರಂಜನಾ ಸಾಂಸ್ಕೃತಿಕ ಕಾರ್ಯಕ್ರಮ

ರಿಪ್ಪನ್‌ಪೇಟೆ: ಇಲ್ಲಿನ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಯ 56ನೇ ವರ್ಷದ 11 ದಿನಗಳ ಶ್ರೀವರಸಿದ್ದಿವಿನಾಯಕ ಸ್ವಾಮಿಯ ಪ್ರತಿಷ್ಟಾಪನಾ ಮಹೋತ್ಸವ  ಮತ್ತು ವಿವಿಧ ಸಾಂಸ್ಕೃತಿಕ ಧಾರ್ಮಿಕ ಕಾರ್ಯಕ್ರಮಗಳನ್ನು ಶ್ರೀಸಿದ್ದಿವಿನಾಯಕ ದೇವಸ್ಥಾನದ ಹಿಂಭಾಗದ ತಿಲಕ್ ಮಹಾಮಂಟಪದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದಲ್ಲಿ ಆಯೋಜಿಸಲಾಗಿದೆ ಎಂದು ಸಮಿತಿ ಅಧ್ಯಕ್ಷ ನಾಗರಾಜ್ ಪವಾರ್ ಮತ್ತು ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಬಳ್ಳಾರಿ ವಿವರಿಸಿದರು.

ಸೆಪ್ಟೆಂಬರ್ 18 ರಂದು ಸೋಮವಾರ ಮಧ್ಯಾಹ್ನ 12.30 ಕ್ಕೆ ಶ್ರೀವರಸಿದ್ದಿವಿನಾಯಕ ಸ್ವಾಮಿಯ ಪ್ರತಿಷ್ಟಾಪನಾ ಪೂಜೆ ಮತ್ತು ಪ್ರಸಾದ ವಿನಿಯೋಗ, ಸೆ.19 ರಂದು ಮಂಗಳವಾರ ರಾತ್ರಿ ಶ್ರೀಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಸೆ.20 ರಂದು ಬುಧವಾರ ರಾತ್ರಿ 8 ಗಂಟೆಗೆ `ಸಂತೃಪ್ತಿ’ ಅಂಧಕಲಾವಿದರ ತಂಡ ಇವರಿಂದ ರಸಮಂಜರಿ ಕಾರ್ಯಕ್ರಮ.

ಸೆ.21 ರಂದು ಗುರುವಾರ ರಾತ್ರಿ 8 ಗಂಟೆಗೆ ಕೇಡಲಸರ ಶ್ರೀಮಹಾಗಣಪತಿ ವೀರಾಂಜನೇಯ ಕಲಾ ಪ್ರತಿಷ್ಠಾನ ಇವರಿಂದ `ರಾಜ ಉಗ್ರಸೇನಾ’ ಯಕ್ಷಗಾನ ಪ್ರದರ್ಶನ, ಸೆ.22 ರಂದು ಶುಕ್ರವಾರ ರಾತ್ರಿ 8 ಗಂಟೆಗೆ `ರಸಮಂಜರಿ’ಕಾರ್ಯಕ್ರಮ, ಸೆ.23 ರಂದು ಶನಿವಾರ ರಾತ್ರಿ 8 ಕ್ಕೆ ಶ್ರೀಶಾರದಾಂಬ ಸಾಂಸ್ಕೃತಿಕ ಕಲಾ ಕೇಂದ್ರ ಇವರಿಂದ “ಭರತನಾಟ್ಯ’ಪ್ರದರ್ಶನ, ಸೆ.24 ರಂದು ಭಾನುವಾರ ರಾತ್ರಿ 8 ಕ್ಕೆ ತೆಕ್ಕಟ್ಟೆಯ ಓಂಕಾರ ಕಲಾವಿದರಿಂದ `ಎಷ್ಟ್ ಹೇಳಿದ್ರೂ ಅಷ್ಟೆ’ ಎಂಬ ಹಾಸ್ಯಮಯ ನಾಟಕ ಪ್ರದರ್ಶನ.

ಸೆ.25 ರಂದು ಸೋಮವಾರ ರಾತ್ರಿ 8 ಕ್ಕೆ ಹೆಸರಾಂತ ಜಾನಪದ ಆಯ್ದ ಆಹ್ವಾನಿತ ತಂಡಗಳಿಂದ `ಬಳೆಕೋಲಾಟ’ ಸ್ಪರ್ಧೆ, ಸೆ.26 ರಂದು ಮಂಗಳವಾರ ರಾತ್ರಿ 8ಕ್ಕೆ ಶ್ರೀವಿನಾಯಕ ಮೆಲೋಡಿಸ್’ ತಂಡದವರಿಂದ ರಸಮಮಜರಿ ಕಾರ್ಯಕ್ರಮ, ಸೆ.27 ರಂದು ಬುಧವಾರ ರಾತ್ರಿ 8 ಕ್ಕೆ ರಿಪ್ಪನ್‌ಪೇಟೆ, ಕೊಪ್ಪ, ಹೊಸನಗರ ವಿದ್ಯಾರ್ಥಿಗಳಿಂದ `ಡೆಸ್ಟಿನಿ ಸ್ಕೂಲ್ ಆಫ್ ಡ್ಯಾನ್ಸ್’’ ಇವರಿಂದ ನೃತ್ಯ ರೂಪಕ.

ಸೆ.28 ರಂದು ಗುರುವಾರ ಮದ್ಯಾಹ್ನ 12.30 ಕ್ಕೆ ಶ್ರೀ ಸ್ವಾಮಿಯ ವಿಸರ್ಜನಾ ಪೂಜೆ ನಮತರ ಸಂಜೆ 4 ಗಂಟೆಗೆ ಶ್ರೀಸ್ವಾಮಿಯ ವಿಸರ್ಜನಾ ಮೆರವಣಿಗೆ ರಾಜಬೀದಿ ಉತ್ಸವ ಈ ರಾಜಬೀದಿ ಉತ್ಸವದಲ್ಲಿ ವಿಶೇಷ ವಾದ್ಯ ಡೊಳ್ಳುಕುಣಿತ ತಮಟೆ ಬಡಿತ ವಿವಿಧ ಗ್ರಾಮಗಳ ಜಾನಪದ ತಂಡದವರ ಭಜನೆ ಈ ವರ್ಷದ ವಿಶೇಷ ಅಕರ್ಷಣೆ ಭದ್ರಾವತಿ ಅರಕೆರೆ ವೀರಗಾಸೆ ಶಿಗ್ಗಾಂವ್ ಜಾಂಜಾ ಪಥಾಕ್, ಕೀಲುಕುದುರೆ, ಗೊಂಬೆಕುಣಿತ,ನಗಾರಿ ತಟ್ಟಿರಾಯ ತಂಡದವರ ಕಲಾ ಪ್ರದರ್ಶನಗೊಳ್ಳಲಿದೆ. ಇದರೊಂದಿಗೆ ರಾತ್ರಿ 10-30 ರಿಂದ ವಿನಾಯಕ ವೃತ್ತದಲ್ಲಿ ಶಿವಮೊಗ್ಗ `ಗೀತಾ ಅರ್ಕೇಸ್ಟ್ರಾ’ ತಂಡದವರ ಮನೋರಂಜನಾ ಕಾರ್ಯಕ್ರಮ ಆಯೋಜಿಸಲಾಗಿದ್ದು ಸಕಲ ಭಕ್ತಾಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಸ್ವಾಮಿಯ ದರ್ಶನಾಶೀರ್ವಾದ ಪಡೆಯುವಂತೆ ಸಮಿತಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

9 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

13 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

14 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

16 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

16 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

23 hours ago