Categories: ShivamoggaSoraba

ರೇಣುಕಾಂಬ ಕಲಾ ನಾಟ್ಯ ಸಂಘದಿಂದ ನಡೆದ ಸಾಮಾಜಿಕ ನಾಟಕ ಪ್ರದರ್ಶನ

ಸೊರಬ : ಚಂದ್ರಗುತ್ತಿ ಶ್ರೀ ರೇಣುಕಾಂಬ ಗ್ರಾಮೀಣ ಸೇವಾ ಸಂಸ್ಥೆ ಹಾಗೂ ಶ್ರೀ ರೇಣುಕಾಂಬ ದೇವಿ ದಸರಾ ಉತ್ಸವ ಆಚರಣಾ ಸಮಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಏರ್ಪಡಿಸಿದ್ದ 8ನೇ ವರ್ಷದ ದಸರಾ ಉತ್ಸವದ 5ನೇ ದಿನ ಶ್ರೀ ರೇಣುಕಾಂಬ ಕಲಾ ನಾಟ್ಯ ಸಂಘ ಇವರಿಂದ ಅನ್ಯಾಯ ಅಳಿಯಿತು ಸ್ನೇಹ ಬೆಳೆಯಿತು ಎಂಬ ಸಾಮಾಜಿಕ ನಾಟಕ ಪ್ರದರ್ಶನವಾಯಿತು.

ಪಾತ್ರಧಾರಿಗಳಾಗಿ ವಾಸುದೇವ್ ಎಸ್ ಊರಿನ ಹಿರಿಯರು ಪಾತ್ರದಲ್ಲಿ, ರಾಮ ಸ್ವಾದಿ ಸ್ವಾಭಿಮಾನಿ ರೈತನ ಪಾತ್ರದಲ್ಲಿ, ಪ್ರಜ್ವಲ್ ಕಥನಾಯಕ ಪಾತ್ರದಲ್ಲಿ, ವಸಂತ್ ಶೇಟ್ ಕ್ರಾಂತಿಕಾರಿ ನಾಯಕ ಪಾತ್ರದಲ್ಲಿ, ರತ್ನಾಕರ್ ಎಂ.ಪಿ ಖಳನಾಯಕ ಪಾತ್ರದಲ್ಲಿ, ಪ್ರಕಾಶ್ ಮಿರ್ಜಿ ಖಳನಾಯಕ ಪಾತ್ರದಲ್ಲಿ, ರಾಮಕೃಷ್ಣ ಹಾಸ್ಯ ಪಾತ್ರದಲ್ಲಿ, ಮಣಿಕಂಠ ಡಾಕ್ಟರ್ ಪಾತ್ರದಲ್ಲಿ, ವರುಣ್ ಶೇಟ್ ಇನ್ಸ್‌ಪೆಕ್ಟರ್ ಪಾತ್ರದಲ್ಲಿ ಗಣಪತಿ ಪೊಲೀಸ್ ಪಾತ್ರದಲ್ಲಿ, ಮಲ್ಯ ಪಾತ್ರದಲ್ಲಿ ರಾಘವೇಂದ್ರ ಪಾತ್ರಧಾರಿಗಳಾಗಿ ಕಾಣಿಸಿಕೊಂಡರು.

ವೇದಿಕೆ ಕಾರ್ಯಕ್ರಮದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿದ ಜಡೆ ಸಂಸ್ಥಾನ ಮಠದ ಡಾಕ್ಟರ್ ಮಹಾಂತ ಸ್ವಾಮೀಜಿ ಮಾತನಾಡಿ ಮನುಷ್ಯನು ತನ್ನ ಜೀವನದಲ್ಲಿ ಬರುವ ಅಜ್ಞಾನದ ಅಂಧಕಾರವನ್ನು ಹೋಗಲಾಡಿಸಿ ಸುಜ್ಞಾನದ ಹಾದಿಯಲ್ಲಿ ನಡೆಯಲು ನವರಾತ್ರಿ ಉತ್ಸವಗಳು ಪೂರಕವಾಗಿದೆ ಎಂದರು.

ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷ ಪಾಣಿ ರಾಜಪ್ಪ ಮಾತನಾಡಿ ವಿಜಯನಗರ ಸಾಮ್ರಾಜ್ಯದ ಅರಸರ ಕಾಲದಿಂದ ಮೈಸೂರು ಒಡೆಯರ ಕಾಲದವರೆಗೆ ದಸರಾ ಉತ್ಸವ ಕಾರ್ಯಕ್ರಮಗಳು ನಡೆದುಕೊಂಡು ಬಂದಿದ್ದು. ಗ್ರಾಮೀಣ ಭಾಗದಲ್ಲಿ ಇಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ಜನರಲ್ಲಿ ಸಾಂಸ್ಕೃತಿಕ ಭಾವನೆ ಹೆಚ್ಚುತ್ತದೆ ಎಂದರು.

ಚಂದ್ರಗುತ್ತಿ ಕಲೆಗಳ ತವರೂರಾಗಿದ್ದು ಶ್ರೀ ರೇಣುಕಾಂಬ ದೇವಿ ದಸರಾ ಉತ್ಸವ ಸಾಂಸ್ಕೃತಿಕ ಆಚರಣೆಯಿಂದಾಗಿ ಹೆಚ್ಚು ಕಲಾವಿದರಿಗೆ ಜಾನಪದ, ಸಾಮಾಜಿಕ, ಯಕ್ಷಗಾನ, ಬಯಲಾಟ, ಪೌರಾಣಿಕ ನಾಟಕದಂತಹ ಕಲೆಗಳಿಗೆ ಅವಕಾಶ ಸಿಗುತ್ತಿದ್ದು. ಯುವಕರು, ವಯಸ್ಕರು, ಮತ್ತು ಮಹಿಳೆಯರು ಎಲ್ಲರಿಗೂ ಸಹ ತಮ್ಮ ಕಲೆಗಳನ್ನು ಪ್ರದರ್ಶಿಸುವಲ್ಲಿ ಸಕ್ರಿಯರಾಗಿ ದಸರಾ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮ ಸಹಕಾರಿಯಾಗಿದೆ.
– ಪ್ರಜ್ವಲ್ ಚಂದ್ರಗುತ್ತಿ, ಉಪನ್ಯಾಸಕರು ಹಾಗೂ ಜನಪದ ಕಲಾವಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಮಿತಿ ಅಧ್ಯಕ್ಷ ಡಾ.ಆರ್ ಶ್ರೀಧರ್ ಹುಲ್ತಿಕೊಪ್ಪ ವಹಿಸಿದ್ದರು, ಪುರಸಭೆ ಮಾಜಿ ಅಧ್ಯಕ್ಷ ಹೆಚ.ಎಸ್ ಮಂಜಪ್ಪ, ಪ್ರಮುಖರಾದ ಚಂದ್ರಪ್ಪ ಹೊಳೆಮರೂರು, ಸುರೇಂದ್ರ ಗೌಡ, ದೇವಕಿ ಪಾಣಿ ರಾಜಪ್ಪ, ಸೇರಿದಂತೆ ಮೊದಲಾದವರಿದ್ದರು.


Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago