ಹೊಸನಗರ : ತಾಲೂಕಿನ ಕೆಲವೇ ಲಾಭದಾಯಕ ಹಾಲು ಉತ್ಪಾದಕರ ಸಂಘಗಳಲ್ಲಿ ನಮ್ಮ ಸಂಘವು ಒಂದಾಗಿದೆ ಎಂದು ಇಲ್ಲಿನ ಕಾರಣಗಿರಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಎಂ.ಪಿ.ರಮಾನಂದ ತಿಳಿಸಿದರು.
2023-23ನೇ ಸಾಲಿನ ಸಂಘದ ಸರ್ವ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡದ ಅವರು, 2024ಕ್ಕೆ ಪ್ರಸ್ತುತ ಆಡಳಿತ ಮಂಡಳಿಯ ಅವಧಿ ಕೊನೆಗೊಳ್ಳಲಿದ್ದು, ತಮ್ಮ ಅಧ್ಯಕ್ಷಾವಧಿಯಲ್ಲಿ ಸಂಘವನ್ನು ಲಾಭದತ್ತ ಕೊಂಡೊಯ್ಯಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಪ್ರಸಕ್ತ ಸಾಲಿನಲ್ಲಿ ಸಂಘವು ರೂ 28 ಸಾವಿರ ಗಳಿಸಿದ್ದು, ಹೈನುಗಾರಿಕೆಗೆ ರೈತರು ಮುಂದಾಗದಿರುವುದು ಮುಂಬರುವ ದಿನಗಳಲ್ಲಿ ಶೋಚನೀಯ ಸಂಗತಿ ಆಗಲಿದೆ ಎಂದರು.
ಇದೇ ಸಂದರ್ಭದಲ್ಲಿ ಸಂಘದಲ್ಲಿ ದಶಕಗಳಿಗೂ ಹೆಚ್ಚು ಕಾಲ ಸೇವೆ ಸಲ್ಲಿಸಿ ಸ್ವಯಂಪ್ರೇರಿತರಾಗಿ ಇತ್ತೀಚೆಗೆ ನಿವೃತ್ತಿ ಹೊಂದಿದ ಸಿಬ್ಬಂದಿಗಳಾದ ಸಂಪೆಮನೆ ಗಿರೀಶ್, ಕೆರೆಹೊಂಡ ಚಂದ್ರಶೇಖರ ಅವರನ್ನು ಸಂಘ ಆತ್ಮೀಯವಾಗಿ ಸನ್ಮಾನಿಸಿ ಬೀಳ್ಕೊಟ್ಟಿತು.
ಸಭೆಯಲ್ಲಿ ಶಿವಮೊಗ್ಗ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಹೆಚ್.ಎನ್. ವಿದ್ಯಾಧರ ಹಾಗೂ ವಿಸ್ತರಣಾಧಿಕಾರಿ ಶಿವಮೂತಿ ನಾಯಕ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.
ಉಪಾಧ್ಯಕ್ಷ ಉಮೇಶ್ ಉಡುಪ, ನಿರ್ದೇಶಕರಾದ ವಿ.ಆತ್ಮಾರಾಮ್, ನಾರಾಯಣ ಅಡಿಗ, ಬಾಲಕೃಷ್ಣ ಐತಾಳ್, ವೆಂಕಟರಮಣ, ಸಿಬ್ಬಂದಿಗಳಾದ ಕಾರ್ಯದರ್ಶಿ ಉಮಾ, ಹಾಲು ಪರೀಕ್ಷಕಿ ರೇಷ್ಮಾ, ಕೃತಕ ಗರ್ಭದಾರಣಾ ಕಾರ್ಯಕರ್ತ ವಾಸಪ್ಪಗೌಡ, ಸಹಾಯಕ ಕೃಷ್ಣಪ್ಪ ಸೇರಿದಂತೆ ಹಲವು ಷೇರುದಾರರು ಸಭೆಯಲ್ಲಿ ಭಾಗವಹಿಸಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…