ಶಿವಮೊಗ್ಗ : ಶಿವಮೊಗ್ಗಕ್ಕೆ ಇದೇ ಮೊದಲ ಬಾರಿಗೆ ಎಲೆಕ್ಟ್ರಿಕ್ ಎಂಜಿನ್ ರೈಲಿನ ವ್ಯವಸ್ಥೆ ಕಲ್ಪಿಸಿ ರೈಲ್ವೆ ಇಲಾಖೆಯಿಂದ ಆದೇಶ ಹೊರಡಿಸಿದ್ದು ಶಿವಮೊಗ್ಗ ಜನಶತಾಬ್ದಿ ಯಶವಂತಪುರ ಎಕ್ಸ್ಪ್ರೆಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್ ನೀಡಿದೆ.
ಜನಶತಾಬ್ದಿ ಸೇರಿದಂತೆ ಶಿವಮೊಗ್ಗದಿಂದ ಬೆಂಗಳೂರಿಗೆ ಸಂಪರ್ಕ ಕಲ್ಪಿಸುವ ಎರಡು ರೈಲುಗಳ ಎಂಜಿನ್ ಪರಿವರ್ತನೆಗೊಂಡಿದ್ದು ಈವರೆಗೂ ಇವೆರಡೂ ರೈಲುಗಳಿಗೆ ಡಿಸೇಲ್ ಎಂಜಿನ್ ಬಳಕೆಯಾಗುತ್ತಿತ್ತು. ಜೂ. 17ರಿಂದ ಈ ರೈಲುಗಳು ಎಲೆಕ್ಟ್ರಿಕ್ ಎಂಜಿನ್ನೊಂದಿಗೆ ಚಲಿಸಲಿವೆ.
ಶಿವಮೊಗ್ಗ – ಬೆಂಗಳೂರು ಜನ ಶತಾಬ್ದಿ ರೈಲಿಗೆ ಈತನಕ ಡಿಸೇಲ್ ಎಂಜಿನ್ ಇತ್ತು. ಇನ್ಮುಂದೆ ಎಲೆಕ್ಟ್ರಿಕ್ ಎಂಜಿನ್ ಆಗಿ ಪರಿವರ್ತನೆಯಾಗಲಿದೆ. ಜೂ.17ರಂದು ಬೆಂಗಳೂರಿನಿಂದ ಹೊರಡುವ ರೈಲು ಎಲೆಕ್ಟ್ರಿಕ್ ಎಂಜಿನ್ನೊಂದಿಗೆ ಶಿವಮೊಗ್ಗಕ್ಕೆ ಬರಲಿದೆ. ಜೂ.18ರಂದು ಶಿವಮೊಗ್ಗದಿಂದ ಹೊರಡುವಾಗ ಎಲೆಕ್ಟಿಕ್ ಎಂಜಿನ್ ಹೊಂದಿರಲಿದೆ.
ಇನ್ನು ಯಶವಂತಪುರ – ಶಿವಮೊಗ್ಗ ಎಕ್ಸ್ಪ್ರೆಸ್ ರೈಲಿನ ಎಂಜಿನ್ ಕೂಡ ಪರಿವರ್ತಿಸಲಾಗುತ್ತಿದೆ. ಜೂ.17ರಂದು ಯಶವಂತಪುರದಿಂದ ಹೊರಡುವ ರೈಲಿಗೆ ಎಲೆಕ್ಟ್ರಿಕ್ ಎಂಜಿನ್ ಅಳವಡಿಸಲಾಗುತ್ತದೆ. ಮಧ್ಯಾಹ್ನ ಶಿವಮೊಗ್ಗಕ್ಕೆ ಬರುವ ರೈಲು ಎಲೆಕ್ಟ್ರಿಕ್ ಎಂಜಿನ್ನೊಂದಿಗೆ ಶಿವಮೊಗ್ಗದಿಂದ ತೆರಳಲಿದೆ. ಎಲೆಕ್ಟ್ರಿಕ್ ಎಂಜಿನ್ಗಳು ಕಡಿಮೆ ಶಬ್ದ ಮಾಲಿನ್ಯ ರಹಿತವಾಗಿರುತ್ತವೆ. ಇವುಗಳ ವೇಗವು ಹೆಚ್ಚಿರುತ್ತದೆ. ಮುಂದೆ ಇವೆರಡು ರೈಲುಗಳ ವೇಗ ಹೆಚ್ಚುವ ಸಾಧ್ಯತೆ ಇದೆ. ಇದರಿಂದ ಶಿವಮೊಗ್ಗ – ಬೆಂಗಳೂರು ನಡುವಿನ ಸಮಯ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದೆ.
ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…
ರಿಪ್ಪನ್ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…
ಹೊಸನಗರ : ಮೇ 03 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.
ರಿಪ್ಪನ್ಪೇಟೆ: ಭಕ್ತರು ಭಕ್ತಿಯಿಂದ ಪ್ರಾರ್ಥಿಸಿದರೆ ದೇವರು ನಮ್ಮ ಹೃದಯಗಳಲ್ಲಿ ನೆಲೆಸುತ್ತಾನೆ. ಶ್ರದ್ದಾಭಕ್ತಿಯಿಂದ ಭಗವಂತನ ನಾಮಸ್ಮರಣೆ ಮಾಡಿದರೆ ಶಾಂತಿ ನೆಮ್ಮದಿ ಕರುಣಿಸುತ್ತಾನೆಂದು…
ರಿಪ್ಪನ್ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿ ನಿಮಿತ್ತ ಮೇ…
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…