Categories: Shivamogga

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂ. ವಂಚನೆ ; ಆರೋಪ

ಶಿವಮೊಗ್ಗ: ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ಹೇಳಿ ಮಹಿಳೆಯೊಬ್ಬರು ಲಕ್ಷಾಂತರ ರೂ. ವಂಚಿಸಿದ್ದಾರೆ ಎಂದು ಆರೋಪಿಸಿ ನ್ಯಾಷಲನ್ ಆಂಟಿ ಕ್ರೈಂ ಮತ್ತು ಹ್ಯೂಮನ್ ರೈಟ್ಸ್ ಆಫ್ ಇಂಡಿಯಾ ಮತ್ತು ಕರ್ನಾಟಕನ ರಕ್ಷಣಾ ವೇದಿಕೆ (ಪ್ರವೀಣ್ ಶೆಟ್ಟಿ ಬಣ) ಪ್ರಮುಖರಾದ ರಹೀಮ್ ಹಾಗೂ ಸಮಾಜ ಸೇವಕಿ ಸೀಮಾ ಸೆರಾವೊ ತೆಂಡುಲ್ಕರ್ ಆರೋಪಿಸಿದ್ದಾರೆ.

ಸಮಾರು 37 ವರ್ಷದ ಶ್ವೇತಾ ಎಂಬ ಮಹಿಳೆ ತಾನು ಬಿಜೆಪಿ ಮಹಿಳಾ ಮೋರ್ಚಾ ಪದಾಧಿಕಾರಿ ಎಂದು ಹೇಳುತ್ತಾ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಆರಗ ಜ್ಞಾನೇಂದ್ರ
ಸೇರಿದಂತೆ ಗಣ್ಯರೊಂದಿಗೆ ತೆಗೆದ ಛಾಯಾಚಿತ್ರಗಳನ್ನು
ತೋರಿಸಿ ಅನೇಕ ಅಮಾಯಕ ಯುವಕರಿಗೆ ರೈಲ್ವೆ ಇಲಾಖೆ ಯಲ್ಲಿ ಕೆಲಸ ಕೊಡಿಸುವುದಾಗಿ ಮತ್ತು ರೈಲ್ವೆ ಇಲಾಖೆಯ ಟೆಂಡರ್ ಕೊಡಿಸುವುದಾಗಿ ಹೇಳಿ ಅವರಿಂದ ಲಕ್ಷಾಂತರ ರೂ. ಪಡೆದು ವಂಚಿಸಿದ್ದಾರೆ.

ತನ್ನ ಗಂಡ ಪ್ರಶಾಂತ್ ದೇಶಪಾಂಡೆ ರೈಲ್ವೆ ಇಲಾಖೆಯಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಸುಳ್ಳು ಹೇಳಿ ಅವರ ನಕಲಿ ಐಡಿ ತೋರಿಸಿ ಆದರ್ಶ ಕೊಪ್ಪ ಹಾಗೂ ಶಿವಮೊಗ್ಗ ಮಲವಗೊಪ್ಪದ ನಿವಾಸಿ ನವೀನ್ ಮತ್ತು ತೀರ್ಥಹಳ್ಳಿಯ ಅರ್ಜುನ್ ಇವರಿಗೆ ಸುಮಾರು 14 ಲಕ್ಷ ರೂ. ವಂಚಿಸಿದ್ದಾರೆ. ಅಲ್ಲದೆ ಬಾಗಲಕೋಟೆ, ರಿಪ್ಪನ್‌ಪೇಟೆ ಪೊಲೀಸ್ ಠಾಣೆ ಮತ್ತು ಹುಬ್ಬಳ್ಳಿ‌ ಠಾಣೆಯಲ್ಲಿ ಇವರ ವಿರುದ್ಧ ಈಗಾಗಲೇ ವಂಚನೆ ಪ್ರಕರಣದ ಎಫ್‌ಐಆರ್ ದಾಖಲಾಗಿದೆ. ಇವರು ರಿಪ್ಪನ್‌ಪೇಟೆಯಲ್ಲಿ ಗಾರ್ಮೆಂಟ್ಸ್ ಮತ್ತು ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದು, ರಿಶಾಂತ್ ಎನ್ನುವ ಬಿಬಿಎಂಪಿ ಅಧಿಕಾರಿ ಕೂಡ ತನ್ನ ಪತಿ ಎಂದು ಕೆಲವರಿಗೆ ನಂಬಿಸಿ ಅವರಿಂದಲೂ ಹಣ ಪೀಕಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಲಾಗಿದೆ.

ಮೊದಲು ದೂರು ನೀಡಲು ಹೋದಾಗ ಪೊಲೀಸರು
ಪ್ರಕರಣ ದಾಖಲಿಸಿಕೊಂಡಿಲ್ಲ. ಬಳಿಕ ರಕ್ಷಣಾ ವೇದಿಕೆ ಮತ್ತು ಹ್ಯೂಮ್ ರೈಟ್ಸ್ ಇಂಡಿಯಾ ಸಂಸ್ಥೆ ಕಾರ್ಯಕರ್ತರು ಜಿಲ್ಲಾ ರಕ್ಷಣಾಧಿಕಾರಿಗಳಿಗೆ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ನೀಡಿದ ನಂತರ ದೂರು ದಾಖಲಾಗಿದೆ. ಆದರೆ ಶ್ವೇತಾ‌ಮತ್ತು ಪ್ರಶಾಂತ್ ದೇಶಪಾಂಡೆ ನಾಪತ್ತೆಯಾಗಿದ್ದಾರೆ. ಇದರ ಹಿಂದೆ ದೊಡ್ಡ ಜಾಲವಿದ್ದು, ರಾಜ್ಯದ ಹಲವೆಡೆ ಜನರಿಗೆ ಮೋಸ ಮಾಡಿದ್ದು ಬೆಳಕಿಗೆ‌ ಬರುತ್ತಿದೆ. ನಕಲಿ ಐಡಿ ತೋರಿಸಿ ವಿವಿಧ ರೀತಿಯಲ್ಲಿ ಅಮಾಯಕರನ್ನು ವಂಚಿಸುತ್ತಾ ಬ್ಯಾಂಕ್ ಖಾತೆಗೆ ಹಣ ಹಾಕಿಸಿಕೊಂಡಿದ್ದಾರೆ. ಕೆಲವರಿಗೆ ಉದ್ಯೋಗದ ನಕಲಿ ಆದೇಶ ಪತ್ರವನ್ನು ಕೂಡ ನೀಡಿ ಹಣ ಪೀಕಿದ್ದಾರೆ.


ಆದ್ದರಿಂದ ಈ ವಂಚಕರ ಇಡೀ ತಂಡವನ್ನು ಬೇಧಿಸಿ ಕಠಿಣ ಶಿಕ್ಷೆಗೆ ಒಳಪಡಿಸುವಂತೆ ಹಾಗೂ ಅಮಾಯಕ ಯುವಕರಿಗೆ ನ್ಯಾಯ ಒದಗಿಸುವಂತೆ ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರಕ್ಕೆ ನೇಷನ್ ಆಂಟಿ ಕ್ರೈಂ ಮತ್ತು ಹ್ಯೂಮನ್ ರೈಟ್ಸ್ ಆಫ್ ಇಂಡಿಯಾ ಸಂಘಟನೆ ಆಗ್ರಹಿಸಿದೆ.

ಈ ಸಂದರ್ಭದಲ್ಲಿ ಸಂಘಟನೆಯ ಪ್ರಮುಖರಾದ ರಹೀಮ್, ಸೀಮಾ, ರಾಘವೇಂದ್ರ, ಸತೀಶ್, ಶ್ರೀಕಾಂತ್ ಹಾಗೂ ವಂಚನೆಗೊಳಗಾದ ನವೀನ್ ಆದರ್ಶ್, ಅರ್ಜುನ್ ಮತ್ತಿತರರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

21 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago