ಶಿವಮೊಗ್ಗ : ಕಳೆದ ವರ್ಷ ಶಿವಮೊಗ್ಗದ ವಿನೋಬನಗರ ಪೊಲೀಸ್ ಚೌಕಿ ವೃತ್ತದಲ್ಲಿ ನಟೋರಿಯಸ್ ರೌಡಿ ಶೀಟರ್ ಹಂದಿ ಅಣ್ಣಿಯನ್ನು ಹಾಡಹಗಲೇ ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಶಿವಮೊಗ್ಗದ ಜನ ಈ ಭೀಕರ ದೃಶ್ಯವನ್ನು ಇನ್ನೂ ಮರೆತೇ ಇಲ್ಲ. ಹೀಗಿರುವಾಗಲೇ ರೌಡಿ ಶೀಟರ್ ಹಂದಿ ಅಣ್ಣಿಯನ್ನು ಕೊಂದಿದ್ದ ಗ್ಯಾಂಗ್ ಮೇಲೆ ದಾಳಿ ನಡೆಸಲಾಗಿದೆ.
ರೌಡಿ ಶೀಟರ್ ಹಂದಿ ಅಣ್ಣಿ ಕೊಲೆ ಕೇಸ್ ಪ್ರಮುಖ ಆರೋಪಿಗಳ ಮೇಲೆ ಶಿವಮೊಗ್ಗ ಗಡಿ ಭಾಗದ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಚೀಲೂರು ಸಮೀಪದ ಗೋವಿನ ಕೋವಿಯಲ್ಲಿ ಗ್ಯಾಂಗ್ ಒಂದು ದಾಳಿ ನಡೆಸಿದೆ. ಈ ದಾಳಿಯಲ್ಲಿ ಗ್ಯಾಂಗ್ ನಿಂದ ತೀವ್ರ ಹಲ್ಲೆಗೆ ಒಳಗಾದ ಆಂಜನೇಯ ಎಂಬಾತ ಸಾವನ್ನಪ್ಪಿದ್ದು, ಮಧು ಎನ್ನುವರ ಸ್ಥಿತಿ ಗಂಭೀರವಾಗಿದೆ.
ಮತ್ತೊಂದು ಕೊಲೆ ಮಾಡುವ ಮೂಲಕ ಸೇಡು ತೀರಿಸಿಕೊಂಡ ಗ್ಯಾಂಗ್ ಬೂದಿ ಮುಚ್ಚಿದ ಕೆಂಡದಂತಿರೋ ಶಿವಮೊಗ್ಗ ಭೂಗತ ಲೋಕದ ಅಧಿಪತ್ಯವನ್ನು ಸಾಧಿಸಲು ಹೊರಟಿದೆ. ಇತ್ತೀಚೆಗೆ ನೆಮ್ಮದಿಯಾಗಿದ್ದ ಶಿವಮೊಗ್ಗದ ಜನ ಈಗ ಮತ್ತೆ ಭಯದಲ್ಲಿ ಬದುಕುವಂತಾಗಿದೆ.
ಅಸಲಿಗೆ ನಡೆದಿದ್ದೇನು..?
ಕುಖ್ಯಾತ ರೌಡಿ ಹಂದಿ ಅಣ್ಣಿ ಅಲಿಯಾಸ್ ಅಣ್ಣಪ್ಪ ಬರ್ಬರ ಕೊಲೆ ಕೇಸ್ ನಲ್ಲಿ ಆರೋಪಿಗಳಾದ ಮಧು, ಆಂಜನೇಯ ಎಂಬುವರು ಕೋರ್ಟ್ಗೆ ಹೋಗಿ ಬರುತ್ತಿದ್ದರು. ಕೋರ್ಟ್ ಮುಗಿಸಿ ಬೈಕ್ ನಲ್ಲಿ ಬರುತ್ತಿದ್ದಾಗ ಸ್ಕಾರ್ಪಿಯೋ ಫಾಲೋ ಮಾಡಿಕೊಂಡು ಬಂದಿದೆ. ಸ್ಕಾರ್ಪಿಯೋದಲ್ಲಿ ಬಂದ ನಾಲ್ಕೈದು ಜನರ ಗ್ಯಾಂಗ್ ಇಬ್ಬರ ಮೇಲೆ ತೀವ್ರಗಾಗಿ ಹಲ್ಲೆ ಮಾಡಿ ಎಸ್ಕೇಪ್ ಆಗಿದೆ. ಈಗ ಆಂಜನೇಯ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮಧು ಸ್ಥಿತಿ ಗಂಭೀರವಾಗಿದೆ.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…