Categories: Crime NewsShivamogga

ಲಂಚ ಪಡೆದ ಕಾರ್ಖಾನೆ ಮತ್ತು ಬಾಯ್ಲರುಗಳ ಇಲಾಖೆಯ ಕಾರ್ಯನಿರ್ವಾಹಕ ವಿಠಲ್ ನಾಯ್ಕ್ ಬಂಧ


ಶಿವಮೊಗ್ಗ: ನಗರದ ವಿನೋಬನಗರ ವಾಸಿ ರಾಕೇಶ್ ಪಟೇಲ್ ಎಂಬುವವರ ಪಟೇಲ್ ಟೆಕ್ ಇಂಜಿನಿಯರಿಂಗ್ ಪ್ರೈ.ಲಿ ಎಂಬ ಕಾರ್ಖಾನೆಯ ಲೈಸನ್ಸ್ ಅನ್ನು ರದ್ದುಪಡಿಸಲು ಲಂಚ ಪಡೆದ ಶಿವಮೊಗ್ಗ ಕಾರ್ಖಾನೆ ಮತ್ತು ಬಾಯ್ಲರುಗಳ ಇಲಾಖೆ, ಸಹಾಯಕ ನಿರ್ದೇಶಕರ ಕಚೇರಿಯ ಕಾರ್ಯನಿರ್ವಾಹಕ ಹಾಗೂ ಆಡಳಿತ ಸಹಾಯಕ ವಿಠಲ್ ನಾಯ್ಕ್ ಎಂಬುವವರನ್ನು ಲೋಕಾಯುಕ್ತ ಇಲಾಖೆಯು ಬಂಧಿಸಿದೆ. 


ರಾಕೇಶ್ ಪಟೇಲ್ ಕಛೇರಿಗೆ ಭೇಟಿ ನೀಡಿ ತಮ್ಮ ಕಾರ್ಖಾನೆಯ ಲೈಸನ್ಸ್ ರದ್ದುಪಡಿಸಿದ ಬಗ್ಗೆ ಪ್ರಮಾಣ ಪತ್ರ ನೀಡಲು ಕೋರಿದ ಸಮಯದಲ್ಲಿ ಕಛೇರಿಯ ಸೂಪರ್‌ ವೈರಸ್ ಆದ ವಿಠಲನಾಯ್ಕ ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು 15 ಸಾವಿರ ರೂ.ಗಳನ್ನು ಪಡೆದಿರುತ್ತಾರೆ. ಆದರೂ ಲೈಸನ್ಸ್ ರದ್ದತಿ ಪ್ರಮಾಣ ಪತ್ರ ನೀಡಿರುವುದಿಲ್ಲ. ದೂರವಾಣಿ ಮುಖಾಂತರ ಪ್ರಮಾಣ ಪತ್ರದ ಬಗ್ಗೆ ವಿಚಾರಿಸಿದಾಗ ಅವರು ನಾವು ತಿಳಿಸಿದ ಹಣ ನೀಡಿದ ನಂತರ ಪ್ರಮಾಣ ಪತ್ರ ನೀಡುವುದಾಗಿ ತಿಳಿಸಿದರು.  ಆರ್ಥಿಕವಾಗಿ ನಷ್ಟದಲ್ಲಿದ್ದರೂ ಸಹ ಪುನಃ 30 ಸಾವಿರ ರೂ.ಗಳನ್ನು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದು ರಾಕೇಶ್ ಪಟೇಲ್‍ಗೆ ಲಂಚದ ಹಣ ಕೊಡಲು ಇಷ್ಟವಿಲ್ಲದ ಕಾರಣ ಇಂದು ಲೋಕಾಯುಕ್ತ ಕಛೇರಿಗೆ ಬಂದು ಮಾಹಿತಿ ನೀಡಿ ಕೊಟ್ಟ ದೂರಿನ ಮೇರೆಗೆ ಪ್ರಕರಣವನ್ನು ದಾಖಲಿಸಲಾಗಿರುತ್ತದೆ.
ಅದರಂತೆ ಅಪಾದಿತರಾದ ವಿಠಲ್ ನಾಯ್ಕ ಬಿನ್ ಡೀಕ್ಯಾನಾಯ್ಕ, ಕಾರ್ಯನಿರ್ವಾಹಕ ಹಾಗೂ ಆಡಳಿತ ಸಹಾಯಕರು, ಸಹಾಯಕ ನಿರ್ದೇಶಕರ ಕಛೇರಿ ಕಾರ್ಖಾನೆ ಮತ್ತು ಬಾಯ್ಲರುಗಳ ಇಲಾಖೆ, ಶಿವಮೊಗ್ಗದ ಕಛೇರಿಯಲ್ಲಿ ದೂರುದಾರರಿಂದ ಲಂಚದ ಹಣ 30 ಸಾವಿರ ರೂ. ಪಡೆಯುತ್ತಿರುವ ಸಮಯದಲ್ಲಿ ಚಿತ್ರದುರ್ಗ ಕರ್ನಾಟಕ ಲೋಕಾಯುಕ್ತ ಕಛೇರಿ ಪೊಲೀಸ್ ಅಧೀಕ್ಷಕ ಎನ್. ವಾಸುದೇವರಾಮ ಮತ್ತು ಉಮೇಶ ಈಶ್ವರ ನಾಯ್ಕ ಪೊಲೀಸ್ ಉಪಾಧೀಕ್ಷಕರು, ಕರ್ನಾಟಕ ಲೋಕಾಯುಕ್ತ, ಶಿವಮೊಗ್ಗ ಇವರ ಮಾರ್ಗದರ್ಶನದಲ್ಲಿ ಪ್ರಕರಣವನ್ನು ದಾಖಲಿಸಿ ಅಪಾಧಿತನನ್ನು ಬಂಧಿಸಿರುತ್ತಾರೆ ಹಾಗೂ ಹೆಚ್. ರಾಧಕೃಷ್ಣ, ಪೊಲೀಸ್ ನಿರೀಕ್ಷಕರು, ಕ.ಲೋ., ಶಿವಮೊಗ್ಗ ಇವರು ತನಿಖೆ ಕೈಗೊಂಡಿರುತ್ತಾರೆ.


ಶಿವಮೊಗ್ಗ ಲೋಕಾಯುಕ್ತ ಕಛೇರಿಯ ಪೊಲೀಸ್ ಸಿಬ್ಬಂದಿಗಳಾದ ಪ್ರಸನ್ನ ಸಿ.ಹೆಚ್.ಸಿ, ಬಿ. ಲೋಕೇಶಪ್ಪ ಸಿ.ಹೆಚ್.ಸಿ. ವಿ.ಎ ಮಹಂತೇಶ ಸಿ.ಹೆಚ್.ಸಿ, ಬಿ.ಟಿ ಚನ್ನೇಶ ಸಿ.ಪಿ.ಸಿ, ಪ್ರಶಾಂತ್ ಕುಮಾರ್ ಸಿ.ಪಿ.ಸಿ, ರಘುನಾಯ್ಕ ಸಿ.ಪಿ.ಸಿ ಸುರೇಂದ್ರ ಸಿ.ಪಿ.ಸಿ, ಅರುಣ್ ಕುಮಾರ್ ಸಿ.ಪಿ.ಸಿ, ದೇವರಾಜ್, ಸಿ.ಪಿ.ಸಿ, ಪುಟ್ಟಮ್ಮ ಮ.ಪಿ.ಸಿ, ಸಾವಿತ್ರಮ್ಮ, ಮ.ಪಿ.ಸಿ, ಗಂಗಾಧರ ಎ.ಪಿ.ಸಿ, ಪ್ರದೀಪ್, ಎ.ಪಿ.ಸಿ ತರುಣ್ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು. ಎ.ಪಿ.ಸಿ, ಜಯಂತ್ ಎ.ಪಿ.ಸಿ ಇವರುಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Malnad Times

Recent Posts

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

4 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

6 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

7 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

8 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

9 hours ago

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

11 hours ago