ಹೊಸನಗರ: ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿದ್ದ ಆರೋಪಿಗಳನ್ನು 24 ಗಂಟೆಯೊಳಗೆ ಬಂಧಿಸುವಲ್ಲಿ ನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ನಗರದ ನೂಲಿಗ್ಗೇರಿ ನಿವಾಸಿಗಳಾದ ಸುಹಾನ್ (21) ಅಶೋಕ (24) ಮತ್ತು ಗಣೇಶ (30) ಬಂಧಿತ ಆರೋಪಿಗಳಾಗಿದ್ದು, ನೂಲಿಗ್ಗೇರಿ ನಿವಾಸಿ ರಾಜಮ್ಮ ಎಂಬುವರು ಮನೆಯಲ್ಲಿರದ ವೇಳೆಯಲ್ಲಿ ಸೋಮವಾರ ರಾತ್ರಿ ಮನೆಯ ಹೆಂಚು ಕಿತ್ತು ಒಳನುಗ್ಗಿದ ಕಳ್ಳರು ಬೀರುವಿನ ಬೀಗ ಒಡೆದು ಚಿನ್ನದ ಸರ, ಉಂಗುರ, ಬ್ರಾಸ್ ಲೇಟ್ ಸೇರಿದಂತೆ 4.65 ಲಕ್ಷ ರೂ. ಮೌಲ್ಯದ 94 ಗ್ರಾಂ ತೂಕದ ಚಿನ್ನಾಭರಣ ದೋಚಿದ್ದರು.
ರಾಜಮ್ಮ ಮನೆಗೆ ವಾಪಾಸಾಗಿ ನೋಡುತ್ತಿದ್ದಂತೆ ಕಳ್ಳತನವಾಗಿರುವುದನ್ನು ಗಮನಿಸಿ ಈ ಘಟನೆ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಶಿವಮೊಗ್ಗ ಎಸ್ಪಿ ಮಿಥುನ್ ಕುಮಾರ್, ಡಿವೈಎಸ್ಪಿ ಗಜಾನನ ವಾಮನ ಸುತಾರ, ಸಿಪಿಐ ಗುರಣ್ಣ ಎಸ್ ಹೆಬ್ಬಾಳ ಮತ್ತು ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಗರ ಪಿಎಸ್ಐ ರಮೇಶ್ ಪಿ.ಎಸ್ ನೇತೃತ್ವದಲ್ಲಿ ಪೊಲೀಸರ ತಂಡ ರಚಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಲಾಗಿತ್ತು.
ಪ್ರಕರಣದ ದಾಖಲಾಗಿ 24 ಗಂಟೆಯೊಳಗೆ ಮೂವರು ಆರೋಪಿಗಳ ಜೊತೆಗೆ ಚಿನ್ನಾಭರಣ ಮತ್ತು ಮೊಬೈಲ್ ಫೋನ್ ಅನ್ನು ವಶಪಡಿಸಿಕೊಂಡ ಪೊಲೀಸರು ಆರೋಪಿಗಳನ್ನು ಇಂದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಸಿಬ್ಬಂದಿಗಳಾದ ಮಂಜುನಾಥ ಎಂ.ಜಿ, ವೆಂಕಟೇಶ್, ಪ್ರವೀಣ್ ಕುಮಾರ್, ಕಿರಣ್ ಕುಮಾರ್, ವಿಶ್ವನಾಥ್, ಶಾಂತಪ್ಪ ಭಾಗವಹಿಸಿದ್ದರು.
ನಗರ ಠಾಣೆ ಪೊಲೀಸರ ಈ ಕಾರ್ಯಾವೈಖರಿಗೆ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಡಿವೈಎಸ್ಪಿ ಗಜಾನನ ವಾಮನ ಸುತಾರ ಠಾಣೆಗೆ ಆಗಮಿಸಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡ ಪೊಲೀಸರನ್ನು ಅಭಿನಂದಿಸಿದ್ದಾರೆ.
ರಿಪ್ಪನ್ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…
ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…