ಲೋಕಕಲ್ಯಾರ್ಥ ಚಂಡಿಕಾ ಹೋಮ ಧಾರ್ಮಿಕ ಕಾರ್ಯಕ್ರಮ ಸಂಪನ್ನ

0 90

ರಿಪ್ಪನ್‌ಪೇಟೆ: ಇಲ್ಲಿನ ಬರುವೆ ಗ್ರಾಮದಲ್ಲಿನ ಶ್ರೀಚೌಡೇಶ್ವರಿ ದೇವಸ್ಥಾನ ಶಿಲಾಮಯ ದೇವಸ್ಥಾನವಾಗಿ ಜೀರ್ಣೋದ್ದಾರಗೊಳಿಸಲಾಗಿದ್ದು ಜೀರ್ಣೋದ್ದಾರ ಅಷ್ಟಬಂಧ ಸಹಿತ ಪುನರ್ ಸಪರಿಹಾರ ಸಹಿತ ಚೌಡೇಶ್ವರಿ ದೇವಿಯ ಮತ್ತು ಪ್ರತಿಷ್ಟಾಪನಾ ಮಹೋತ್ಸವ ಕಾರ್ಯಕ್ರಮವು ಶಿವಮೊಗ್ಗದ ಶ್ರೀವಸಂತಭಟ್ಟರಯ ಮತ್ತು ಸಂಗಡಿಗರ ಪೌರೋಹಿತ್ಯದಲ್ಲಿ ಮೂರು ದಿನಗಳ ಕಾಲ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳೊಂದಿಗೆ ಸಂಪನ್ನಗೊಂಡಿತು.

ಇಂದು ಬೆಳಗ್ಗೆ ದೇವಿಯ ಸನ್ನಿಧಿಯಲ್ಲಿ ಲೋಕಕಲ್ಯಾರ್ಥ ಚಂಡಿಕಾ ಹೋಮ, ಕಲಾತತ್ವ ಹೋಮಾದಿಗಳು ಪರಿಕಲಶ ಸಹಿತ ಬ್ರಹ್ಮಕಲಶಾಭಿಷೇಕ ಮಹಾಪೂಜೆ ಮಧ್ಯಾಹ್ನ 12:30ಕ್ಕೆ ಚಂಡಿಕಾ ಹೋಮದ ಪೂರ್ಣಾಹುತಿ ತೀರ್ಥಪ್ರಸಾದ ವಿನಿಯೋಗ ಹಾಗೂ ಸಾಮೂಹಿಕ ಅನ್ನಸಂತರ್ಪಣೆ ಜರುಗಿತು.

ಸಂಜೆ ಅಲಸೆ ಶ್ರೀಚಂಡಿಕೇಶ್ವರಿ ಯಕ್ಷಗಾನ ಮಂಡಳಿಯವರಿಂದ ಕ್ಷೇತ್ರ ಮಹಾತ್ಮೆ ಎಂಬ ಕಾಲಮಿತಿ ಪೌರಾಣಿಕ ಯಕ್ಷಗಾನ ಪ್ರದರ್ಶನ ಜರುಗಲಿದೆ.
 

Leave A Reply

Your email address will not be published.

error: Content is protected !!