Categories: Shivamogga

ವಾಸವಿ ಪಬ್ಲಿಕ್‌ ಶಾಲೆಯಿಂದ ಪರಿಸರ ಸ್ನೇಹಿ ಗಣಪತಿಗಳ ವಿತರಣೆ

ಶಿವಮೊಗ್ಗ: ಕೋಟೆ ರಸ್ತೆಯಲ್ಲಿರುವ ವಾಸವಿ ಪಬ್ಲಿಕ್ ಶಾಲೆಯಲ್ಲಿ ಕಳೆದ 8 ವರ್ಷಗಳಿಂದ ಪರಿಸರ ಸಂರಕ್ಷಣೆಗೋಸ್ಕರ ಪರಿಸರ ಸ್ನೇಹಿ ಗಣಪತಿಗಳನ್ನು ಸಾರ್ವಜನಿಕರಿಗೆ ನೀಡುವ ಕಾರ್ಯಕ್ರಮ ಹಮ್ಮಿಕೊಂಡು ಬರುತ್ತಿದ್ದು, ಈ ವರ್ಷವೂ ಸಹ ನೂರು ಪರಿಸರಸ್ನೇಹಿ ಗಣಪತಿಗಳನ್ನು ವಿತರಿಸಲಾಗುವುದು ಎಂದು ಶಾಲೆಯ ಕಾರ್ಯದರ್ಶಿ ಎಸ್.ಕೆ. ಶೇಷಾಚಲ ತಿಳಿಸಿದರು.

ಅವರು ಇಂದು ಮೀಡಿಯಾ ಹೌಸ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶಾಲೆಯಲ್ಲಿ ಪರಿಸರಸ್ನೇಹಿ ಗಣಪತಿಯನ್ನು ಪ್ರತಿಷ್ಠಾಪಿಸುವುದರ ಮೂಲಕ ಪ್ರತಿವರ್ಷ ಹಬ್ಬ ಆಚರಿಸಲಾಗುತ್ತದೆ ಎಂದರು.

ನದಿಯ ನೀರು ಹಾಳಾಗದಂತೆ ಹಾಗೂ ಜಲಚರ ಜೀವಿಗಳು ನಾಶವಾಗುವುದನ್ನು ತಡೆಗಟ್ಟಲು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಶಾಲೆಯ ಆವರಣದಲ್ಲಿ ಪ್ರತಿವರ್ಷ ಕೃತಕ ಕೆರೆ ನಿರ್ಮಿಸಿ ಹಬ್ಬದ ದಿನ ಸುಮಾರು 200 ಗಣಪತಿ ವಿಸರ್ಜನೆಗೆ ಅವಕಾಶ ಮಾಡಿಕೊಡಲಾಗುತ್ತಿದೆ ಎಂದರು.

ಶಾಲೆಯ ಸುತ್ತಮುತ್ತ ಇರುವ ಮನೆಗಳಲ್ಲಿ ಪ್ರತಿಷ್ಠಾಪಿಸುವ ಗಣಪತಿಯ ವಿಸರ್ಜನೆಗೆ ಈಗಾಗಲೇ ಜಾಗೃತಿ ಮೂಡಿಸಿದ್ದು, ಪರಿಸರ ಸ್ನೇಹಿ ಗಣಪತಿಯನ್ನು ಪ್ರತಿಷ್ಠಾಪಿಸುವಂತೆ ಶಾಲೆಯ ರೋಟರಿ ಇಂರ‍್ಯಾಕ್ಟ್ ಕ್ಲಬ್‌ನ ಸದಸ್ಯರು ಮನೆ ಮನೆಗೆ ತೆರಳಿ ಮನವಿ ಮಾಡುತ್ತಿದ್ದಾರೆ ಎಂದರು.

ಸುಮಾರು 100ಕ್ಕೂ ಹೆಚ್ಚು ಪರಿಸರಸ್ನೇಹಿ ಗಣಪತಿ ಮೂರ್ತಿಯನ್ನು ವಿತರಿಸಲಾಗುತ್ತಿದ್ದು, 1 ಮೂರ್ತಿಗೆ 150 ರೂ. ಬೆಲೆ ನಿಗದಿ ಮಾಡಿದ್ದು, ಸೆ.12ರಿಂದ ವಿತರಿಸಲಾಗುವುದು. ಹಬ್ಬದ ಮೊದಲ ದಿನ ರಾತ್ರಿ 8-30ರಿಂದ 11-30ರವರೆಗೆ ಕೃತಕ ಕೆರೆಯಲ್ಲಿ ವಿಸರ್ಜನೆ ಮಾಡಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಮೊ: 99165 14066ರಲ್ಲಿ ಸಂಪರ್ಕಿಸಬಹುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ಶಾಲೆಯ ಅಧ್ಯಕ್ಷ ಬಿ.ಎಲ್. ಶ್ಯಾಮಸುಂದರ್, ಎಸ್.ನಾಗರಾಜ್, ಸೌಮ್ಯ, ರೋಟರಿ ಇಂರ‍್ಯಾಕ್ಟ್ ಕ್ಲಬ್‌ನ ಸದಸ್ಯರಾದ ತನುಶ್ರೀ, ಚೇತನ್, ಚಿನಿಶಾ ಉಪಸ್ಥಿತರಿದ್ದರು.

ಶಿವಮೊಗ್ಗ: ಜೆಸಿಐ ಶಿವಮೊಗ್ಗದ ಸಹ ಸಂಚಾಲಕಿ ದಿವ್ಯ ಪ್ರವೀಣ್ ಅವರಿಗೆ ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆಯು `ಕನಕಶ್ರೀ ಚೇತನ ಪತಂಜಲಿ ರತ್ನ’ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ.
ಇತ್ತೀಚೆಗೆ ಹೊಸಮನೆ ಮೂರನೇ ತಿರುವಿನಲ್ಲಿರುವ ಪತಂಜಲಿ ಯೋಗ ಕಲಾಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು ದಿವ್ಯ ಪ್ರವೀಣ್ ಅವರನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಕಾರ್ಯದರ್ಶಿ ಜೆ. ನಾಗರಾಜ್, ಪ್ರಮುಖರಾದ ಎ.ಹೆಚ್. ಶ್ಯಾಮಲಾ, ಜಿ.ಇ. ಶಿವಾನಂದಪ್ಪ, ಪರಿಸರ ಸಿ. ರಮೇಶ್, ಟಿ.ಎನ್. ಶಶಿಧರ್ ಸೇರಿದಂತೆ ಹಲವರಿದ್ದರು.

ಕನಕಶ್ರೀ ಚೇತನ ಪತಂಜಲಿ ರತ್ನ ಪ್ರಶಸ್ತಿ

ಶಿವಮೊಗ್ಗ: ಜೆಸಿಐ ಶಿವಮೊಗ್ಗದ ಸಹ ಸಂಚಾಲಕಿ ದಿವ್ಯ ಪ್ರವೀಣ್ ಅವರಿಗೆ ಪತಂಜಲಿ ಯೋಗ ಮತ್ತು ಪ್ರಕೃತಿ ಸಂಸ್ಥೆಯು `ಕನಕಶ್ರೀ ಚೇತನ ಪತಂಜಲಿ ರತ್ನ’ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಿದೆ.
ಇತ್ತೀಚೆಗೆ ಹೊಸಮನೆ ಮೂರನೇ ತಿರುವಿನಲ್ಲಿರುವ ಪತಂಜಲಿ ಯೋಗ ಕಲಾಮಂದಿರದಲ್ಲಿ ನಡೆದ ಸಮಾರಂಭದಲ್ಲಿ ಸಂಸ್ಥೆಯ ಪದಾಧಿಕಾರಿಗಳು ದಿವ್ಯ ಪ್ರವೀಣ್ ಅವರನ್ನು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸಮಿತಿಯ ಕಾರ್ಯದರ್ಶಿ ಜೆ. ನಾಗರಾಜ್, ಪ್ರಮುಖರಾದ ಎ.ಹೆಚ್. ಶ್ಯಾಮಲಾ, ಜಿ.ಇ. ಶಿವಾನಂದಪ್ಪ, ಪರಿಸರ ಸಿ. ರಮೇಶ್, ಟಿ.ಎನ್. ಶಶಿಧರ್ ಸೇರಿದಂತೆ ಹಲವರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago