Categories: Crime NewsShivamogga

ವಾಹನ ಸಮೇತ ನಾಟ ವಶಕ್ಕೆ ; ಆರೋಪಿ ಬಂಧನ

ಶಿವಮೊಗ್ಗ : ಇಂದು ಬೆಳಗಿನಜಾವ ಶಂಕರ ವಲಯದ ವಲಯ ಅರಣ್ಯಾಧಿಕಾರಿ ಸುಧಾಕರ.ಬಿ ರವರ ನೇತೃತ್ವದಲ್ಲಿ ದಾಳಿ ನಡೆಸಿದಾಗ ಶಿವಮೊಗ್ಗ ನಗರದ ಹೊರವಲಯ ಹೊಳೆಹೊನ್ನೂರು ರಸ್ತೆಯಲ್ಲಿ ಕಳ್ಳ ಸಾಗಾಣಿಕೆಯಾಗುತ್ತಿದ್ದ ಬೀಟೆ ಮತ್ತು ಅಪರೂಪದ ಕರಿ ಮರದ ಜಾತಿಯ (32=0.601ಘ.ಮೀ) ತುಂಡುಗಳನ್ನು ಸಾಗಿಸುತ್ತಿದ್ದ ಮಹೇಂದ್ರ ಬೊಲೆರೋ ವಾಹನ (TN-49-BM-3542) ಸಮೇತ ಆರೋಪಿ ಶಿವಮೊಗ್ಗದ ಅಲೆಮಾನ್‌ಕೇರಿ ನಿವಾಸಿ ಸೈಯದ್ ಅಜೀಜ್‌ಊ‌ರ್ ರಹಮಾನ್.ಎಮ್.ಬಿ ಬಿನ್ ಬಷೀರ್ ಅಹ್ಮದ್.ಎಮ್. ಎಂಬಾತನನ್ನು ಬಂಧಿಸಿದ್ದಾರೆ.

ಆರೋಪಿಯು ವಿವಿಧ ಅರಣ್ಯ ವಲಯದ ಪ್ರಕರಣದಲ್ಲಿ ಹಾಗೂ ಪೊಲೀಸ್ ಪ್ರಕರಣದಲ್ಲಿ ಭಾಗಿಯಾಗಿರುವುದರ ಬಗ್ಗೆ ಮಾಹಿತಿ ಪಡೆಯಲಾಗಿದ್ದು ಪ್ರಸ್ತುತ ತನಿಖೆ ಆರಂಭವಾಗಿದ್ದು, ಆರೋಪಿಯ ಸಹಚರರ ಮೇಲೆ ನಿಗಾವಹಿಸಲಾಗಿದೆ ಎಂದು ಶಂಕರ ವಲಯ ಅರಣ್ಯಾಧಿಕಾರಿ ಪತ್ರಿಕಾ ಪ್ರಕಟಣೆ ಮ‌ೂಲಕ ತಿಳಿಸಿದ್ದಾರೆ.

ಈ ದಾಳಿಯಲ್ಲಿ ಶಂಕರ ವಲಯದ ಉಪ ವಲಯ ಅರಣ್ಯಾಧಿಕಾರಿಗಳಾದ ನರೇಂದ್ರಕುಮಾರ್.ಬಿ.ಜೆ., ಉಮೇಶ್ ನಾಯ್ಕ ಎಸ್ ಮತ್ತು ಗಸ್ತು ಅರಣ್ಯಪಾಲಕರಾದ ಅವಿನಾಶ್,ಜಿ, ಚಲ್ವಮಣಿ.ಎಂ, ಮಲ್ಲಪ್ಪ ಹರಿಜನ ಮತ್ತು ಅರಣ್ಯ ವೀಕ್ಷಕರಾದ ಬಿ.ಪಿ.ಮಂಜುನಾಥ ಹಾಗೂ ವಾಹನಚಾಲಕ ಲಿಂಗನಾಯ್ಕ ಪಾಲ್ಗೊಂಡಿದ್ದರು.

Malnad Times

Recent Posts

BIG BREAKING NEWS ; ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…

1 hour ago

28 ಸ್ಥಾನ ಗೆಲ್ಲದಿದ್ದರೆ ಅಪ್ಪ, ಮಗ ರಾಜೀನಾಮೆ ಕೊಡ್ತಾರಾ…? ಬೇಳೂರು

ರಿಪ್ಪನ್‌ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…

14 hours ago

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

17 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

17 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

22 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

24 hours ago