Categories: ShivamoggaSoraba

ವಿಜೃಂಭಣೆಯಿಂದ ಸಂಪನ್ನಗೊಂಡ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿ ಮಹಾರಥೋತ್ಸವ

ಸೊರಬ : ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಚಂದ್ರಗುತ್ತಿ ಶ್ರೀ ರೇಣುಕಾಂಬ ದೇವಿಯ ಜಾತ್ರಾ ಮಹೋತ್ಸವದ ಅವಭ್ರುಥೋತ್ಸವ ಓಕಳಿ ಉತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಮಂಗಳವಾರ ವಿಜೃಂಭಣೆಯಿಂದ ಸಂಪನ್ನಗೊಂಡಿತು.

ದೇವಾಲಯದಿಂದ ಶ್ರೀ ರೇಣುಕಾಂಬ ದೇವಿಯ ಪಲ್ಲಕ್ಕಿ ಉತ್ಸವದ ಮೆರವಣಿಗೆಯು ಓಕಳಿ ಕಟ್ಟೆಗೆ ತೆರಳಿ ಭಕ್ತರ ಸಮೂಹದಲ್ಲಿ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು. ಕುಂಕುಮದ ನೀರು ಎರಚುವುದರ ಮೂಲಕ ಓಕಳಿ ಆಡಿದರು. ಭಕ್ತರು ಚಂದ್ರಗುತ್ಯಮ್ಮ ನಿನ್ನಾಲ್ಕು ಉದೋ.. ಉದೋ… ಎಲ್ಲಮ್ಮ ನಿನ್ನಾಲ್ಕು ಉದೋ… ಉದೋ… ಎಂಬ ಘೋಷಣೆಯೊಂದಿಗೆ ಭಕ್ತಿ ಸ್ಮರಣೆಯಲ್ಲಿ ಮಿಂದೆದ್ದರು.

ಜಾತ್ರಾ ಮಹೋತ್ಸವದ ಮೂರನೇ ದಿನದ ಅವಭ್ರುಥೋತ್ಸವ ಓಕಳಿಗೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ವಿ.ಎಲ್ ಶಿವಪ್ರಸಾದ್ ಚಾಲನೆ ನೀಡಿದರು.

ನಂತರ ಶ್ರೀ ರೇಣುಕಾಂಬ ದೇವಿ ಪಲ್ಲಕ್ಕಿ ಉತ್ಸವ ಮೆರವಣಿಗೆ ಗ್ರಾಮದ ಮಂಗಳಾರತಿ ಕಟ್ಟೆ, ಹರೀಶಿ ರಸ್ತೆ, ಮುಖ್ಯ ರಸ್ತೆ ಮಾರ್ಗವಾಗಿ ಸುಂದರವಾಗಿ ಪುಷ್ಪಗಳಿಂದ ಅಲಂಕರಿಸಿದಂತಹ ನಾಲ್ಕು ಕಾಲು ಮಂಟಪದಲ್ಲಿ ಸಿಂಹಾಸನದ ಮೇಲೆ ಶ್ರೀ ದೇವಿ ಉತ್ಸವ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಭಕ್ತರು ಹಣ್ಣು ಕಾಯಿ ಸೇವೆ ಸೇರಿದಂತೆ ವಿವಿಧ ರೀತಿಯ ಹರಕೆ ಸೇವೆಗಳನ್ನು ತೀರಿಸಿದರು.

ಬುಧವಾರ ದೇವಾಲಯದಲ್ಲಿ ತುಲಾಭಾರ ಸೇವೆ ಸೇರಿದಂತೆ ವಿವಿಧ ವಗೈರ ಹರಕೆ ಮತ್ತು ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದವು.

ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿಯ ಮಹಾರಥೋತ್ಸವ ವಿಜೃಂಭಣೆಯಿಂದ ಜರುಗಿದ್ದು, ಭಕ್ತರಿಗೆ ಮೂಲಸೌಕರ್ಯಗಳನ್ನು‌ ಒದಗಿಸಲಾಗಿತ್ತು. ಭಕ್ತರಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಕ್ರಮ ಕೈಗೊಳ್ಳಲಾಗಿತ್ತು. ಶ್ರೀ ದೇವಿಯ ಜಾತ್ರಾ ಮಹೋತ್ಸವಕ್ಕೆ ತಾಲೂಕು ಆಡಳಿತ, ಸ್ಥಳೀಯ ಗ್ರಾಪಂ ಸೇರಿದಂತೆ ವಿವಿಧ ಸಂಘ ಸಂಸ್ಥೆಯವರು ಸಹಕಾರ ನೀಡಿದರು. ಪೊಲೀಸ್ ಇಲಾಖೆಯಿಂದ ಬಿಗಿ ಬದೋಬಸ್ತ್ ವ್ಯವಸ್ಥೆ ಕಲ್ಪಿಸಿ ಯಾವುದೇ ಅಹಿತಕರ ಘಟನೆಗೆ ಅಸ್ಪದ ನೀಡಲಿಲ್ಲ. ಜಾತ್ರಾ ಮಹೋತ್ಸವದ ಯಶಸ್ವಿಗೆ ಕಾರಣರಾಗಿ ಪ್ರತ್ಯೇಕವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು.
– ವಿ.ಎಲ್. ಶಿವಪ್ರಸಾದ್, ಕಾರ್ಯನಿರ್ವಹಣಾ ಅಧಿಕಾರಿ, ಶ್ರೀ ರೇಣುಕಾಂಬ ದೇವಸ್ಥಾನ

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

10 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

14 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

14 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

16 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

17 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

24 hours ago