ವಿದ್ಯಾನಿಧಿಗೆ ಶಿವಮೊಗ್ಗದಲ್ಲಿ ನಾಳೆ ಅಧಿಕೃತ ಚಾಲನೆ ; ಬಿ‌.ಜಿ ನಾಗರಾಜ್

ಹೊಸನಗರ : ಕಾಂಗ್ರೆಸ್ ಪಕ್ಷವು ವಿಧಾನಸಭಾ ಚುನಾವಣಾ ಪೂರ್ವದಲ್ಲಿ ನೀಡಿರುವ 5 ಭರವಸೆಯಲ್ಲಿ ಅಧಿಕಾರಕ್ಕೆ ಬಂದ ನಂತರ ಈಗಾಗಲೇ 4 ಭರವಸೆಯನ್ನು ಈಡೇರಿಸಿದ್ದು ಜ.12 ರ ಶುಕ್ರವಾರದಂದು ವಿದ್ಯಾವಂತ ಯುವಕರಿಗೆ ಯುವನಿಧಿಯನ್ನು ಜಾರಿಗೊಳಿಸಲು ರಾಜ್ಯ ಸರ್ಕಾರವು ಮುಂದಾಗಿದ್ದು, ಇದಕ್ಕೆ ಅಧಿಕೃತವಾಗಿ ಶಿವಮೊಗ್ಗದಲ್ಲಿ ಚಾಲನೆ ನೀಡಲಾಗುವುದು ಎಂದು ತಾಲ್ಲೂಕು ಬ್ಲಾಕ್ ಕಾಂಗ್ರೇಸ್ ಅಧ್ಯಕ್ಷ ಬಿ.ಜಿ ನಾಗರಾಜ್ ತಿಳಿಸಿದರು.

ಪಟ್ಟಣದ ಕಾಂಗ್ರೇಸ್ ಕಛೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ನುಡಿದಂತೆ ನಡೆವ ಸರ್ಕಾರವೆಂದರೆ ಅದು ಕಾಂಗ್ರೆಸ್ ಪಕ್ಷ. ಈ ಹಿಂದೆ ರಾಜ್ಯದ ಜನತೆಗೆ ನೀಡಿರುವ 5 ಭರವಸೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ ಯೋಜನೆ, ಅನ್ನಭಾಗ್ಯ ಯೋಜನೆಗಳನ್ನು ಈಗಾಗಲೇ ಜಾರಿಗೊಳಿಸಿದ್ದು, ಈಗಾಗಲೇ ರಾಜ್ಯದ ಅನೇಕರಿಗೆ ಈ ಯೋಜನೆ ಸಹಕಾರಿಯಾಗಿದೆ. ಇವುಗಳಲ್ಲಿ ಮತ್ತೊಂದಾದ ಯುವ ನಿಧಿ ಯೋಜನೆಯು ಜ.12ರ ಶುಕ್ರವಾರದಂದು ಸ್ವಾಮಿ ವಿವೇಕಾನಂದರ ಜನ್ಮದಿನದಂದು ವಿದ್ಯಾವಂತ ಯುವಕರಿಗಾಗಿ ಯುವನಿಧಿಯನ್ನು ಜಾರಿಗೊಳಿಸಲು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಸಚಿವರು, ಶಾಸಕರು, ಕಾಂಗ್ರೆಸ್ ಮುಖಂಡರಿಂದ ಇದಕ್ಕೆ ಅಧಿಕೃತವಾಗಿ ಶಿವಮೊಗ್ಗದಲ್ಲಿ ಚಾಲನೆ ನೀಡಲಾಗುವುದು ಎಂದರು. 

ಬಿಪಿಎಲ್ ಪಡಿತರರಿಗೆ 10 ಕೆ ಜಿ ಉಚಿತ ಅಕ್ಕಿ ನೀಡುವ ಯೋಜನೆಯಲ್ಲಿ 5 ಕೆ ಜಿ ಅಕ್ಕಿ ಲಭ್ಯವಿರದ ಕಾರಣ ಬಿ ಪಿ ಎಲ್ ಪಡಿತರದಾರರ ಖಾತೆಗೆ 5 ಕೆ ಜಿ ಗೆ ತಗಲುವ ಮೊತ್ತವನ್ನು ನೇರವಾಗಿ ಅವರ ಖಾತೆಗೆ ಜಮಾ ಮಾಡಲಾಗುತ್ತಿದ್ದು, ಬಾಡಿಗೆ ಅಥವಾ ಸ್ವಂತ ಮನೆಯುಳ್ಳವರಿಗೆ ಉಚಿತ ವಿದ್ಯುತ್, ಮಹಿಳೆಯರು ರಾಜ್ಯದಲ್ಲಿ ಸರ್ಕಾರಿ ಬಸ್‌ನಲ್ಲಿ ಯಾವುದೇ ಸ್ಥಳಕ್ಕೆ ಹೋದರು ಉಚಿತ ಪ್ರಯಾಣ, ಮನೆಯೊಡತಿಗೆ ಗೃಹಲಕ್ಷ್ಮೀ ಯೋಜನೆಯಡಿ 2000 ರೂ. ಪ್ರತಿ ಮಾಸಿಕ ನೀಡಲಾಗುತ್ತಿದೆ. ಕೊನೆಯದಾಗಿ ಯುವನಿಧಿಯನ್ನು ಜ.12ರ ಶುಕ್ರವಾರದಂದು ವಿದ್ಯಾವಂತ ಯುವಕರಿಗೆ ಯುವನಿಧಿಯನ್ನು ಜಾರಿಗೊಳಿಸಲು ಮುಂದಾಗಿದ್ದು, ಇದಕ್ಕೆ ಅಧಿಕೃತವಾಗಿ ಶಿವಮೊಗ್ಗದಲ್ಲಿ ಚಾಲನೆ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯುರವರು ರಾಜ್ಯದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಸೇರಿದಂತೆ ಪಕ್ಷದ ಅನೇಕ ಮುಖಂಡರು ಆಗಮಿಸಿ ಈ ಯೋಜನೆಗೆ ಚಾಲನೆ ನೀಡಲಿದ್ದಾರೆ. ಈ ಯೋಜನೆಯಿಂದ ಪ್ರಸಕ್ತ ಸಾಲಿನ ಡಿಪ್ಲೋಮಾ ವಿದ್ಯಾರ್ಥಿಗಳಿಗೆ, ಪದವಿ ಪಡೆದ ವಿದ್ಯಾರ್ಥಿಗಳಿಗೆ 6 ತಿಂಗಳು ಉದ್ಯೋಗವಿಲ್ಲದವರಿಗೆ ಈ ಯೋಜನೆಯು ಲಾಭವಾಗಲಿದೆ. ಆದ್ದರಿಂದ ಶುಕ್ರವಾರದಂದು ನಡೆಯುವ ಈ ಕಾರ್ಯಕ್ರಮಕ್ಕೆ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ಆಗಮಿಸಲಿರುವ ಪಕ್ಷದ ಮುಖಂಡರಿಗೆ, ಕಾರ್ಯಕರ್ತರಿಗೆ, ಪಕ್ಷದ ಅಭಿಮಾನಿಗಳಿಗೆ ಹಾಗೂ ಸಾರ್ವಜನಿಕರಿಗೆ ಬಸ್‌ಗಳ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದರು. 

ಈ ಸಂದರ್ಭದಲ್ಲಿ ಪಪಂ ಸದಸ್ಯ ಅಶ್ವಿನಿ ಕುಮಾರ್, ಶಾಹಿನಾ ನಾಸೀರ್, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಮಹಾಬಲರಾವ್, ಟೌನ್ ಘಟಕದ ಮಾಜಿ ಅಧ್ಯಕ್ಷ ಬಾಬು ಕಾಮತ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಚಂದ್ರಮೌಳಿ, ಸದಾಶಿವ ಶ್ರೇಷ್ಠಿ, ಕೋರ್ ಕಮಿಟಿ ಸದಸ್ಯಎಂ.ಪಿ.ಸುರೇಶ್, ಟೌನ್ ಮಹಿಳಾ ಘಟಕದ ಅಧ್ಯಕ್ಷೆ ನೇತ್ರಾ, ಅಲ್ಪ ಸಂಖ್ಯಾತ ಮುಖಂಡ ಇಕ್ಬಾಲ್ ಅನ್ಸರ್, ಚಂದ್ರಕಲಾ ನಾಗರಾಜ್, ನೋರ ಮೆಟಲ್ಡಾ ಸಿಕ್ವೇರಾ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

Malnad Times

Recent Posts

ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿ ಪರ ಮತಯಾಚಿಸಿದ ಮೋದಿ ಹೆಣ್ಣು ಮಕ್ಕಳ ಕ್ಷಮೆ ಕೇಳಬೇಕು ; ರಾಹುಲ್ ಗಾಂಧಿ

ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…

3 hours ago

ಅಪಾರ ಭಕ್ತ ಸಮೂಹದೊಂದಿಗೆ ಅದ್ಧೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀ ಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ

ರಿಪ್ಪನ್‌ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…

3 hours ago

ಇನ್ನೊಬ್ಬ ಈಶ್ವರಪ್ಪ ಇದ್ದಾರೆ ಎಚ್ಚರ…!

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ನಗರದಲ್ಲಿ ಮತಯಾಚನೆ ನಡೆಸಿದರು. ನಗರದ ಶಾಹಿ ಗಾರ್ಮೆಂಟ್ಸ್, ಟೊಯೋಟಾ…

8 hours ago

ಕೆ.ಎಸ್. ಈಶ್ವರಪ್ಪ ಚುನಾವಣಾ ಕಚೇರಿ ಮುಂದೆ ವಾಮಾಚಾರ

ಶಿಕಾರಿಪುರ: ಪಕ್ಷೇತರ ಅಭ್ಯರ್ಥಿಯಾಗಿರುವ ಕೆ.ಎಸ್.ಈಶ್ವರಪ್ಪ ಅವರ ಶಿಕಾರಿಪುರದ ಚುನಾವಣಾ ಕಚೇರಿ ಮುಂದೆ ವಾಮಾಚಾರ ನಡೆದಿರುವುದು ಬೆಳಕಿಗೆ ಬಂದಿದ್ದು ಈ ಕುರಿತು ಈಶ್ವರಪ್ಪ…

10 hours ago

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

23 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

1 day ago