ವಿದ್ಯಾರ್ಥಿಗಳಲ್ಲಿ ಶಿಸ್ತು ಸಮಯಪಾಲನೆ, ವಿದ್ಯಾಭ್ಯಾಸದ ಮೂಲಕ ತಮ್ಮ ಪ್ರತಿಭೆ ಹೊರಹಾಕಬೇಕು ; ಸ್ವಾಮಿರಾವ್

ಹೊಸನಗರ: ವಿದ್ಯಾರ್ಥಿಗಳ ಭವಿಷ್ಯದ ದೃಷ್ಠಿಯಿಂದ ಶಿಸ್ತು ಸಮಯ ಪರಿಪಾಲನೆ ಹಾಗೂ ವಿದ್ಯಾಭ್ಯಾಸದ ಮೂಲಕ ತಮ್ಮ ಪ್ರತಿಭೆಯನ್ನು ಹೊರ ಹಾಕಬೇಕೆಂದು ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಸ್ವಾಮಿರಾವ್‌ ಹೇಳಿದರು

ಪಟ್ಟಣದ ಗಾಯತ್ರಿ ಮಂದಿರದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭವನ್ನು ಏರ್ಪಡಿಸಲಾಗಿದ್ದು ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾವೆಲ್ಲರೂ ಓದುವಾಗ ಮನೆ-ಮನೆಗಳಲ್ಲಿ ಕಷ್ಟಕರವಾದ ಕಾಲವಿತ್ತು. ಒಂದು ಹೊತ್ತು ಊಟಕ್ಕೂ ತೊಂದರೆಯಾಗಿತ್ತು ಆದರೆ ಈಗ ಕಾಲೇಜ್‌ಗಳಿಗೆ ಬರುವ ಮನೆ ಕಡೆಯಿಂದ ಯಾವುದೆ ತೊಂದರೆಯಿದ್ದಂತೆ ಕಾಣುವುದಿಲ್ಲ ತಂದೆ-ತಾಯಿಯರು ಹಗಲು-ರಾತ್ರಿ ಎನ್ನದೇ ಕಷ್ಟಪಟ್ಟು ದುಡಿದು ಕಾಲೇಜ್‌ಗಳಿಗೆ ಕಳುಹಿಸುತ್ತಾರೆ. ಅವರ ಕಷ್ಟಗಳನ್ನು ಮನಗೊಂಡು ನಾನು ಈ ಸಮಾಜದಲ್ಲಿ ಒಳ್ಳೆಯ ವ್ಯಕ್ತಿಯಾಗಿ ಬಾಳಿ ತೋರಿಸಬೇಕೆಂದು ಪ್ರತಿಯೊಬ್ಬ ವಿದ್ಯಾರ್ಥಿ ವಿದ್ಯಾರ್ಥಿನೀಯರು ದೃಢ ಸಂಕಲ್ಪಮಾಡಿಕೊಂಡು ಓದಬೇಕು ಎಂದರು.


ಮೊಬೈಲ್ ಹುಚ್ಚು ಬಿಡಿ, ಓದುವ ಕಡೆ ಗಮನ ಹರಿಸಿ:
ನಾವೆಲ್ಲರೂ ಓದುವಾಗ ಮೊಬೈಲ್ ಇರಲಿಲ್ಲ ಆದರೆ ಇತ್ತೀಚಿನ ದಿನಗಳಲ್ಲಿ ಮನೆಯಲ್ಲಿ ಊಟ ಮಾಡಲು ಅಕ್ಕಿ ಇಲ್ಲದಿದ್ದರೂ ಪ್ರತಿಯೊಬ್ಬರ ಮನೆಗಳಲ್ಲಿ ಎರಡ್ಮೂರು ಮೊಬೈಲ್‌ಗಳಿವೆ. ಪ್ರತಿ ನಿಮಿಷಕ್ಕೊಮ್ಮೆ ಅದನ್ನು ನೋಡುತ್ತಿರಬೇಕು, ಮೆಸೇಜ್ ಕಳುಹಿಸುತ್ತಿರಬೇಕು, ಮೊಬೈಲ್ ಬೇಕು ಆದರೆ ಮೊಬೈಲ್‌ನಿಂದ ಉಪಯೋಗ ಪಡೆದುಕೊಳ್ಳಿ ಅದನ್ನು ಬಿಟ್ಟು ಅದರ ಹುಚ್ಚು ಹಿಡಿಸಿಕೊಂಡರೆ ಮುಂದಿನ ದಿನದಲ್ಲಿ ನೀವು ಹುಚ್ಚರಾಗುವ ಜೊತೆಗೆ ನಿಮ್ಮ ಮುಂದಿನ ಜೀವನವನ್ನು ನಾಶ ಮಾಡುತ್ತದೆ ನಿಮ್ಮ ತಂದೆ-ತಾಯಿಯರು ಕಷ್ಟ ಪಟ್ಟಿದ್ದಕ್ಕೂ ಪ್ರಯೋಜನವಿಲ್ಲ ನಿಮ್ಮ ಜೊತೆಗೆ ನಿಮ್ಮ ತಂದೆ-ತಾಯಿಯರನ್ನು ಅಕ್ಕ-ತಂಗಿಯರನ್ನು ಅಣ್ಣ-ತಮ್ಮಂದಿರನ್ನು ಈ ಮೊಬೈಲ್ ಬಲಿ ತೆಗೆದುಕೊಳ್ಳುವುದರಿಂದ ಮೊಬೈಲ್ ಹುಚ್ಚು ಬಿಟ್ಟು ಓದುವ ಕಡೆಗೆ ಗಮನ ಹರಿಸಿ ಎಂದರು.

ಈ ಕಾರ್ಯಕ್ರಮವನ್ನು ಶಾಸಕರಾದ ಬೇಳೂರು ಗೋಪಾಲಕೃಷ್ಣರವರು ಉದ್ಘಾಟಿಸಿ ಮಾತನಾಡಿ, ಮುಂದಿನ ಭವಿಷ್ಯದಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಮಾತನಾಡಿದರು.


ಈ ಕಾರ್ಯಕ್ರಮದಲ್ಲಿ ಪದವಿ ಪೂರ್ವ ಕಾಲೇಜಿನ ಸಿಡಿಸಿ ಕಮಿಟಿಯ ಉಪಾಧ್ಯಕ್ಷರಾದ ಎಂ.ಪಿ ಸುರೇಶ್‌ ನಮ್ಮ ಕಾಲೇಜಿನ ಮಕ್ಕಳು ರಾಜ್ಯ ರಾಷ್ಟ್ರಮಟ್ಟದವರೆಗೆ ಹೋಗಿ ಬಹುಮಾನ ತಂದಿದ್ದಾರೆ. ಇವರನ್ನು ಪ್ರಶಂಶಿಸಬೇಕು. ಪ್ರತಿವರ್ಷ ನಮ್ಮ ಕಾಲೇಜಿಗೆ ಉತ್ತಮ ಫಲಿತಾಂಶ ಬರುತ್ತಿದೆ. ಇನ್ನೂ ಹೆಚ್ಚಿನ ರೀತಿಯಲ್ಲಿ ಫಲಿತಾಂಶ ಬರುವಂತೆ ವಿದ್ಯಾರ್ಥಿಗಳು ಉಪನ್ಯಾಸಕರು ನಾವು ನೀವು ಹೋರಾಟ ನಡೆಸಬೇಕಾಗಿದೆ ಅದಕ್ಕಾಗಿ ಎಲ್ಲ ರೀತಿಯ ಪ್ರಯತ್ನ ನಡೆಯುತ್ತಿದೆ ಎಂದರು.

ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಏರ್ಪಡಿಸಲಾಗಿದ್ದು ಒಂದು ಸುಂದರ ಕಾರ್ಯಕ್ರಮವಾಗಿ ಹೊರಹೊಮ್ಮಿತು.
ಈ ಕಾರ್ಯಕ್ರಮದಲ್ಲಿ ಉಪ ನಿರ್ದೇಶಕರಾದ ಬಿ.ಕೃಷ್ಣಪ್ಪ, ರಿಪ್ಪನ್‌ಪೇಟೆ ಕಾಲೇಜಿನ ಪ್ರಾಂಶುಪಾಲ ಮಂಜುನಾಥ್, ದೈಹಿಕ ಶಿಕ್ಷಣ ಇಲಾಖೆಯ ಬಾಲಚಂದ್ರರಾವ್, ಸ್ಫೋಟ್ಸ್ ಕ್ಲಬ್ ಅಧ್ಯಕ್ಷ ಗುಬ್ಬಿಗಾ ಅನಂತರಾವ್, ದಾಮೋದರ ಶೆಣೈ, ಕೆ.ಟಿ ಶ್ರೀಧರ್, ಅಶೋಕಕುಮಾರ್, ಗಣಪತಿ, ಶಿವಕುಮಾರ್, ರವಿ, ಗಣೇಶ್, ಮಾಂತೇಶ್, ಸೀಮಾ, ಮೇಘನಾ, ಅರ್ಪಿತ ಸುಮಾ, ರೂಪ, ನಂದಿತಾ ಸಂತೋಷ್, ಟೀಕೇಶ್ ಡೇಲ್‌ವಿನ್, ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷೆ ಗುಲಾಬಿ ಮರಿಯಪ್ಪ, ಸದಸ್ಯೆ ಕೃಷ್ಣವೇಣಿ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

9 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

13 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

14 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

16 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

16 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

23 hours ago