ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ವಿ.ಎ.ಗಳಿಂದ ಶಾಸಕರಿಗೆ ಮನವಿ

ಹೊಸನಗರ: ತಾಲ್ಲೂಕಿನ ಗ್ರಾಮ ಆಡಳಿತಾಧಿಕಾರಿಗಳಿಗೆ ಸೂಕ್ತ ಕೊಠಡಿಗಳಿಲ್ಲ ಇತ್ತೀಚಿನ ದಿನಗಳಲ್ಲಿ ಎಲ್ಲ ವ್ಯವಹಾರ ದಾಖಲೆಗಳು ಕಂಪ್ಯೂಟರ್ ದಾಖಲೆಗಳೇ ಆಗಿರುವುದರಿಂದ ಕಂಪ್ಯೂಟರ್ ಹಾಗೂ ಇತರೆ ಬೇಕಾಗುವ ಸಲಕರಣೆಗಳನ್ನು ಸರ್ಕಾರದ ವತಿಯಿಂದ ನೀಡಬೇಕೆಂದು ಹೊಸನಗರ ತಾಲ್ಲೂಕಿನ ಗ್ರಾಮ ಆಡಳಿತಾಧಿಕಾರಿಗಳು ಹೊಸನಗರ-ಸಾಗರ ಕ್ಷೇತ್ರದ ಶಾಸಕರಾದ ಬೇಳೂರು ಗೋಪಾಲಕೃಷ್ಣ ಹಾಗೂ ತೀರ್ಥಹಳ್ಳಿ-ಹೊಸನಗರ ಕ್ಷೇತ್ರದ ಶಾಸಕರಾದ ಆರಗ ಜ್ಞಾನೇಂದ್ರರವರಿಗೆ ಮನವಿ ಪತ್ರ ನೀಡಿದರು.

ಮನವಿ ಪತ್ರದಲ್ಲಿ, ನಾವು ಪ್ರತಿನಿತ್ಯ ಸಾರ್ವಜನಿಕರೊಂದಿಗೆ ಹಾಗೂ ಜನಪ್ರತಿನಿಧಿಗಳೊಂದಿಗೆ ನಿಕಟ ಸಂಪರ್ಕದಲ್ಲಿದ್ದುಕೊಂಡು ಸರ್ಕಾರ ಹಾಗೂ ಹಿರಿಯ ಅಧಿಕಾರಿಗಳ ಆದೇಶ ಹಾಗೂ ಸೂಚನೆಯನ್ವಯ ನಮ್ಮಗಳ ಕರ್ತವ್ಯ ನಿರ್ವಹಣೆ ಮಾಡುತ್ತಾ ಬಂದಿರುತ್ತೇವೆ. ಇಂದು ಕರ್ತವ್ಯ ನಿರ್ವಹಣಾ ಹಂತದಲ್ಲಿ ಗ್ರಾಮ ಆಡಳಿತಾಧಿಕಾರಿಗಳಾದ ನಾವುಗಳು ಮೂಲಭೂತ ಸೌಕರ್ಯ ಇಲ್ಲದೇ ಹಲವು ಸಮಸ್ಯೆಗಳನ್ನು ಎದುರಿಸುತ್ತಾ ನೂರಕ್ಕೆ ಪ್ರತಿಶತ 50ರಷ್ಟು ಕಾರ್ಯವನ್ನು ಸಂಯೋಜನೆ ಫ್ರೂಟ್ ತಂತ್ರಾಂಶ ಹಾಗೂ ಇ-ಜನ್ಮ ಒಳಗೊಂಡಂತೆ ತಾಂತ್ರಿಕವಾಗಿ ತಂತ್ರಾಂಶಗಳ ಮೂಲಕ ನಮ್ಮಗಳ ಕರ್ತವ್ಯ ನಿರ್ವಹಣೆಯನ್ನು ಮಾಡುತ್ತಿರುತ್ತೇವೆ.

ನಮ್ಮಗಳ ಕರ್ತವ್ಯ ನಿರ್ವಹಣೆಗೆ ಅನುಕೂಲಕರ ರೀತಿಯಲ್ಲಿ ಉಲ್ಲೇಖ(2) ರ ಸರ್ಕಾರದ ಪತ್ರ ಅನುಸಾರ ತಮ್ಮ ಸ್ಥಳೀಯ ಪ್ರವೇಶಾವೃದ್ಧಿ ಯೋಜನೆಯಡಿ ಗ್ರಾಮ ಆಡಳಿತಾಧಿಕಾರಿಗಳಿಗೆ ಸೂಕ್ತ ಕೊಠಡಿ, ಕಂಪ್ಯೂಟರ್ ಒಳಗೊಂಡಂತೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಮೂಲಕ ನಮ್ಮಗಳ ಕೆಲಸ ನಿರ್ವಹಣೆಯ ಉತ್ಸಾಹವನ್ನು ಇಮ್ಮಡಿಗೊಳಿಸಿ ನಮ್ಮಗಳೆಲ್ಲರರಿಗೂ ಪ್ರೋತ್ಸಾಹಾತ್ಮಕ ಬೆಂಬಲ ನೀಡಬೇಕೆಂದು ಕೇಳಿಕೊಂಡಿದ್ದಾರೆ.

ಈ ಮನವಿ ಪತ್ರ ನೀಡುವ ಸಂದರ್ಭದಲ್ಲಿ ಹೊಸನಗರ ತಾಲ್ಲೂಕು ಗ್ರಾಮ ಆಡಳಿತಾಧಿಕಾರಿಗಳ ಸಂಘದ ಅಧ್ಯಕ್ಷ ಮಂಜುನಾಥ್, ಕಾರ್ಯದರ್ಶಿ ಕೌಶಿಕ್, ಇಂದಿರಾ, ಶೋಭಾ, ನವೀನ್‌ಕುಮಾರ್, ದೀಪು, ಜಾಗೃತಿ, ಯೋಗೇಶ್, ಸದಾಶಿವಪ್ಪ, ಸುನೀಲ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Malnad Times

Recent Posts

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

11 mins ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

55 mins ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

2 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

3 hours ago

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

5 hours ago

Election Boycott |  ಮೂಲಭೂತ ಸೌಲಭ್ಯದ ಕೊರತೆ, ಹೊಸನಗರ ತಾಲೂಕಿನ ಮತ್ತೊಂದು ಗ್ರಾಮದಲ್ಲಿ ಕೇಳಿಬಂದ ಚುನಾವಣೆ ಬಹಿಷ್ಕಾರದ ಕೂಗು !

ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ಈಚಲುಕೊಪ್ಪ ಗ್ರಾಮದಲ್ಲಿ ಮೂಲಭೂತ ಸೌಲಭ್ಯದ ಕೊರತೆಯಿಂದ ಚುನಾವಣೆ ಬಹಿಷ್ಕಾರದ ಕೂಗು ಕೇಳಿ ಬಂದಿದೆ.…

5 hours ago