ವಿವಿಧ ಬೇಡಿಕೆ ಈಡೇರಿಕೆಗಾಗಿ ನಾಳೆ ಡಿಎಸ್ಎಸ್ ಧರಣಿ
ಹೊಸನಗರ: ಹೊಸನಗರ (Hosanagara) ಪಟ್ಟಣದಲ್ಲಿನ ಕುಡಿಯುವ ನೀರಿನ ಸಮಸ್ಯೆ, ತಾಲೂಕಿನಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆ, ಹೆದ್ದಾರಿ ರಸ್ತೆ ನಿರ್ಮಾಣ ಕಾಮಗಾರಿಯಲ್ಲಿ ಆಗಿರುವ ನ್ಯೂನತೆ, ಬಹು ವರ್ಷಗಳಿಂದ ಖಾಸಗಿ ಕಟ್ಟಡದಲ್ಲಿ ಹಲವು ಸರ್ಕಾರಿ ಕಚೇರಿಗಳನ್ನು ನಡೆಸುತ್ತಿರುವ ಕ್ರಮ ವಿರೋಧಿಸಿ, ತಾಲೂಕಿನ ಗ್ರಾಮೀಣ ಭಾಗದ ಜನರಿಗೆ ಕುಡಿಯುವ ನೀರು ಒದಗಿಸುವ ಜೆಎಂಎಂ ಯೋಜನೆಯ ಕಳಪೆ ಗುಣಮಟ್ಟದ ಕಾಮಗಾರಿ ಸೇರಿದಂತೆ ವಿವಿಧ ಜಲ್ವಂತ ಸಮಸ್ಯೆಗಳ ಕುರಿತಂತೆ ಸರ್ಕಾರ ಗಮನ ಸೆಳೆಯುವ ಸಲುವಾಗಿ ಡಿ.21ರ ಗುರುವಾರ ಬೆಳಗ್ಗೆ ಇಲ್ಲಿನ ತಹಶೀಲ್ದಾರ್ ಕಚೇರಿ ಎದುರು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ(ರಿ)ಯ (DSS) ತಾಲೂಕು ಘಟಕ ಧರಣಿ ನಡೆಸಲು ಉದ್ದೇಶಿಸಿದ್ದು, ಧರಣಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ತಾಲೂಕು ಘಟಕದ ಸಂಚಾಲಕ ಬಿ.ಎಂ.ಪ್ರಕಾಶ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.