ಹೊಸನಗರ: ಜಲಜೀವನ್ ಮಿಷನ್ ಸೇರಿದಂತೆ ಸರ್ಕಾರದ ವಿವಿಧ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ತಾಲೂಕು ಪಂಚಾಯಿತಿ ಆಡಳಿತ ಲೋಪ ಎಸಗಿದೆ. ಈ ಕಾರಣಕ್ಕೆ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿಯನ್ನು ಕೂಡಲೇ ಅಮಾನತುಗೊಳಿಸಿ ತನಿಖೆ ಕೈಗೊಳ್ಳಬೇಕು ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಸಂಚಾಲಕ ಕೆ.ವಿ.ನಾಗರಾಜ ಅರಳಸುರಳಿ ಆರೋಪಿಸಿದ್ದಾರೆ.
ಅವರು ಮಂಗಳವಾರ ತಹಸೀಲ್ದಾರ್ ಕಛೇರಿಗೆ ಮನವಿ ಸಲ್ಲಿಸಿ, ಜಲಜೀವನ್ ಮಿಷನ್ ಯೋಜನೆಯಡಿ ನಿರ್ಮಿಸಿರುವ ಘಟಕಗಳಲ್ಲಿ ಈವರೆಗೂ ಫಿಲ್ಟರ್ ಅಳವಡಿಸಿಲ್ಲ. ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ದೃಷ್ಠಿಯಿಂದ ಕೈಗೊಂಡ ಯೋಜನೆಯು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಇಲಾಖೆಯ ಇಂಜಿನಿಯರ್ಗಳ ಬೇಜವಾಬ್ದಾರಿಯಿಂದ ಹಳ್ಳ ಹಿಡಿದಿದೆ. ಅಲ್ಲದೇ ಯೋಜನೆಯ ಅನುಷ್ಠಾನದಲ್ಲಿ ವ್ಯಾಪಕ ಭ್ರಷ್ಠಾಚಾರ ನಡೆದಿದೆ ಎಂದು ಆರೋಪಿಸಿದರು.
ಎನ್ಆರ್ಎಲ್ಎಂ ಯೋಜನೆಯಡಿ ಕಾರ್ಯನಿರ್ವಹಣಾಧಿಕಾರಿ ಅನಗತ್ಯವಾಗಿ ಹಸ್ತಕ್ಷೇಪ ನಡೆಸುತ್ತಿದ್ದಾರೆ. ಸಂಜೀವನಿ ಸ್ವಸಹಾಯ ಸಂಘಗಳ ಸದಸ್ಯರಿಂದ ಹಣ ವಸೂಲಿ ಮಾಡಲಾಗುತ್ತಿದೆ. ಹಲವು ಸಂಘಗಳಿಗೆ ಉದ್ದೇಶಪೂರ್ವಕವಾಗಿ ತಾಂತ್ರಿಕ ಸಹಕಾರ ನೀಡುತ್ತಿಲ್ಲ. ಇದರಿಂದ ಸಂಘದ ಸದಸ್ಯರಿಗೆ ಆರ್ಥಿಕ ನಷ್ಟ ಉಂಟಾಗಿದೆ ಎಂದು ದೂರಿದರು.
ತಾಲೂಕಿನಲ್ಲಿ ನರೇಗಾ ಯೋಜನೆಯ ಅನುಷ್ಠಾನ ಸಮರ್ಪಕವಾಗಿ ನಡೆಯುತ್ತಿಲ್ಲ. ವಯೋವೃದ್ಧರನ್ನು ಸಹ ಕಾಮಗಾರಿಗೆ ಬಳಸಿಕೊಳ್ಳಲಾಗುತ್ತಿದೆ. ಸರ್ಕಾರದ ವಸತಿ ಯೋಜನೆಗಳ ಫಲಾನುಭವಿಗಳ ಆಯ್ಕೆ ವೇಳೆ ಸರಕಾರದ ನಿಯಮಗಳನ್ನು ಉಲ್ಲಂಘಿಸಲಾಗಿದೆ. ಅಲ್ಲದೇ ತಮ್ಮ ಇಲಾಖೆಗೆ ಸಂಬಂಧಪಡದ ಇಲಾಖೆಗಳಲ್ಲಿಯೂ ಕಾರ್ಯನಿರ್ವಹಣಾಧಿಕಾರಿ ಹಸ್ತಕ್ಷೇಪ ಮಾಡುತ್ತಿದ್ದು, ಹಣ ನೀಡುವಂತೆ ಕಿರುಕುಳ ನೀಡುತ್ತಿರುವ ಆರೋಪಗಳು ಕೇಳಿಬಂದಿವೆ ಎಂದು ಆಪಾದಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಸಂಬಂಧಪಟ್ಟ ಜನಪ್ರತಿನಿಧಿಗಳು ಇದನ್ನು ಗಮನಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಲಿದೆ ಎಂದು ಅವರು ತಿಳಿಸಿದ ಅವರು, ಉಪತಹಸೀಲ್ದಾರ್ ಸುಧೀಂದ್ರಕುಮಾರ್ ಅವರಿಗೆ ಮನವಿ ಸಲ್ಲಿಸಿದರು.
ಈ ಮನವಿ ನೀಡುವ ಸಂದರ್ಭಲ್ಲಿ ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕ ಬಿ.ಎಂ ಪ್ರಕಾಶ್, ಪದಾಕಾರಿಗಳಾದ ಪ್ರಕಾಶ, ಅಣ್ಣಪ್ಪ, ಹರೀಶ ಮತ್ತಿತರರು ಇದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…