Categories: Shivamogga

ವಿಶ್ವೇಶ್ವರಯ್ಯ ಸೊಸೈಟಿ ಚುನಾವಣೆ, ಅಭ್ಯರ್ಥಿ ಬಗ್ಗೆ ಗಂಭೀರ ಆರೋಪ

ಶಿವಮೊಗ್ಗ: ಇಲ್ಲಿನ ಪ್ರತಿಷ್ಠಿತ ಸರ್.ಎಂ.ವಿಶ್ವೇಶ್ವರಯ್ಯ ಕೋ-ಆಪರೇಟಿವ್ ಸೊಸೈಟಿಯ ನಿರ್ದೇಶಕ ಮಂಡಳಿಯ ಚುನಾವಣೆ ನಾಳೆ ನಡೆಯಲಿದೆ. ಈ ಚುನಾವಣೆಯಲ್ಲಿ ಸೊಸೈಟಿಯ ಸುಮಾರು 3200 ಷೇರುದಾರರು ಮತ ಚಲಾಯಿಸಲಿದ್ದಾರೆ. ಈಗಾಗಲೇ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಷೇರುದಾರರ ಮನೆಗಳಿಗೆ ವೈಯಕ್ತಿಕವಾಗಿ ಮತ್ತು ತಂಡೋಪ ತಂಡವಾಗಿ ಭೇಟಿ ನೀಡಿ ಮತಯಾಚನೆ ನಡೆಸುತ್ತಿದ್ದಾರೆ.

ಈ ಸೊಸೈಟಿಯ ಪ್ರಸಕ್ತ ಆಡಳಿತ ಮಂಡಳಿಯಲ್ಲಿರುವ ನಿರ್ದೇಶಕರನೇಕರು ಒಂದು ಗುಂಪು ರಚಿಸಿಕೊಂಡು ಹಿಂದಿನಂತೆಯೇ ಈ ಬಾರಿಯೂ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಈ ಗುಂಪಿನಲ್ಲಿರುವ ಓರ್ವ ಅಭ್ಯರ್ಥಿಯ ಬಗ್ಗೆ ವಿಶ್ವೇಶ್ವರಯ್ಯ ಸೊಸೈಟಿಯ ಷೇರುದಾರರ ವಲಯದಲ್ಲಿ ಆಕ್ಷೇಪಾರ್ಹ ಮಾತುಗಳು ಕೇಳಿಬರುತ್ತಿವೆ.

ಕಳೆದ ಅವಧಿಯಲ್ಲಿ ಈ ಸೊಸೈಟಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದವರೊಬ್ಬರಿಗೆ 2020ರಲ್ಲಿ ಬೆಳಕಿಗೆ ಬಂದಿದ್ದ ಬೆಂಗಳೂರಿನ ವಸಿಷ್ಠ ಸೌಹಾರ್ದ ಸೊಸೈಟಿಯ ಹಗರಣದ ತಳಕು ಹಾಕಲಾಗುತ್ತಿದೆ. ಇದಕ್ಕೆ ಕಾರಣ ಅವರು ವಸಿಷ್ಠ ಸಹಕಾರಿಯ ಅಧ್ಯಕ್ಷರಾಗಿದ್ದ ಕೆ.ಎನ್. ವೆಂಕಟನಾರಾಯಣ ಅವರ ಅಳಿಯ ಎಂಬುದು ಮತ್ತು ಅವರು ತಮ್ಮ ಮಾವನನ್ನು ವಿಶ್ವೇಶ್ವರಯ್ಯ ಸೊಸೈಟಿಗೆ ಆಹ್ವಾನಿಸಿ ಆಡಳಿತ ಮಂಡಳಿ ಮತ್ತು ಸಿಬ್ಬಂದಿಗೆ ಪಾಠ ಹೇಳಿಸಿದ್ದರು.

ವೆಂಕಟನಾರಾಯಣ ಅವರು 500 ಕೋಟಿಗೂ ಹೆಚ್ಚಿನ ಮೊತ್ತದ ಹಗರಣದಲ್ಲಿ ಆರೋಪಿಯಾಗಿ ಬಂಧಿಸಲ್ಪಟ್ಟಿದ್ದರು. ಈ ಹಗರಣದ ಬಗ್ಗೆ ಜಾರಿ ನಿರ್ದೇಶನಾಲಯ ಮತ್ತು ಸಿಬಿಐ ತನಿಖೆ ಕೂಡ ನಡೆಯುತ್ತಿದೆ.


ಪ್ರಸ್ತುತ ವಿಶ್ವೇಶ್ವರಯ್ಯ ಸೊಸೈಟಿ ಚುನಾವಣೆಗೆ ಹಾಲಿ ನಿರ್ದೇಶಕ ಮಂಡಳಿಯ ಗುಂಪಿನಲ್ಲಿರುವ ಆರೋಪಿಯಾದ ವೆಂಕಟನಾರಾಯಣ ಅವರ ಶಿವಮೊಗ್ಗ ಅಳಿಯ ಮೂರು ವರ್ಷದ ಹಿಂದೆ ವಸಿಷ್ಠ ಸಹಕಾರಿ ಹಗರಣ ಬೆಳಕಿಗೆ ಬಂದ ಸಂದರ್ಭದಲ್ಲಿಯೇ ಶಿವಮೊಗ್ಗದಲ್ಲಿ ಕಾಂಪ್ಲೆಕ್ಸ್ ನಿರ್ಮಾಣ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಬಿಐ ಯಾವುದೇ ಕ್ಷಣದಲ್ಲಿ ಇವರ ಮನೆ ಬಾಗಿಲು ತಟ್ಟಬಹುದು.

ಹೀಗಾಗಿ ಇಲ್ಲಿನ ವಿಶ್ವೇಶ್ವರಯ್ಯ ಸೊಸೈಟಿಗೂ ಮುಂದಿನ ದಿನಗಳಲ್ಲಿ ಕಳಂಕ ಬರಬಾರದು ಎಂದರೆ ಕಳಂಕಿತರ ಸಂಬಂಧಿಗಳು ಇಲ್ಲಿ ನಿರ್ದೇಶಕರಾಗಿ ಆಯ್ಕೆಯಾಗಬಾರದು ಎಂಬುದು ಕೆಲವು ಅಭ್ಯರ್ಥಿಗಳ ಅಭಿಪ್ರಾಯ ವಾಗಿದ್ದು, ಇದಕ್ಕೆ ಎಷ್ಟರಮಟ್ಟಿಗೆ ಪ್ರಾಧಾನ್ಯತೆ ಸಿಗುತ್ತದೆ ಎಂಬುದು ಫಲಿತಾಂಶದ ಬಳಿಕ ದೃಢಪಡಲಿದೆ.

Malnad Times

Recent Posts

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

6 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

7 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

14 hours ago

Rain Alert | ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…

14 hours ago