Categories: Shivamogga

ವೇದ ಬ್ರಹ್ಮ ವಿದ್ವಾನ್ ಅ.ಪ. ರಾಮಭಟ್ಟ್ ನಿಧನ

ಶಿವಮೊಗ್ಗ : ವೇದ ಬ್ರಹ್ಮ ಶಿವಮೊಗ್ಗ ನಗರದ ಆಧ್ಯಾತ್ಮಿಕ ಕ್ಷೇತ್ರದ ಕೊಂಡಿಯಾಗಿದ್ದ ವಿದ್ವಾನ್ ಅ.ಪ.ರಾಮಭಟ್ಟರು (73) ನಿನ್ನೆ ರಾತ್ರಿ ವಿಧಿವಶರಾದರು.


ಕೆಲವು ಕಾಲದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರು, ಅನಾರೋಗ್ಯದ ನಡುವೆಯೂ ನಿರಂತರ ಆಧ್ಯಾತ್ಮಿಕ ಚಟುವಟಿಕೆಗಳನ್ನು ನಡೆಸಿಕೊಂಡು ಬಂದಿದ್ದರು. ಶಿವಮೊಗ್ಗದ ಹೌಸಿಂಗ್ ಸೊಸೈಟಿಯಿಂದ ರವೀಂದ್ರ ನಗರದಲ್ಲಿ ನಿರ್ಮಾಣಗೊಂಡ ಪ್ರಸನ್ನ ಗಣಪತಿ ದೇವಸ್ಥಾನದ ಪ್ರಧಾನ ಅರ್ಚಕರಾಗಿ ಕಳೆದ 35 ವರ್ಷಗಳಿಂದ ವಿವಿಧ ಸಾಂಸ್ಕೃ ತಿಕ, ಧಾರ್ಮಿಕ, ಕಾರ್ಯಕ್ರಮಗಳನ್ನು ನಡೆಸುತ್ತಾ ಭಕ್ತರಿಗೆ ಧಾರ್ಮಿಕ, ಆಧ್ಯಾತ್ಮಿಕ ಸನ್ಮಾರ್ಗದ ಹಾದಿ ತೋರಿದ ದಿವ್ಯ ಚೇತನವಾಗಿದ್ದರು. ನಗರದ ಅನೇಕ ದೇವಾಲಯದ ಅರ್ಚಕರು ಅವರ ಗರಡಿಯಲ್ಲೇ ಪಳಗಿದ್ದು, ಅನೇಕ ಧಾರ್ಮಿಕ ಕಾರ್ಯಕ್ರಮಗಳ ಮುಂದಾಳತ್ವ ವಹಿಸಿದ್ದ ಆ.ಪ.ರಾಮಭಟ್ಟರು ಹಲವಾರು ಧಾರ್ಮಿಕ ಗುರುಗಳು ಮತ್ತು ದಿಗ್ಗಜರನ್ನು ರವೀಂದ್ರ ನಗರ ಗಣಪತಿ ದೇವಸ್ಥಾನಕ್ಕೆ ಕರೆಯಿಸಿ ಕಾರ್ಯಕ್ರಮಗಳನ್ನು ನಡೆಸುತ್ತಿದ್ದರು.ಶಿವಮೊಗ್ಗ ಭಜನಾ ಪರಿಷತ್ ಅಧ್ಯಕ್ಷರೂ ಸಹ ಆಗಿದ್ದರು.

ಧರ್ಮಶಾಸ್ತ್ರ, ವೇದಾಂಗ, ಪರಂಗತರಾಗಿದ್ದ ಅವರು ಸದಾ ಹಸನ್ಮುಖಿಯಾಗಿ ಅತ್ಯಂತ ಸರಳ ಜೀವನ ನಡೆಸುತ್ತ ಯಾವುದೇ ಆಸೆಗೆ ಒಳಗಾಗದೆ ತಮ್ಮ ಇಡೀ ಜೀವನವನ್ನು ಧರ್ಮ ಪ್ರಚಾರ ಹಾಗೂ ಹೋಮ, ಹವನ, ಜಪ- ತಪಗಳನ್ನು ಲೋಕಕಲ್ಯಾಣಾರ್ಥವಾಗಿ ನಡೆಸುತ್ತ ಮಾದರಿಯಾಗಿದ್ದರು.
2022 ರಲ್ಲಿ ಶ್ರೀ ಶನೈಶ್ವರ ಟ್ರಸ್ಟ್ ವತಿಯಿಂದ ಹರಿಹರ ಪೀಠದ ಶ್ರೀ ಸ್ವಯಂ ಪ್ರಕಾಶ ಸಚ್ಚಿದಾನಂದ ಸರಸ್ವತಿ ಮಹಾಸ್ವಾಮಿಗಳ ಸನ್ನಿಧಾನದಲ್ಲಿ‌ ಶ್ರೀ ವೇದ ನಾರಾಯಣಾನುಗ್ರಹ ಪ್ರಶಸ್ತಿ ಪ್ರಧಾನ ಮಾಡಲಾಗಿತ್ತು. ಹಲವಾರು ಸಂಘ ಸಂಸ್ಥೆಗಳು, ದೇವಾಲಯ ಸಮಿತಿಗಳು ಅ.ಪ.ರಾಮಭಟ್ಟರಿಗೆ ಅನೇಕ ಪ್ರಶಸ್ತಿ ನೀಡಿ ಗೌರವಿಸಿತ್ತು.


ಮೂಲತಃ ತೀರ್ಥಹಳ್ಳಿಯ ಅಂಬುತೀರ್ಥದವರಾದ ಅವರು, ಇತ್ತೀಚೆಗೆ ಶರಾವತಿ ನದಿಯ ಉಗಮ ಸ್ಥಾನವಾದ ಅಂಬುತೀರ್ಥದ ಜೀರ್ಣೋದ್ಧಾರಕ್ಕೆ ಶ್ರಮ ಪಟ್ಟಿದ್ದರು. ಪತ್ನಿ
ವಿಜಯಲಕ್ಷ್ಮಿ, ಪುತ್ರ ಶಂಕರ್‌ಭಟ್, ಸೊಸೆ, ಮೊಮ್ಮಕ್ಕಳನ್ನು ಅವರು ಅಗಲಿದ್ದು, ಶಿವಮೊಗ್ಗ ನಗರದ ಧಾರ್ಮಿಕ ಕ್ಷೇತ್ರಕ್ಕೆ ಅಪಾರ ನಷ್ಟವಾಗಿದೆ.

ಅವರ ನಿಧನಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಗೃಹ ಸಚಿವ ಆರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ ಸೇರಿದಂತೆ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು, ಹೌಸಿಂಗ್ ಕೋ ಆಪರೇಟಿವ್ ಸೊಸೈಟಿಯ ಆಡಳಿತ ಮಂಡಳಿ, ಶಿವಮೊಗ್ಗ ಜಿಲ್ಲಾ ವೈದಿಕ ಪರಿಷತ್, ಭಜನಾ ಪರಿಷತ್, ಜಿಲ್ಲಾ ಬ್ರಾಹ್ಮಣ ಮಹಾಸಭಾ, ಆರ್ಟ್ ಆಫ್ ಲಿವಿಂಗ್ ಶಿವಮೊಗ್ಗ ಸೇರಿದಂತೆ ಅನೇಕ ಸಂಘಟನೆಗಳು ತೀವ್ರ ಸಂತಾಪ ವ್ಯಕ್ತಪಡಿಸಿದೆ.

Malnad Times

Recent Posts

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ

ಮೋದಿ ಹೆಸರಿನಲ್ಲಿ ರಶೀದಿ ಪಡೆದು ಅಭಿಮಾನಿಯಿಂದ ಸಹಸ್ರನಾಮ ಅರ್ಚನೆ..... ಶೃಂಗೇರಿ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಫಿನಾಡು ವಿಶೇಷತೆಗಳಿಗೆ…

7 hours ago

Arecanut Today Price | ಏಪ್ರಿಲ್ 26ರ ಅಡಿಕೆ ರೇಟ್

ಹೊಸನಗರ : ಏ. 26 ಶುಕ್ರವಾರ ನಡೆದ ಹೊಸನಗರ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

17 hours ago

ಮೇ 02 ರಂದು ಶಿವಮೊಗ್ಗಕ್ಕೆ ರಾಹುಲ್ ಗಾಂಧಿ ಆಗಮನ

ಶಿವಮೊಗ್ಗ : ಮೇ 2ರಂದು ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ನಗರದ ಫ್ರೀಡಂ ಪಾರ್ಕ್‌ನಲ್ಲಿ ಗೀತಾಶಿವರಾಜ್‍ಕುಮಾರ್ ಬಹಿರಂಗ ಪ್ರಚಾರ ಮಾಡಲಿದ್ದಾರೆ ಎಂದು…

17 hours ago

ಲಕ್ಷಾಂತರ ಮತಗಳ ಅಂತರದಲ್ಲಿ ಗೆಲುವು ನನ್ನದೇ, 2ನೇ ಸ್ಥಾನಕ್ಕಾಗಿ ಬಿಜೆಪಿ, ಕಾಂಗ್ರೆಸ್ ಪೈಪೋಟಿ ಅಂದ್ರು ಈಶ್ವರಪ್ಪ

ರಿಪ್ಪನ್‌ಪೇಟೆ: ನನ್ನ ಪರವಾಗಿ ಹೋದ ಕಡೆಯಲೆಲ್ಲ ಬಿಜೆಪಿ ಮತ್ತು ಜೆಡಿಎಸ್ ಕಾಂಗ್ರೆಸ್ ಪಕ್ಷದ ಸಾಕಷ್ಟು ಕಾರ್ಯಕರ್ತರು ಹೆಚ್ಚು ಬೆಂಬಲ ವ್ಯಕ್ತಪಡಿಸುತ್ತಿದ್ದು…

18 hours ago

ಹಸೆಮಣೆ ಏರುವ‌ ಮುನ್ನ ಹಕ್ಕು ಚಲಾಯಿಸಿದ ವಧು

ಶೃಂಗೇರಿ : ಇಂದು ನಡೆದ ಮತದಾನದಲ್ಲಿ ತಾಲೂಕಿನ ಕೂತಗೋಡಿನಲ್ಲಿ ಹಸೆಮಣೆ ಏರುವ ಮುನ್ನ ಯುವತಿಯೊಬ್ಬಳು ಮತ ಚಲಾಯಿಸಲು ಅಲಂಕಾರಗೊಂಡೆ ಮತಗಟ್ಟೆಗೆ…

19 hours ago

ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ !

ಮತದಾನದ ವೇಳೆ ಬಿಜೆಪಿ ಕಾರ್ಯಕರ್ತರ ನಡುವೆಯೇ ಮಾರಾಮಾರಿ ನಡೆದ ಬಗ್ಗೆ ವರದಿಯಾಗಿದೆ. ಚಿಕ್ಕಮಗಳೂರು : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು…

19 hours ago