ವ್ಯಕ್ತಿ ಮೇಲೆ ದಾಳಿ ; ತಲೆಯಲ್ಲಿಯೇ ಸಿಕ್ಕಿಹಾಕಿಕೊಂಡ ಮಚ್ಚು !
ಶಿವಮೊಗ್ಗ : ಸ್ನೇಹಿತರ ಜೊತೆ ಊಟಕ್ಕೆ ತೆರಳಿದಾತನ ಮೇಲೆ ಮಚ್ಚಿನಿಂದ ದಾಳಿ ನಡೆಸಿರುವ ಘಟನೆ ನಗರದ ಹರಿಗೆ ಗ್ರಾಮದಲ್ಲಿ ನಡೆದಿದೆ. ಮಚ್ಚು ಬೀಸಿದ ಹೊಡೆತಕ್ಕೆ ಮಚ್ಚು ತಲೆಯಲ್ಲಿಯೇ ಸಿಕ್ಕಿಹಾಕಿಕೊಂಡಿದೆ. ಹಲ್ಲೆಗೊಳಗಾದವನ ಸ್ಥಿತಿ ಗಂಭೀರವಾಗಿದೆ.
ಬಾರ್ ಬೈಂಡಿಂಗ್ ಮೇಸ್ತ್ರಿ ಆಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್ (40) ಎನ್ನುವ ವ್ಯಕ್ತಿ ಹಲ್ಲೆಗೊಳಗಾದವರು. ಏಳು ಜನ ಸ್ನೇಹಿತರೊಡನೆ ಊಟಕ್ಕೆ ತೆರಳುತ್ತಿದ್ದ ಸಂದರ್ಭದಲ್ಲಿ. ಪರಿಚಯಸ್ಥನೊಬ್ಬ ಕರೆ ಮಾಡಿ ವಿಳಾಸ ಕೇಳಿದ್ದಾನೆ , ಪ್ರಶಾಂತ್ ತಾನು ಇರುವ ವಿಳಾಸವನ್ನ ತಿಳಿಸಿದ್ದಾನೆ. ವಿಳಾಸ ತಿಳಿಸಿದ ಬೆನ್ನಲ್ಲೇ ಸ್ಥಳಕ್ಕೆ ಬಂದಂತಹ ವ್ಯಕ್ತಿ ಏಕಾಏಕಿ ಮಚ್ಚಿನಿಂದ ದಾಳಿ ನಡೆಸಿದ್ದಾನೆ. ದಾಳಿ ನಡೆಸಿದ ಸಂದರ್ಭದಲ್ಲಿ ಮಚ್ಚು ಪ್ರಶಾಂತ್ ತಲೆಯಲ್ಲಿಯೇ ಸಿಕ್ಕಿಹಾಕಿಕೊಂಡಿದೆ.
ಕೂಡಲೇ ಗಂಭೀರ ಗಾಯಗೊಂಡ ಪ್ರಶಾಂತ್ ನನ್ನು ಜಿಲ್ಲಾ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದು ಬಂದಿದೆ. ಇನ್ನೂ ಪರಿಚಯವಿರುವ ವ್ಯಕ್ತಿಯಿಂದಲೇ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ.
ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು. ಪ್ರಕರಣ ದಾಖಲಾಗಿದೆ ಇನ್ನೂ ಗಾಯಗೊಂಡಿರುವ ಪ್ರಶಾಂತ್ ನ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ.