Categories: Shivamogga

ಶಕ್ತಿ ಯೋಜನೆಯಿಂದ ಶಕ್ತಿ ಕಳೆದುಕೊಳ್ಳಲಿವೆಯೇ 40 ವರ್ಷ ಹಳೆಯ ಟ್ಯಾಕ್ಸಿಗಳು ?

ಶಿವಮೊಗ್ಗ : ಕಾಂಗ್ರೆಸ್ ಸರ್ಕಾರದ ಶಕ್ತಿ ಯೋಜನೆಯಿಂದ 40 ವರ್ಷ ಹಳೆಯ ಟ್ಯಾಕ್ಸಿಗಳು ಶಕ್ತಿ ಕಳೆದುಕೊಳ್ಳುವ ಆತಂಕ ಎದುರಾಗಿದ್ದು ಟ್ಯಾಕ್ಸಿ ಚಾಲಕರು ಹಾಗೂ ಮಾಲೀಕರು ಮಹಿಳೆಯರಿಗೆ ಉಚಿತ ಬಸ್ ಟಿಕೆಟ್ ನೀಡುತ್ತಿರುವುದರಿಂದ ಬೀದಿಗೆ ಬರುವ‌ ಸ್ಥಿತಿ ನಿರ್ಮಾಣವಾಗಿದೆ.

ಹೌದು, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಚುನಾವಣೆಯಲ್ಲಿ ಘೋಷಣೆ ಮಾಡಿದ ಮಹಿಳೆಯರಿಗೆ ಉಚಿತ ಪ್ರಯಾಣ ನೀಡಿದ ಹಿನ್ನೆಲೆಯಲ್ಲಿ ಈ ಯೋಜನೆ ಖಾಸಗಿ ಟ್ಯಾಕ್ಸಿಗಳ ಮಾಲೀಕರು ಮತ್ತು ಚಾಲಕರ ಹೊಟ್ಟೆ ಮೇಲೆ ಹೊಡೆದಂತಾಗಿದೆ‌.

ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಹೆಚ್ಚಿನ ಸಂಖ್ಯೆಯ ಕಂಪನಿಗಳು, ಸಂಸ್ಥೆಗಳಿವೆ. ಇವುಗಳಲ್ಲಿ ಹೆಚ್ಚಿನ ಪಾಲು ಗಾರ್ಮೆಂಟ್ಸ್ಗಳಾಗಿವೆ. ಬಹುಪಾಲು ಮಹಿಳೆಯರು ಗಾರ್ಮೆಂಟ್ಸ್ಗಳಲ್ಲಿ ಕೆಲಸ ಮಾಡುತ್ತಾರೆ. ಕೆಲಸದ ಸಮಯಕ್ಕೆ ಸರಿಯಾಗಿ ತಲುಪಲು ಹೆಚ್ಚಿನ ಮಹಿಳೆಯರು ಇದೆ ಖಾಸಗಿ ಟ್ಯಾಕ್ಸಿಗಳ ಬಳಕೆ ಮಾಡುತ್ತಾರೆ. ಉಚಿತ ಬಸ್ ಪ್ರಯಾಣದಿಂದ ಖಾಸಗಿ ಟ್ಯಾಕ್ಸಿಗಳ ಮಾಲೀಕರು ಮತ್ತು ಚಾಲಕರು ಆರ್ಥಿಕ ಸಂಕಷ್ಟ ಎದುರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಸಂಚರಿಸಲು ಅನುಮತಿ ಪಡೆದ ಒಟ್ಟು 97 ಟ್ಯಾಕ್ಸಿಗಳಿದ್ದು, ಸದ್ಯಕ್ಕೆ 60 ಕ್ಕಿಂತ ಕಡಿಮೆ ಟ್ಯಾಕ್ಸಿಗಳು ಮಾತ್ರ ಓಡಾಟ ಮಾಡುತ್ತಿವೆ.
ಕೆಲವು ಟ್ಯಾಕ್ಸಿಗಳು ಕೊರೊನಾ ಕಾಲದಲ್ಲಿ ಆರ್ಥಿಕ ಸಂಕಷ್ಟ ಎದುರಿಸಲಾರದೆ ಸಂಚಾರ ನಿಲ್ಲಿಸಿದ್ದವು. ಕೆಲವು ಡಿಸೇಲ್ ಬೆಲೆ ಹೆಚ್ಚಳದ ಹೊರೆ ಹೊರಲಾರದೆ ರಸ್ತೆಗೆ ಇಳಿಸಿಲ್ಲ.
ಟ್ಯಾಕ್ಸಿ ಓಡಿಸುತ್ತಿದ್ದ ಹಲವರು ಜೀವನ ನಡೆಸಲು ಬೇರೆ ಕೆಲಸ ಹುಡುಕಿಕೊಂಡರು‌.

ಶಿವಮೊಗ್ಗದಿಂದ ಭದ್ರಾವತಿಗೆ ಟ್ಯಾಕ್ಸಿಯಲ್ಲಿ ಒಂದು ಟ್ರಿಪ್ನಲ್ಲಿ 10 ಜನರನ್ನು ಕರೆದೊಯ್ಯಲಾಗುತ್ತದೆ. ಈ ಮಾರ್ಗದಲ್ಲಿ ಒಂದು ಟ್ರಿಪ್ ಸಂಚಾರ ಮಾಡಲು ಟ್ಯಾಕ್ಸಿಗೆ 4 ಲೀ. ಡಿಸೇಲ್ ಬೇಕಾಗುತ್ತದೆ. ಪ್ರತಿ ಪ್ರಯಾಣಿಕನಿಗೆ 25 ರೂ. ದರ ವಿಸಲಾಗುತ್ತದೆ. ಮಾರ್ಗ ಮಧ್ಯದಲ್ಲಿ ಮಲವಗೊಪ್ಪ, ನಿದಿಗೆ, ಬಿದರೆ, ಮಾಚೇನಹಳ್ಳಿ, ಶಿಮುಲ್ ಡೈರಿ ಬಳಿ ಇಳಿದುಕೊಳ್ಳುವವರಿಗೆ ಕಡಿಮೆ ದರ ವಿಧಿಲಾಗುತ್ತದೆ.
ಇದರಿಂದ ಹೆಚ್ಚಿನ ಪಾಲು ನಮಗೆ ನಷ್ಟವಾಗುತ್ತದೆ ಎನ್ನುತ್ತಾರೆ ಟ್ಯಾಕ್ಸಿ ಚಾಲಕರು ಮತ್ತು ಮಾಲೀಕರು.

ಗಾರ್ಮೆಂಟ್ಸ್ಗಳಿಗೆ ತೆರಳುವ ಮಹಿಳೆಯರೆ ಟ್ಯಾಕ್ಸಿಗಳಿಗೆ ಆಧಾರವಾಗಿದ್ದಾರೆ. ರಾಜ್ಯ ಸರಕಾರ ಕೆಎಸ್ಆರ್ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣ ಘೋಷಿಸಿರುವಾಗ ದುಡ್ಡು ಕೊಟ್ಟು ಟ್ಯಾಕ್ಸಿಯಲ್ಲಿ ಹೋಗಲು ಮಹಿಳೆಯರು ಮುಂದೆ ಬರುವುದು ದೂರದ ಮಾತಾಗಿದೆ. ಇದರಿಂದ ಟ್ಯಾಕ್ಸಿಗಳನ್ನು ನಂಬಿಕೊಂಡು ಜೀವನ ನಡೆಸುತ್ತಿರುವ ಮಾಲೀಕರು ಮತ್ತು ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಟ್ಯಾಕ್ಸಿಗಳ ಮಾಲೀಕರು ಮತ್ತು ಚಾಲಕರು ರಸ್ತೆ ತೆರಿಗೆ, ವಾಹನ ವಿಮೆ ಕಟ್ಟಲು ಪರದಾಡುತ್ತಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago