Categories: Shivamogga

ಶಕ್ತಿ ಯೋಜನೆ ; ಇದುವರೆಗೆ ಶಿವಮೊಗ್ಗ ವಿಭಾಗದಲ್ಲಿ 53 ಲಕ್ಷ ಮಹಿಳೆಯರ ಉಚಿತ ಪ್ರಯಾಣ !

ಶಿವಮೊಗ್ಗ : ಮಹಾತ್ಮಾ ಗಾಂಧಿಯವರು ಮಹಿಳಾ ಸ್ವಾತಂತ್ರ್ಯಕ್ಕೆ ಅನನ್ಯವಾದ ಪ್ರಾಶಸ್ತ್ಯ ನೀಡಿದ್ದರು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹಿಳೆಯರ ಸ್ವಾತಂತ್ರ್ಯ ಹಾಗೂ ಸಬಲೀಕರಣಕ್ಕಾಗಿ ಶಕ್ತಿ ಯೋಜನೆ ಜಾರಿಗೆ ತಂದಿದೆ.
ಮಹಿಳೆ ಕಟ್ಟುಪಾಡುಗಳನ್ನು ಮೀರಿ ಹೊರ ಬರುತ್ತಿದ್ದಾಳೆ. ಕುಟುಂಬವನ್ನು ಮುನ್ನಡೆಸುವ ಈಕೆ, ಸಮಾಜದಲ್ಲಿ ನಿರ್ಭೀತಿಯಿಂದ ಹೆಜ್ಜೆ ಇಡಲು ಟೊಂಕ ಕಟ್ಟಿ ನಿಂತಿದ್ದಾಳೆ. ಇದೆಲ್ಲ ಸಾಧ್ಯವಾಗುತ್ತಿರುವುದು ಸರ್ಕಾರದ ಮಹಿಳಾ ಸಬಲೀಕರಣ ಯೋಜನೆಗಳಿಂದ.
ಶಕ್ತಿ ಯೋಜನೆ ಮೂಲಕ ರಾಜ್ಯ ಸರ್ಕಾರವು ಮಹಿಳೆಯರು, ವಿದ್ಯಾರ್ಥಿನಿಯರು ಮತ್ತು ಲಿಂಗತ್ವ ಅಲ್ಪಸಂಖ್ಯಾತರಿಗೆ ಸರ್ಕಾರಿ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ಜೂನ್ 11 ರಂದು ಜಾರಿಗೆ ಬಂದ ಶಕ್ತಿ ಯೋಜನೆಯಿಂದ ಓದುವ ಹೆಣ್ಣು ಮಕ್ಕಳ ಕನಸುಗಳಿಗೆ ರೆಕ್ಕೆ ಮೂಡಿದಂತಾಗಿದೆ.


ಸರ್ಕಾರದ ಶಕ್ತಿ ಯೋಜನೆಗೆ ಅಭೂತಪೂರ್ವವಾದ ಪ್ರತಿಕ್ರಿಯೆ ಮತ್ತು ಸಕಾರಾತ್ಮಕ ಸ್ಪಂದನೆ ದೊರಕಿದೆ. ಮಹಿಳೆಯರು ದೂರದ ಪಟ್ಟಣಗಳಿಗೆ ತೆರಳಿ ಹೆಚ್ಚಿನ ಆದಾಯದ ಉದ್ಯೋಗ ಹೊಂದಲು ಸಹಕಾರಿಯಾಗಿದೆ.
ಈ ಯೋಜನೆಯಡಿಯಲ್ಲಿ ಮಹಿಳೆಯರು ನಗರ ಸಾರಿಗೆ, ಸಾಮಾನ್ಯ ಹಾಗೂ ವೇಗದೂತ ಸರ್ಕಾರಿ ಬಸ್‍ಗಳಲ್ಲಿ ಉಚಿತವಾಗಿ ಪ್ರಯಾಣ ಮಾಡಬಹುದಾಗಿದೆ. ಎಂದೂ ಮನೆಯಿಂದ ಹೊರಬರದ ಹೆಣ್ಣುಮಕ್ಕಳಿಗೆ ಸ್ವಾತಂತ್ರ್ಯ ಸಿಕ್ಕಂತಾಗಿದ್ದು, ದೇವಾಲಯಗಳಿಗೆ ಪ್ರಯಾಣಿಸುವವರ ಸಂಖ್ಯೆ ಹೆಚ್ಚಿದೆ. ಶಿಕ್ಷಣ, ಉದ್ಯೋಗ, ಪ್ರವಾಸ ಮುಂತಾದ ಚಟುವಟಿಕೆಗಳನ್ನು ಕೈಗೊಳ್ಳಲು ಸಾಧ್ಯವಾಗಿದೆ. ಪ್ರಯಾಣ ವೆಚ್ಚದ ಉಳಿತಾಯದಿಂದ ಮಹಿಳೆಯರಿಗೆ ದೈನಂದಿನ ಬದುಕಿನಲ್ಲಿ ಮತ್ತಷ್ಟು ಬಲ ತುಂಬಿದ್ದು, ಹೆಚ್ಚಿನ ಮಹಿಳೆಯರು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುತ್ತಿದ್ದಾರೆ.

“ಜೂನ್ 11 ರಿಂದ ಶಕ್ತಿ ಯೋಜನೆ ಜಾರಿಗೆ ಬಂದಿದ್ದು, ಈ ಮಾಹೆಯಲ್ಲಿ ಶಿವಮೊಗ್ಗ ವಿಭಾಗದಲ್ಲಿ ಒಟ್ಟು 1239661 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು ರೂ.42535743 ವೆಚ್ಚವನ್ನು ಸರ್ಕಾರ ಭರಿಸಲಿದೆ. ಜುಲೈ ಮಾಹೆಯಲ್ಲಿ 2401146 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಸದರಿ ಮಾಹೆ ವೆಚ್ಚ 7,62,79,165 ಆಗಿರುತ್ತದೆ. ಆಗಸ್ಟ್ 22 ರವರೆಗೆ 1664330 ಮಹಿಳಾ ಪ್ರಯಾಣಿಕರು ಪ್ರಯಾಣಿಸಿದ್ದು ರೂ. 5,46,26,015 ವೆಚ್ಚ ಸೇರಿದಂತೆ ಒಟ್ಟಾರೆ ಜುಲೈ 11 ರಿಂದ ಆಗಸ್ಟ್ 22 ರವರೆಗೆ 5305137 ಮಹಿಳಾ ಪ್ರಯಾಣಿಕರು ಪ್ರಯಾಣ ಮಾಡಿರುತ್ತಾರೆ. ಒಟ್ಟು ರೂ.17,34,40,923 ವೆಚ್ಚವಾಗಿದ್ದು, ಸರ್ಕಾರ ನಿಗಮಕ್ಕೆ ಭರಿಸಲಿದೆ.”

“ಯೋಜನೆ ಅನುಷ್ಟಾನದ ನಂತರ ನೂಕು ನುಗ್ಗಲು ತಪ್ಪಿಸಲು, ಅಹಿತಕರ ಘಟನೆಗಳು ನಡೆಯದಂತೆ ಸೂಪರ್‍ ವೈಸರ್‍ಗಳನ್ನು ನಿಯೋಜಿಸಿ ಕ್ರಮ ವಹಿಸಲಾಗಿದೆ. ವಿಶೇಷಜಾತ್ರೆ/ಹಬ್ಬವಿರುವ ದಿನಗಳನ್ನು ಗುರುತಿಸಿ ಪ್ರಯಾಣಿಕರ ಸಂದಣಿ ಅನುಗುಣವಾಗಿ ಘಟಕದಿಂದ ಹೆಚ್ಚುವರಿ ಬಸ್ಸುಗಳ ತ್ವರಿತ ನಿಯೋಜನೆ, ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಿ ಸೂಕ್ತ ಕ್ರಮ ಕೈಗೊಳ್ಳಲಾಗಿದೆ.”
– ವಿಜಯಕುಮಾರ್, ವಿಭಾಗೀಯ ನಿಯಂತ್ರಕರು, ಕೆಎಸ್‍ಆರ್ಟಿಸಿ, ಶಿವಮೊಗ್ಗ ವಿಭಾಗ

ಪ್ರಯೋಜನ ಹೀಗೆ ಪಡೆಯಿರಿ :
ಮಹಿಳಾ ಪ್ರಯಾಣಿಕರು ಉಚಿತವಾಗಿ ಬಸ್ಸಿನಲ್ಲಿ ಪ್ರಯಾಣ ಮಾಡಲು ಶಕ್ತಿ ಸ್ಮಾಟ್ ಕಾರ್ಡ್ ನೀಡಲಾಗುವುದು. ಶಕ್ತಿ ಸ್ಮಾರ್ಟ್ ಕಾರ್ಡ್‌ಗಳಿಗಾಗಿ ಸೇವಾಸಿಂಧು ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಬಹುದು.
ಸ್ಮಾರ್ಟ್ ಕಾರ್ಡ್ ಪಡೆಯುವ ತನಕ ಪ್ರಯಾಣಿಸುವ ಸಂದರ್ಭದಲ್ಲಿ ಆಧಾರ್‍ ಕಾರ್ಡ್, ಮತದಾರರ ಗುರುತಿನ ಚೀಟಿ, ಚಾಲನಾ ಪರವಾನಿಗೆ ಪತ್ರ, ಭಾರತ ಸರ್ಕಾರ ಅಥವಾ ರಾಜ್ಯ ಸರ್ಕಾರದ ಸಂಸ್ಥೆಗಳು ವಿತರಿಸುವ ಗುರುತಿನ ಚೀಟಿ ಹಾಗೂ ಅಂಗವಿಕಲರ ಮತ್ತು ಹಿರಿಯ ನಾಗರೀಕರ ಕಲ್ಯಾಣ ನಿರ್ದೇಶನಾಲಯದ ಗುರುತಿನ ಚೀಟಿ ತೋರಿಸಿ ಪ್ರಯಾಣಿಸಬಹುದು. ಮಹಿಳಾ ಪ್ರಯಾಣಿಕರು ಪ್ರಯಾಣ ಸಂದರ್ಭದಲ್ಲಿ ಶೂನ್ಯ ಮೊತ್ತ ಟಿಕೆಟ್ ಪಡೆದುಕೊಳ್ಳಬೇಕು.
ರಾಜ್ಯದ ಒಳಗೆ ಪ್ರಯಾಣಿಸಲು ಮಾತ್ರ ಅನ್ವಯ. ಅಂತರ ರಾಜ್ಯ ಪ್ರಯಾಣಕ್ಕೆ ಅವಕಾಶವಿಲ್ಲ. ಇಟಿಎಂ ತಂತ್ರಾಂಶದಲ್ಲಿ ಉಚಿತ ಟಿಕೆಟ್ ವಿತರಣೆಗಾಗಿ ಅಗತ್ಯ ಮಾರ್ಪಾಡು, ಸಿಬ್ಬಂದಿಗೆ ಸೂಕ್ತ ತರಬೇತಿ. ಗುರುತಿನ ಚೀಟಿ ಪರಿಶೀಲಿಸಿ ಶೂನ್ಯ ಟಿಕೆಟ್ ವಿತರಣೆ ಮಾಡಲಾಗುತ್ತಿದೆ. ಮುಂಗಡ ಬುಕಿಂಗ್ ಸೌಲಭ್ಯವಿರುವ ಬಸ್ಸುಗಳಲ್ಲಿ ಮಹಿಳೆಯರಿಗೆ ಮುಂಗಡ ಆಸನ ಕಾಯ್ದಿರಿಸುವ ಅವಕಾಶವಿದೆ.
ಈ ಯೋಜನೆಯಡಿ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ತಗಲುವ ವೆಚ್ಚವನ್ನು ಇಟಿಎಂ ಗಳಿಂದ ವಿತರಿಸಲಾದ ಶೂನ್ಯ ಟಿಕೆಟ್/ಶಕ್ತಿ ಸ್ಮಾರ್ಟ್ ಕಾರ್ಡ್ ದತ್ತಾಂಶ ಆಧರಿಸಿ ನಿಗಮಗಳಿಗೆ ಸರ್ಕಾರದಿಂದ ಹಣ ಪಾವತಿ ಮಾಡಲಾಗುತ್ತದೆ.

ಪುರುಷ ಪ್ರಯಾಣಿಕರಿಗೆ ಆಸನ ಮೀಸಲು :

ಕೆಎಸ್‍ಆರ್‍ ಟಿಸಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಎಲ್ಲಾ ಬಸ್ಸುಗಳಲ್ಲಿ(ಅಂತರರಾಜ್ಯ, ಎಸಿ ಮತ್ತು ಐಷಾರಾಮಿ ಬಸ್‍ಗಳನ್ನು ಹೊರತುಪಡಿಸಿ) ಶೇ.50 ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದಿರಿಸಲಾಗುವುದು.

“ಮೊದಲು ಕಾಲೇಜಿಗೆ ಬರಲು ಬಸ್‍ಪಾಸ್ ಮಾಡಿಸಬೇಕಿತ್ತು. ಮನೆಯಲ್ಲಿ ಬಡತನ ಇರುವ ಕಾರಣ ಅದಕ್ಕೂ ಹಣ ಕೇಳಲು ಕಷ್ಟವಾಗುತ್ತಿತ್ತು. ಶಕ್ತಿ ಯೋಜನೆಯಿಂದ ಬಸ್‍ಪಾಸ್ ಮಾಡಿಸುವ ಕೆಲಸವೂ ಇಲ್ಲ. ಜೊತೆಗೆ ಸಂತೋಷದಿಂದ ಕಾಲೇಜಿಗೆ ಹೋಗಿ ಬರುತ್ತಿದ್ದೇನೆ.”
– ಪೂಜಾ ಭದ್ರಾವತಿ, ಫಲಾನುಭವಿ

“ನಾನು ಕೆಲಸಕ್ಕೆ ನಿತ್ಯ ಶಿವಮೊಗ್ಗಕ್ಕೆ ಬಸ್ಸಿಗೆ ಹಣ ನೀಡಿ ಹೋಗುತ್ತಿದ್ದೆ. ಹಾಗೂ ನನ್ನ ಎರಡು ಹೆಣ್ಣುಮಕ್ಕಳಿಗೆ ಶಾಲೆಗೆ ತೆರಳು ಬಸ್‍ಪಾಸ್ ಮಾಡಿಸುತ್ತಿದ್ದೆ. ಆದರೆ ಶಕ್ತಿ ಯೋಜನೆಯಿಂದಾಗಿ ನಾವು ಮೂರು ಜನಕ್ಕೂ ಅನುಕೂಲವಾಗಿದ್ದು, ಇಲ್ಲಿ ಉಳಿಯುತ್ತಿರುವ ಹಣ ಇತರೆ ವೆಚ್ಚಕ್ಕೆ ಉಪಯುಕ್ತವಾಗುತ್ತಿದೆ. ಹಾಗೂ ಈ ಹಿಂದೆ ಊರುಗಳಿಗೆ ಹೊರಟರೆ ಮನೆಯಲ್ಲಿ ಬಸ್‍ಚಾರ್ಜ್ ಕೇಳಲು ಕಷ್ಟವಾಗುತ್ತಿತ್ತು. ಈ ಯೋಜನೆ ಬಂದ ಮೇಲೆ ನಿರಾಳವಾಗಿದೆ.”
– ಗಾಯಿತ್ರಿ, ಮಲವಗೊಪ್ಪ, ಫಲಾನುಭವಿ

“ನಾನು ಖಾಸಗಿ ಕೆಲಸದ ನಿಮಿತ್ತ ನಿತ್ಯ ದೂರದೂರದ ಊರುಗಳಿಗೆ, ಜಿಲ್ಲೆಗಳಿಗೆ ಪ್ರಯಾಣಿಸುತ್ತಿದ್ದ ನನಗೆ ಶಕ್ತಿ ಯೋಜನೆಯಿಂದ ಶಕ್ತಿ ಬಂದಂತಾಗಿದೆ. ಬಸ್‍ಚಾರ್ಜಿಗಾಗಿ ಕಷ್ಟಪಡುತ್ತಿದ್ದ ನನಗೆ ನೆಮ್ಮದಿಯಿಂದ ಪ್ರಯಾಣಿಸುವಂತಾಗಿದೆ. ಸರ್ಕಾರಕ್ಕೆ ಧನ್ಯವಾದಗಳು.”
– ರುಕ್ಮಿಣಿ, ಶಿವಮೊಗ್ಗ, ಫಲಾನುಭವಿ

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

7 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

11 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

12 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

14 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

14 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

21 hours ago