ಶರಾವತಿ ನದಿ ಪಾತ್ರದ ಅಕ್ರಮ ಮರಳು ಗಣಿಗಾರಿಕೆ ತಡೆಯುವಂತೆ ಒತ್ತಾಯ ; ಸಿಎಂಗೆ ಗಿರೀಶ್‌ ಆಚಾರ್ ಪತ್ರ

ಹೊಸನಗರ : ಹೊಸನಗರ (Hosanagara) ತಾಲೂಕಿನಲ್ಲಿ ನಡೆಯುತ್ತಿರುವ ಅಕ್ರಮ ಮರಳು (Sand) ಗಣಿಗಾರಿಕೆ ನಿಯಂತ್ರಣಕ್ಕೆ ಸೂಕ್ತ ಕ್ರಮ ವಹಿಸುವಂತೆ ಒತ್ತಾಯಿಸಿ ಜನಸಂಗ್ರಾಮ ಪರಿಷತ್ ಸಂಚಾಲಕ ಗಿರೀಶ್ ಆಚಾರ್ ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramaiah) ಅವರಿಗೆ ಪತ್ರ ಬರೆದಿದ್ದಾರೆ.

ಅವರು ಇತ್ತೀಚೆಗೆ ತಹಸೀಲ್ದಾರ್ ಮೂಲಕ ಪತ್ರವನ್ನು ಕಳುಹಿಸಿದ್ದು, ಶರಾವತಿ ಒಡಲಿನಲ್ಲಿ ನಡೆಯುತ್ತಿರುವ ಮರಳು ಸಾಗಾಟಕ್ಕೆ ಕಡಿವಾಣ ಹಾಕುವಂತೆ ಕೋರಿದ್ದಾರೆ.
ಶರಾವತಿ ನದಿಯ ಈ ಭಾಗದ ಜೀವ ನದಿಯಾಗಿದೆ. ಹಿಂದೆ ಮುಳುಗಡೆಯಿಂದಾಗಿ ಅಪಾರ ಪ್ರಮಾಣದ ಅರಣ್ಯ ನಾಶವಾಗಿದೆ. ಅಳಿದುಳಿದ ನದಿಯಂಚಿನ ಪ್ರದೇಶವು ಪಶ್ಚಿಮಘಟ್ಟಕ್ಕೆ ಸೇರಿದ ಅತೀ ಸೂಕ್ಷ್ಮ ಪ್ರದೇಶ ಎಂದು ಗುರುತಿಸಲ್ಪಟ್ಟಿದೆ. ಆದರೆ, ಇತ್ತೀಚಿನ ವರ್ಷಗಳಲ್ಲಿ ಮರಳು ದಂಧೆಕೋರರು ನದಿ ದಂಡೆಯನ್ನೆಲ್ಲಾ ಒಡೆದು ಹಾಕಿ, ನದಿಯಂಚಿನ ಕಾಡುಗಳನ್ನು ಧ್ವಂಸಗೊಳಿಸಿ, ವಾಹನ ಸಂಚರಿಸುವ ರಸ್ತೆ ನಿರ್ಮಾಣ ಮಾಡಿಕೊಂಡು, ಪ್ರತಿನಿತ್ಯ ಹಗಲು ಇರುಳೆನ್ನದೆ, ನೂರಾರು ಲೋಡ್ ಅಕ್ರಮ ಮರಳು ಸಂಗ್ರಹ ಹಾಗು ಸಾಗಾಟ ಮಾಡುತಿದ್ದಾರೆ.

ಬಿಹಾರ, ಉತ್ತರ ಪ್ರದೇಶದಿಂದ ಕೂಲಿ ಆಳುಗಳನ್ನು ಕರೆಸಿಕೊಂಡು ನದಿಯಲ್ಲಿ ಮುಳುಗಿಸಿ, ನದಿಯಾಳದಿಂದ ಮರಳನ್ನು ತೆಗೆಯಲು ದಂಧೆಕೋರರು ಸೂಚಿಸುತ್ತಾರೆ.

ಈ ಕೂಲಿ ಆಳುಗಳಿಗೆ ಜೀವ ರಕ್ಷಣೆ ಇಲ್ಲದಂತಾಗಿದೆ. ಇದರಿಂದಾಗಿ ಹೊರ ರಾಜ್ಯದ ಕೂಲಿ ಕಾರ್ಮಿಕರಿಗೆ ಜೀವ ಹಾನಿಯಾದಲ್ಲಿ ನಮ್ಮ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬರುವ ಸಾಧ್ಯತೆ ಇರುತ್ತದೆ. ಅಲ್ಲದೆ, ಇದರಿಂದಾಗಿ ಸರ್ಕಾರಕ್ಕೆ ಸೇರ ಬೇಕಾದ ರಾಜಧನ ಕೋಟ್ಯಂತರ ರೂ.ಗಳು ನಷ್ಟವಾಗುವುದರ ಜೊತೆಗೆ, ಬೆಲೆ ಕಟ್ಟಲಾಗದ ಅರಣ್ಯ ಸಂಪತ್ತು ನಶಿಸಿಹೋಗುತ್ತಿದೆ ಎಂದು ಆರೋಪಿಸಿದ್ದಾರೆ.

ನದಿ ದಂಡೆಯನ್ನು ಒಡೆದು ಹಾಕಿದ ಮಣ್ಣನ್ನು ನದಿಯಲ್ಲಿ ರಸ್ತೆ ನಿರ್ಮಾಣ ಮಾಡಿದಾಗ ಮಳೆಗಾಲದಲ್ಲಿ ತೊಳೆದುಹೋದಲ್ಲಿ, ಕೋಟ್ಯಂತರ ರೂ.ಗಳ ವಿದ್ಯುತ್ ಉತ್ಪಾದಿಸುವ ಯಂತ್ರಗಳಿಗೆ ಹಾನಿಯಾಗುವ ಸಂಭವವಿರುತ್ತದೆ. ಅಲ್ಲದೆ, ಪರಿಸರಕ್ಕೆ ತುಂಬಾ ಹಾನಿಯಾಗುತ್ತಿರುವ ವಿಷಯದ ಕುರಿತು ಅಧಿಕಾರಿಗಳ ಗಮನಕ್ಕೆ ಹಲವಾರು ಬಾರಿ ಮನವಿ ಸಲ್ಲಿಸಲಾಗಿರುತ್ತದೆ.

ಈ ಅಧಿಕಾರಿಗಳು ನೆಪಕಷ್ಟೆ ಬೆರಳೆಣಿಕೆಯಷು ವಾಹನವನ್ನು ತಪಾಸಣೆ ಮಾಡಿ, ಕಾನೂನು ಕ್ರಮಕೈ ಗೊಂಡಿರುವುದು ಕಂಡು ಬಂದಿರುತ್ತದೆ. ಅತ್ಯಂತ ಮುಖ್ಯವಾಗಿ ಸರ್ಕಾರದ ಸಂಪತ್ತನ್ನು ರಕ್ಷಿಸುವುದು ತಾಲ್ಲೂಕಿನ ಪ್ರಥಮ ಪ್ರಜೆಗಳು ಹಾಗೂ ಗಣಿ, ಇಲಾಖೆ ಅರಣ್ಯ, ಕಂದಾಯ, ಅಧಿಕಾರಿಗಳ ಮಹತ್ವದ ಜವಾಬ್ದಾರಿಯಾಗಿದ್ದರೂ ಸಹ ಸರ್ಕಾರದ ಆದೇಶವನ್ನು ಪಾಲನೆ ಮಾಡದೆ, ಅಕ್ರಮ ಮರಳು ದಂದೆ ಕೋರರ ಜೊತೆಯಲ್ಲಿ ಶಾಮೀಲಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುತ್ತದೆ. ಅತೀಸೂಕ್ಷ್ಮ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಅಕ್ರಮ ದಂಧೆಗೆ ಕಡಿವಾಣ ಹಾಕಬೇಕು ಹಾಗೂ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧಕ್ರಮ ಕೈಗೊಳ್ಳಬೇಕೆಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago