ಶಾಸಕರ ವಿರುದ್ಧ ಪೋಸ್ಟ್ ಹಾಕಿದ್ದಕ್ಕೆ ಹೋಟೆಲ್‌ಗೆ ನುಗ್ಗಿ ಬಿಜೆಪಿ ಮುಖಂಡನ ಮೇಲೆ ಹಲ್ಲೆ !

0 296

ಭದ್ರಾವತಿ : ಹೋಟೆಲ್‌ಗೆ ನುಗ್ಗಿ ಬಿಜೆಪಿ ಮುಖಂಡನ (BJP Leader) ಮೇಲೆ ಹಲ್ಲೆ ನಡೆಸಿದ ಘಟನೆ ಭದ್ರಾವತಿ (Bhadravathi) ಪಟ್ಟಣದಲ್ಲಿ ನಿನ್ನೆ ರಾತ್ರಿ ನಡೆದಿದೆ.

ಗೋಕುಲ್ ಕೃಷ್ಣನ್ ಹಲ್ಲೆಗೊಳಗಾದ ಬಿಜೆಪಿ ಮುಖಂಡನಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಊಟ ಪಾರ್ಸಲ್ ತೆಗೆದುಕೊಳ್ಳಲು ಗೋಕುಲ್ ಅವರು ಭದ್ರಾವತಿಯ ಬಿ.ಹೆಚ್.ರಸ್ತೆಯ ಕಾಂಚನ್ ಹೋಟೆಲ್‌ಗೆ ಹೋಗಿದ್ದರು. ಈ ವೇಳೆ 6-7 ಮಂದಿ ಇದ್ದ ದುಷ್ಕರ್ಮಿಗಳ ಗುಂಪು ಹೋಟೆಲ್‌ಗೆ ನುಗ್ಗಿ ದೊಣ್ಣೆಯಿಂದ ಗೋಕುಲ್ ಕೃಷ್ಣನ್ ಮೇಲೆ ಹಲ್ಲೆ ನಡೆಸಿದ್ದಾರೆ. ಹಣೆ ಮತ್ತು ಕಿವಿಗೆ ಬಲವಾಗಿ ಹೊಡೆತ ಬಿದ್ದಿದ್ದರಿಂದ ತೀವ್ರ ರಕ್ತಸ್ರಾವವಾಗಿದೆ.

ಕೂಡಲೇ ಗೋಕುಲ್ ಅವರನ್ನು ಭದ್ರಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಕುಲ್ ಅವರು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ವಿರುದ್ಧ ಅಕ್ರಮ ದಂಧೆ ಕುರಿತು ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಈ ಪೋಸ್ಟ್ ಮಾಡಿದ ಬಳಿಕ ನಿನ್ನೆ ಕಾರು ಜಖಂಗೊಳಿಸಿದ್ದ ದುಷ್ಕರ್ಮಿಗಳ ರಾತ್ರಿ ವೇಳೆ ಬಿಜೆಪಿ ಮುಖಂಡ ಗೋಕುಲ್ಗೆ ಹಲ್ಲೆ ನಡೆಸಿದ್ದಾರೆ. ಈ ಘಟನೆಯನ್ನು ಶಿವಮೊಗ್ಗ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಖಂಡಿಸಿದ್ದಾರೆ.

ಮೂವರು ಆರೋಪಿಗಳು ಅರೆಸ್ಟ್

ಬಿಜೆಪಿ ಮುಖಂಡನ ಹೊಸ ಕಾರು ಜಖಂಗೊಳಿಸಿದ್ದ ಪ್ರಕರಣ ಸಂಬಂಧ ಭದ್ರಾವತಿಯ ನ್ಯೂಟೌನ್ ಠಾಣಾ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಗಣೇಶ್ (22), ಹರ್ಷ (22), ನಾಗೇಗೌಡ (22) ಬಂಧಿತ ಆರೋಪಿಗಳಾಗಿದ್ದಾರೆ.

ಭದ್ರಾವತಿಯ ವಿಶ್ವೇಶ್ವರಯ್ಯ ನಗರದಲ್ಲಿ ಡಿಸೆಂಬರ್ 9 ರಂದು ಮಧ್ಯಾಹ್ನ ವೇಳೆ ಗೋಕುಲ್ ಅವರ ಹೊಸ ಕಾರು ಜಖಂಗೊಳಿಸಿದ್ದರು. ಇದರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.

ಹಲ್ಲೆ ಬಗ್ಗೆ ಮಾತನಾಡಿದ ಗಾಯಾಳು ಗೋಕುಲ್, ಭದ್ರಾವತಿಯಲ್ಲಿ ಇಸ್ಪೀಟ್, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಯುತ್ತಿದೆ. ಈ ದಂಧೆಯ ಹಿಂದೆ ಶಾಸಕ ಬಿ.ಕೆ.ಸಂಗಮೇಶ್ವರ್ ಕೈವಾಡ ಇದೆ. ಇದನ್ನು ಪ್ರಶ್ನಿಸಿ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದಕ್ಕೆ ಕಾರು‌ ಜಖಂಗೊಳಿಸಿದ್ದಾರೆ. ರಾತ್ರಿ ಹೋಟೆಲ್ನಲ್ಲಿ ಊಟ ತರಲು ಹೋದಾಗ ಹಲ್ಲೆ ಮಾಡಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹೋಗಿದ್ದಾಗಲೂ ಹಲ್ಲೆ ಮಾಡಿದ್ದಾರೆ. ಹೀಗಾಗಿ ಭದ್ರಾವತಿಯಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದ್ರಾವತಿಯಲ್ಲಿ ಹೇಳೋರು ಕೇಳೋರು‌ ಇಲ್ಲದಾಗಿದೆ ಎಂದರು.

Leave A Reply

Your email address will not be published.

error: Content is protected !!