ಭದ್ರಾವತಿ : ಹೋಟೆಲ್ಗೆ ನುಗ್ಗಿ ಬಿಜೆಪಿ ಮುಖಂಡನ (BJP Leader) ಮೇಲೆ ಹಲ್ಲೆ ನಡೆಸಿದ ಘಟನೆ ಭದ್ರಾವತಿ (Bhadravathi) ಪಟ್ಟಣದಲ್ಲಿ ನಿನ್ನೆ ರಾತ್ರಿ ನಡೆದಿದೆ.
ಗೋಕುಲ್ ಕೃಷ್ಣನ್ ಹಲ್ಲೆಗೊಳಗಾದ ಬಿಜೆಪಿ ಮುಖಂಡನಾಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಊಟ ಪಾರ್ಸಲ್ ತೆಗೆದುಕೊಳ್ಳಲು ಗೋಕುಲ್ ಅವರು ಭದ್ರಾವತಿಯ ಬಿ.ಹೆಚ್.ರಸ್ತೆಯ ಕಾಂಚನ್ ಹೋಟೆಲ್ಗೆ ಹೋಗಿದ್ದರು. ಈ ವೇಳೆ 6-7 ಮಂದಿ ಇದ್ದ ದುಷ್ಕರ್ಮಿಗಳ ಗುಂಪು ಹೋಟೆಲ್ಗೆ ನುಗ್ಗಿ ದೊಣ್ಣೆಯಿಂದ ಗೋಕುಲ್ ಕೃಷ್ಣನ್ ಮೇಲೆ ಹಲ್ಲೆ ನಡೆಸಿದ್ದಾರೆ. ಹಣೆ ಮತ್ತು ಕಿವಿಗೆ ಬಲವಾಗಿ ಹೊಡೆತ ಬಿದ್ದಿದ್ದರಿಂದ ತೀವ್ರ ರಕ್ತಸ್ರಾವವಾಗಿದೆ.
ಕೂಡಲೇ ಗೋಕುಲ್ ಅವರನ್ನು ಭದ್ರಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಗೋಕುಲ್ ಅವರು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ವಿರುದ್ಧ ಅಕ್ರಮ ದಂಧೆ ಕುರಿತು ಫೇಸ್ಬುಕ್ನಲ್ಲಿ ಮಾಹಿತಿ ಹಂಚಿಕೊಂಡಿದ್ದರು. ಈ ಪೋಸ್ಟ್ ಮಾಡಿದ ಬಳಿಕ ನಿನ್ನೆ ಕಾರು ಜಖಂಗೊಳಿಸಿದ್ದ ದುಷ್ಕರ್ಮಿಗಳ ರಾತ್ರಿ ವೇಳೆ ಬಿಜೆಪಿ ಮುಖಂಡ ಗೋಕುಲ್ಗೆ ಹಲ್ಲೆ ನಡೆಸಿದ್ದಾರೆ. ಈ ಘಟನೆಯನ್ನು ಶಿವಮೊಗ್ಗ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಖಂಡಿಸಿದ್ದಾರೆ.
ಮೂವರು ಆರೋಪಿಗಳು ಅರೆಸ್ಟ್
ಬಿಜೆಪಿ ಮುಖಂಡನ ಹೊಸ ಕಾರು ಜಖಂಗೊಳಿಸಿದ್ದ ಪ್ರಕರಣ ಸಂಬಂಧ ಭದ್ರಾವತಿಯ ನ್ಯೂಟೌನ್ ಠಾಣಾ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಗಣೇಶ್ (22), ಹರ್ಷ (22), ನಾಗೇಗೌಡ (22) ಬಂಧಿತ ಆರೋಪಿಗಳಾಗಿದ್ದಾರೆ.
ಭದ್ರಾವತಿಯ ವಿಶ್ವೇಶ್ವರಯ್ಯ ನಗರದಲ್ಲಿ ಡಿಸೆಂಬರ್ 9 ರಂದು ಮಧ್ಯಾಹ್ನ ವೇಳೆ ಗೋಕುಲ್ ಅವರ ಹೊಸ ಕಾರು ಜಖಂಗೊಳಿಸಿದ್ದರು. ಇದರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಹಲ್ಲೆ ಬಗ್ಗೆ ಮಾತನಾಡಿದ ಗಾಯಾಳು ಗೋಕುಲ್, ಭದ್ರಾವತಿಯಲ್ಲಿ ಇಸ್ಪೀಟ್, ಮಟ್ಕಾ, ಕ್ರಿಕೆಟ್ ಬೆಟ್ಟಿಂಗ್ ದಂಧೆ ನಡೆಯುತ್ತಿದೆ. ಈ ದಂಧೆಯ ಹಿಂದೆ ಶಾಸಕ ಬಿ.ಕೆ.ಸಂಗಮೇಶ್ವರ್ ಕೈವಾಡ ಇದೆ. ಇದನ್ನು ಪ್ರಶ್ನಿಸಿ ಫೇಸ್ಬುಕ್ನಲ್ಲಿ ಪೋಸ್ಟ್ ಮಾಡಿದ್ದಕ್ಕೆ ಕಾರು ಜಖಂಗೊಳಿಸಿದ್ದಾರೆ. ರಾತ್ರಿ ಹೋಟೆಲ್ನಲ್ಲಿ ಊಟ ತರಲು ಹೋದಾಗ ಹಲ್ಲೆ ಮಾಡಿದ್ದಾರೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಹೋಗಿದ್ದಾಗಲೂ ಹಲ್ಲೆ ಮಾಡಿದ್ದಾರೆ. ಹೀಗಾಗಿ ಭದ್ರಾವತಿಯಿಂದ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ದ್ರಾವತಿಯಲ್ಲಿ ಹೇಳೋರು ಕೇಳೋರು ಇಲ್ಲದಾಗಿದೆ ಎಂದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…