ಶಿವಮೊಗ್ಗ: ಶಾಹಿ ಎಕ್ಸ್ಪೋರ್ಟ್ಸ್ ಘಟಕದಿಂದ ಪರಿಸರ ನಾಶವಾಗುತ್ತಿದೆ ಎಂದು ಆರೋಪಿಸಿ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಮಾಚೇನಹಳ್ಳಿ ಕೈಗಾರಿಕಾ ಸಂಘದ ಪದಾಧಿಕಾರಿಗಳು ಉದ್ಯಮಿಗಳು ಇಂದು ಪ್ರತಿಭಟನೆ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಶಾಹಿ ಎಕ್ಸ್ಪೋರ್ಟ್ಸ್ ಘಟಕವನ್ನು ಪರಿವೀಕ್ಷಣೆ ಮಾಡಿದಾದ ಅದರಿಂದ ಆಗುತ್ತಿರುವ ಪರಿಸರ ನಾಶ ಸ್ಪಷ್ಟವಾಗಿದೆ. ಕೈಗಾರಿಕಾ ಘಟಕಗಳಿಗೆ ಅವರ ಚಿಮಣಿಯಿಂದಹೊರಬರುತ್ತಿರುವ ರಾಸಾಯನಿಕ ಮಿಶ್ರಿತ ವಿಷಪೂರಿತ ದೂಳು ಹಾಗೂ ದುರ್ವಾಸನೆಯಿಂದ ಸಮಸ್ಯೆ ಹೆಚ್ಚಾಗುತ್ತಿದೆ ಎಂದು ಪ್ರತಿಭಟನಕಾರರು ಆರೋಪಿಸಿದರು.
ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಶಾಹಿ ಎಕ್ಸ್ಪೋರ್ಟ್ಸ್ ಘಟಕವನ್ನು ಮುಚ್ಚಲು ಯೋಗ್ಯವಾದದು ಎಂದು ನಿರ್ಧರಿಸಿ ಮುಚ್ಚುವ ಆದೇಶವನ್ನು ಈಗಾಗಲೇ ನೀಡಿದ್ದಾರೆ. ಇದರಿಂದ ಆಗುವ ಸಮಸ್ಯೆಗಳ ಬಗ್ಗೆ ಜಿಲ್ಲಾಧಿಕಾರಿಗಳಾದ ತಮ್ಮ ಗಮನಕ್ಕೂ ಬಂದಿದೆ. ಕೆರೆ ಕಟ್ಟೆಗಳು, ಕೈಗಾರಿಕಾ ಘಟಕಗಳು ಹೀಗೆ ಹಲವು ರೀತಿಯಲ್ಲಿ ದುಷ್ಟರಿಣಾಮ ಉಂಟಾಗುತ್ತಿದೆ. ಅಂತರ್ಜಲ ಕಲುಷಿತವಾಗುತ್ತಿದೆ. ಆದ್ದರಿಂದ ಈ ಘಟಕವನ್ನು ತಕ್ಷಣ ಮುಚ್ಚಲು ಆದೇಶ ನೀಡಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಎಂ.ಎ. ರಮೇಶ್ ಹೆಗಡೆ, ಕೈಗಾರಿಕಾ ಸಂಘದ ಅಧ್ಯಕ್ಷ ಎನ್. ಗೋಪಿನಾಥ್, ಕೆ.ವಿ. ವಸಂತ್ಕುಮಾರ್, ಎಸ್.ಪಿ. ಚಂದ್ರು, ಪ್ರವೀಣ್ ಹಾಗೂ ಪದಾಧಿಕಾರಿಗಳು ಮತ್ತು ನಿದಿಗೆ ಹೋಬಳಿ ಗ್ರಾಮಸ್ಥರು ಇದ್ದರು. ಪ್ರತಿಭಟನೆ ನಂತರ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಲಾಯಿತು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…