Categories: Sagara NewsShivamogga

ಶಿಕ್ಷಕನಿಗೆ ಹೃದಯಸ್ಪರ್ಶಿ ಬೀಳ್ಕೊಡುಗೆ, ಪಲ್ಸರ್ ಬೈಕ್ ಗಿಫ್ಟ್ ನೀಡಿ ಕಣ್ಣೀರಿಟ್ಟ ಗ್ರಾಮಸ್ಥರು, ವಿದ್ಯಾರ್ಥಿಗಳು !

ಸಾಗರ: ಶಿಕ್ಷಕರ ಸೇವೆಗೆ ನೀಡುವ ಗೌರವ ಅಂದರೆ ಹೀಗಿರಬೇಕು. ತಾಲೂಕಿನ ವಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕರಿಗೆ ಗ್ರಾಮಸ್ಥರು ಹೃದಯಸ್ಪರ್ಶಿ ಬೀಳ್ಕೊಡುಗೆ ನೀಡಿದ್ದಾರೆ.

1ರಿಂದ 7ನೇ ತರಗತಿವರೆಗೂ ಇರುವ ವಳೂರು ಸರ್ಕಾರಿ ಶಾಲೆಯಲ್ಲಿ ಕಲಿಯುತ್ತಿರೋದು ಕೇವಲ 13 ವಿದ್ಯಾರ್ಥಿಗಳು. ಕುಗ್ರಾಮವಾದ ವಳೂರಿಗೆ 16 ವರ್ಷಗಳ ಹಿಂದೆ ಸಂತೋಷ್ ಕಾಂಚನ್ ಎಂಬ ಶಿಕ್ಷಕ ಸೇವೆ ನಿಯುಕ್ತಿಗೊಂಡಿದ್ದರು. ಸಂತೋಷ್ ಈ ಊರಿಗೆ ನಿಯುಕ್ತಿಗೊಂಡ 2007ರಲ್ಲಿ ಇಲ್ಲಿನ ಕುಣಬಿ ಜನಾಂಗ ಒಂದು ಬೈಕ್‌ನ್ನು ಸಹ ನೋಡಿರಲಿಲ್ಲ.

ಅಂದ ಹಾಗೆಯೇ ವಳೂರು ಗ್ರಾಮದಲ್ಲಿರೋದು ಒಟ್ಟು 100 ಜನ ಕುಣಬಿ ಗ್ರಾಮಸ್ಥರು. ಕೊಡಚಾದ್ರಿ ತಟದಲ್ಲಿರುವ ವಳೂರಿಗೆ ಯಾವುದೇ ವಾಹನ ವ್ಯವಸ್ಥೆಯಿರಲಿಲ್ಲ. ಮುಖ್ಯರಸ್ತೆಗೆ ತಲುಪಬೇಕೆಂದರೆ 8 ಕಿಲೋ ಮೀಟರ್ ಕಾಲ್ನಡಿಗೆಯಲ್ಲೇ ಹೋಗಬೇಕಿತ್ತು. ಹೀಗಾಗಿ ಗ್ರಾಮದ ಸ್ಥಿತಿ‌ ಅರಿತ ಸಂತೋಷ್ ವಿದ್ಯಾರ್ಥಿಗಳು ಹಾಗೂ ಊರಿನವರಿಗಾಗಿ ಬೈಕ್ ಖರೀದಿಸಿದ್ದರಂತೆ.

ವಳೂರಿನ ನಾಗರಿಕರಿಗೆ ಹುಷಾರಿಲ್ಲದಿದ್ರೆ ಸಂತೋಷ್, ಬೈಕ್‌ನಲ್ಲೇ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ವಿದ್ಯಾರ್ಥಿಗಳನ್ನ ಪ್ರತಿಭಾ ಕಾರಂಜಿಗೂ ತಮ್ಮ ಬೈಕ್‌ನಲ್ಲೇ ಕರೆದುಕೊಂಡು ಹೋಗುತ್ತಿದ್ದರಂತೆ.
ಊರವರ ಕಷ್ಟನಷ್ಟಗಳಿಗೆ ಸದಾ ಸಾಥ್ ನೀಡುತ್ತಿದ್ದರು ಸಂತೋಷ್.

ಇದೀಗ ಶಿಕ್ಷಕ ಸಂತೋಷ್ ಅವರಿಗೆ ಬೇರೆ ಊರಿನ ಶಾಲೆಗೆ ವರ್ಗವಾಗಿದೆ. ಜೊತೆಗೆ ಬೈಕ್ ಸಹಾ ಕೆಟ್ಟಿದೆ. ಸತತ 16 ವರ್ಷಗಳ ಕಾಲ ಊರಿನ ಸೇವೆ ಮಾಡಿದ ಸಂತೋಷ್ ಅವರಿಗೆ ಬರೋಬ್ಬರಿ ಒಂದೂವರೆ ಲಕ್ಷಕ್ಕೂ ಹೆಚ್ಚು ದರದ ಪಲ್ಸರ್ ಬೈಕನ್ನು ಊರವರೆಲ್ಲ ಸೇರಿ ಹಣ ಒಗ್ಗೂಡಿಸಿ ದೇಣಿಗೆ ನೀಡಿದ್ದಾರೆ. ತಮ್ಮ ಸೇವೆ ಮಾಡಿದ‌ ಶಿಕ್ಷಕರಿಗೆ ಗ್ರಾಮಸ್ಥರೆಲ್ಲ ಸೇರಿ ಹೃದಯಸ್ಪರ್ಶಿ ಭಾವುಕ ಬೀಳ್ಕೊಡುಗೆ ನೀಡಿದ್ದಾರೆ.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕಿ ನಯನ ಕಪ್ಪದೂರು, ಇಸ್ಕಾನ್ನ ಮ್ಯಾನೇಜಿಂಗ್ ಟ್ರಸ್ಟಿ ತತ್ವದರ್ಶನ ಪ್ರಭುಜೀ, ಎಸ್ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಗ್ರಾಮಸ್ಥರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

8 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

12 hours ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

12 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

15 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

15 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

22 hours ago