Categories: Shivamogga

ಶಿಕ್ಷಕರ ನೇಮಕಾತಿ ; ಸ್ಥಳ ಆಯ್ಕೆ ಪ್ರಕ್ರಿಯೆ


ಶಿವಮೊಗ್ಗ :‌2022 ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಸಂಬಂಧಿಸಿದಂತೆ ಮಾನ್ಯ ಉಚ್ಚನ್ಯಾಯಾಲಯದ ರಿಟ್ ಅಪೀಲು ದಿ: 12-10-2023 ರ ವಿಭಾಗೀಯ ಪೀಠದ ತೀರ್ಪಿನಂತೆ ದಿನಾಂಕ: 08-03-2023 ರಂದು ಪ್ರಕಟಿತ 1:1 ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಕೌನ್ಸಲಿಂಗ್‍ಗೆ ಅರ್ಹ ಅಭ್ಯರ್ಥಿಗಳ ವಿವರಗಳನ್ನು ದಿ: 19-10-2023 ರಂದು ಶಾಲಾ ಶಿಕ್ಷಣ ಇಲಾಖೆಯ ವೆಬ್‍ಸೈಟ್ https://schooleducation.karnataka.gov.in ನಲ್ಲಿ ಪ್ರಕಟಿಸಲಾಗಿದೆ.


ವೆಬ್‌ಸೈಟ್‌ನಲ್ಲಿ ಸದರಿ ಪಟ್ಟಿಯಲ್ಲಿನ ಅಭ್ಯರ್ಥಿಗಳ ಕ್ರಮವಾಗಿ ಗಣಿತ ಮತ್ತು ವಿಜ್ಞಾನ, ಸಮಾಜ ವಿಜ್ಞಾನ, ಜೀವ ವಿಜ್ಞಾನ ಮತ್ತು ಆಂಗ್ಲಭಾಷಾ ಹುದ್ದೆಗಳಿಗೆ ಸ್ಥಳ ನಿಯುಕ್ತಿ ಕೌನ್ಸಲಿಂಗ್‍ನ ದಿನಾಂಕ: 21-10-2023 ರಂದು ಕರ್ನಾಟಕ ಪಬ್ಲಿಕ್ ಶಾಲೆ(ಕೆಇಎಸ್ ಶಾಲೆ) ಮೀನಾಕ್ಷಿ ಭವನದ ಹತ್ತಿರ, ಬಿ.ಹೆಚ್.ರಸ್ತೆ ಶಿವಮೊಗ್ಗ ಇಲ್ಲಿ ಬೆಳಿಗ್ಗೆ 10 ರಿಂದ ಕೌನ್ಸಲಿಂಗ್ ಮುಗಿಯುವವರೆಗೆ ಇಲಾಖಾ ವೆಬ್‌ಸೈಟ್‌ನಲ್ಲಿರುವಂತೆ ಭಾವಚಿತ್ರವಿರುವ ಗುರುತಿನ ಚೀಟಿ & ನೇಮಕಾತಿಗೆ ಸಂಬಂಧಪಟ್ಟಂತೆ ಅಗತ್ಯ ದಾಖಲೆಗಳೊಂದಿಗೆ ಕಡ್ಡಾಯವಾಗಿ ಹಾಜರಾಗುವುದು.


ಹೆಚ್ಚಿನ ವಿವರಗಳಿಗೆ ಡಿಡಿಪಿಐ ಸಿ.ಆರ್ ಪರಮೇಶ್ವರಪ್ಪ ಮೊ.ಸಂ: 9448999351, ಶಿಕ್ಷಣಾಧಿಕಾರಿ ಲೋಕೇಶಪ್ಪ ಕೆ.ಬಿ, ಮೊ.ಸಂ: 9448940321, ಅಧೀಕ್ಷಕ ಸಂಪತ್ ಕುಮಾರ್ 9945410865, ವಿಷಯ ನಿರ್ವಾಹಕ ಗಣೇಶ 9035348950 ನ್ನು ಸಂಪರ್ಕಿಸಬಹುದೆಂದು ಡಿಡಿಪಿಐ ತಿಳಿಸಿದ್ದಾರೆ.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

2 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

2 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

2 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

2 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

2 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago