Categories: Sagara NewsShivamogga

ಶಿಕ್ಷಣದಲ್ಲಿ ಮಾನವೀಯ ಮೌಲ್ಯಗಳನ್ನು ಕಲಿಸಬೇಕು ; ಶಾಸಕ ಆರಗ ಜ್ಞಾನೇಂದ್ರ

ಸಾಗರ : ಬದುಕನ್ನು ಸುಂದರಗೊಳಿಸುವ ಮಾನವೀಯ ಮೌಲ್ಯಗಳನ್ನು ಶಿಕ್ಷಣದಲ್ಲಿ ಕಲಿಸಬೇಕು ಎಂದು ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಹೇಳಿದರು.

ಸಮೀಪದ ಹೆಗ್ಗೋಡಿನ ಕೇಡಲಸರದಲ್ಲಿ ವಿದ್ಯಾಭಿವೃದ್ಧಿ ಸಂಘದಿಂದ ನಡೆಸುತ್ತಿರುವ ವಿ.ಸಂ.ಪ್ರೌಢಶಾಲೆಯ ವಜ್ರ ಮಹೋತ್ಸವ, ಎಸ್.ರೂಪಶ್ರೀ ಪದವಿಪೂರ್ವ ಕಾಲೇಜಿನ ರಜತ ಮಹೋತ್ಸವ ಹಾಗೂ ಕಾಕಾಲ್ ಪದವಿ ಕಾಲೇಜಿನ ದಶಮಾನೋತ್ಸವ ಕಾರ್ಯಕ್ರಮದ ಸಮಾರೋಪದಲ್ಲಿ ಅವರು ಮಾತನಾಡಿ, ಶಿಕ್ಷಣ ಸಂಸ್ಥೆಗಳು ಈ ನಿಯಮಕ್ಕೆ ಬದ್ಧವಾಗಿರಬೇಕು ಎಂದರು.

ಶಿಕ್ಷಣ ಸಂಸ್ಥೆಗಳು ಈಗ ಅಂಗಡಿ, ಹೋಟೆಲ್‌ಗಳಂತೆ ಆರಂಭಗೊಳ್ಳುತ್ತಿದ್ದು, ಉದ್ಯಮವಾಗಿ ರೂಪಾಂತರಗೊಂಡಿವೆ. ದೊಡ್ಡ ಶ್ರೀಮಂತರು ಬಂಡವಾಳ ಹೂಡುವ ಯೋಜನೆಯಾಗಿ ಶಿಕ್ಷಣ ಸಂಸ್ಥೆಗಳನ್ನು ಬಳಸಿಕೊಳ್ಳುತ್ತಿದ್ದಾರೆ. ಹಾಗಾಗಿ ಸೇವೆ ಎನ್ನುವುದು ದುರ್ಲಭವಾಗಿದೆ. ಬಹಳಷ್ಟು ಶಿಕ್ಷಣ ಸಂಸ್ಥಾಪಕರಿಗೆ ಶಿಕ್ಷಣದ ಗುರಿ ಗೊತ್ತಿಲ್ಲ ಎಂದರು.

ಶಿಕ್ಷಣದ ಉದ್ದೇಶ ಮನುಷ್ಯನ ಮೃಗೀಯ ಗುಣಗಳನ್ನು ಹೋಗಲಾಡಿಸಿ ಮನುಷ್ಯತ್ವ ತುಂಬುವುದು. ಉನ್ನತ ಶಿಕ್ಷಣ ಪಡೆದು ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವ ಘಟನೆಗಳನ್ನು ನೋಡುತ್ತಿದ್ದೇವೆ. ಇಂಜಿನಿಯರಿಂಗ್ ಪದವಿ ಪಡೆದ ಯುವಕ ಬಾಂಬ್ ತಯಾರಿಕೆಯಲ್ಲಿ ತೊಡಗಿದ್ದಾರೆ ಎಂದರೆ ಇವತ್ತಿನ ಶಿಕ್ಷಣದ ಮೌಲ್ಯವನ್ನು ಅರ್ಥ ಮಾಡಿಕೊಳ್ಳಬೇಕು. ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳನ್ನು ಉತ್ತಮ ಪ್ರಜೆಗಳನ್ನಾಗಿ ರೂಪಿಸಬೇಕು ಎಂದರು.

ವಿಮಾನ ತರಬೇತಿ ಪಡೆದ ಹೆಗ್ಗೋಡಿನ ಚಂದನ ಎಸ್. ಭಾಗಿ ಅವರನ್ನು ಸನ್ಮಾನಿಸಿ ಅಭಿನಂದಿಸಲಾಯಿತು.
ಮಹೋತ್ಸವ ಸಮಿತಿ ಗೌರವಾಧ್ಯಕ್ಷ ಸತ್ಯನಾರಾಯಣ ಭಾಗಿ ಮತ್ತು ಶಶಿಕಲಾ ದಂಪತಿಯನ್ನು ಸನ್ಮಾನಿಸಲಾಯಿತು. ವಿ.ಸಂ.ಸಂಸ್ಥೆಯ ಅಧ್ಯಕ್ಷ ಕೇಶವ ಸಂಪೆಕೈ ಅಧ್ಯಕ್ಷತೆ ವಹಿಸಿದ್ದರು.

ರೋಟರಿ ರೆಡ್‌ಕ್ರಾಸ್ ರಕ್ತ ನಿಧಿ ಕೇಂದ್ರದ ಅಧ್ಯಕ್ಷ ಡಾ.ಎಚ್.ಎಂ.ಶಿವಕುಮಾರ್, ಎನ್.ಎಸ್.ತಿಮ್ಮಪ್ಪ, ನಾಗರಾಜ್ ಸಭಾಹಿತ್, ಎಂ.ಎಸ್.ನಾಗರಾಜ್, ಬಿ.ಎನ್.ನಾಗರಾಜ, ವಿಠ್ಠಲ ಪೈ, ನಾಗೇಂದ್ರ ಗುಮ್ಮಾನಿ, ಎಂ.ಎಂ.ತಿಮ್ಮಪ್ಪ, ಎ.ಎಸ್.ಗಣಪತಿ ಮತ್ತಿತರರು ಹಾಜರಿದ್ದರು.

Malnad Times

Recent Posts

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

6 hours ago

Rain Alert | ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…

6 hours ago

ಕಾಫಿನಾಡಿನಲ್ಲಿ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಸುರಿದ ಭಾರಿ ಮಳೆ

ಚಿಕ್ಕಮಗಳೂರು: ಕಳೆದ ಹಲವು ದಿನಗಳಿಂದ ಬೇಸಿಗೆಯ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಮಂಗಳವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಭಾರಿ…

8 hours ago

ಪತಿ ಸಾವಿನ ನೋವಿನಲ್ಲೂ ಮತದಾನ ಮಾಡಿದ ಮಹಿಳೆ !

ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…

18 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆ | ಶೇ. 78.24 ಮತದಾನ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…

19 hours ago

Accident | ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಸಾವು !

ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

20 hours ago