ಶಿವಮೊಗ್ಗ ; ಕಾಂಗ್ರೆಸ್ ಮುಖಂಡನ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಶಿವಮೊಗ್ಗ : ಇಲ್ಲಿನ ಕಾಮಾಕ್ಷಿ ಬೀದಿಯ ನಿವಾಸಿ, ಶಿವಮೊಗ್ಗ ಕಾಂಗ್ರೆಸ್ ಮುಖಂಡರೊಬ್ಬರ ತಾಯಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಾಮಾಕ್ಷಿ ಬೀದಿಯ ಸರೋಜಮ್ಮ (85) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವವರು. ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎನ್.ರಮೇಶ್ ಅವರ ತಾಯಿ ಇವರಾಗಿದ್ದು, ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನಂಜುಂಡಪ್ಪ ಹಾಗೂ ಸರೋಜಮ್ಮ ವೃದ್ಧ ದಂಪತಿ ಕಾಮಾಕ್ಷಿ ಬೀದಿಯ ಮನೆಯೊಂದರಲ್ಲಿ ವಾಸವಾಗಿದ್ದರು. ಗುರುವಾರ ಬೆಳಗ್ಗೆ ಪತಿ ನಂಜುಡಪ್ಪ ದೋಸೆ ತರಲು ಹೋಟೆಲ್ಗೆ ಹೋದಾಗ ಇವರು ನೇಣಿಗೆ ಶರಣಾಗಿದ್ದಾರೆ. ಮೃತರಿಗೆ ಒಬ್ಬರು ಹೆಣ್ಣು, ನಾಲ್ಕು ಗಂಡು ಮಕ್ಕಳಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲು ಮಾಡಿಕೊಂಡು ತನಿಖೆಯನ್ನು ಮುಂದುವರಿಸಿದ್ದಾರೆ.