ಶಿವಮೊಗ್ಗ: ಮುಂಬೈನಿಂದ ಬಂದ ಖಾಸಗಿ ಬಸ್ನಲ್ಲಿ ಅಕ್ರಮವಾಗಿ ಬರೋಬ್ಬರಿ 10 ಕೋಟಿ ರೂ. ಸಾಗಿಸಲಾಗುತ್ತಿದೆ ಎಂಬ ಠಾಣೆಗೆ ಬಂದ ಅನಾಮಿಕ ಕರೆಯನ್ನಾಧರಿಸಿ ದಾಳಿ ನಡೆಸಿದ್ದ ಪೊಲೀಸರಿಗೆ ಸಿಕ್ಕಿದ್ದು 8 ಲಕ್ಷ ರೂ. ಮೌಲ್ಯದ ಬಟ್ಟೆ ಬಂಡಲ್. ಇದು ಶಿವಮೊಗ್ಗ ದೊಡ್ಡಪೇಟೆ ಠಾಣೆ ಪೊಲೀಸರ ವಿಶೇಷ ಕಾರ್ಯಾಚರಣೆ.
ಶುಕ್ರವಾರ ರಾತ್ರಿ ಮುಂಬೈನಿಂದ ಹೊರಟ ಈಸ್ಟ್ ವೆಸ್ಟ್ ಬಸ್ನಲ್ಲಿ ಬಟ್ಟೆ ಬಂಡಲ್ಗಳಲ್ಲಿ ಅಕ್ರಮವಾಗಿ ಕೋಟಿ ಕೋಟಿ ರೂ. ಹಣ ಸಾಗಿಸಲಾಗುತ್ತಿದೆ ಎಂದು ದೂರು ಬಂದಿತ್ತು. ಆ ದೂರಿನನ್ವಯ ಶನಿವಾರ ಬೆಳಗ್ಗೆ ಬಿ.ಎಚ್.ರಸ್ತೆಯ ಸೋಮಯ್ಯ ಲೇಔಟ್ಗೆ ಸಾಗುವ ಕ್ರಾಸ್ ಬಳಿ ದಾಳಿ ನಡೆಸಿದ ಪೊಲೀಸರಿಗೆ ಲಕ್ಷಾಂತರ ರೂ. ಮೌಲ್ಯದ ಬಟ್ಟೆ ಬಂಡಲ್ಗಳು ಸಿಕ್ಕಿದೆ.
ದೊಡ್ಡಪೇಟೆ ಠಾಣೆ ಪಿಎಸ್ಐ ವಸಂತ್ ನೇತೃತ್ವದಲ್ಲಿ ಐವರು ಪೇದೆಗಳು ಬಸ್ನ್ನು ತಡೆದು ತಪಾಸಣೆಗೆ ಒಳಪಡಿಸಿದಾಗ ದಾಖಲೆ ಇಲ್ಲದ ಶಿವಮೊಗ್ಗ, ಭದ್ರಾವತಿ ಸೇರಿ ಜಿಲ್ಲೆಯ ಹಲವು ಬಟ್ಟೆ ಅಂಗಡಿಗಳ 40 ಬಂಡಲ್ ಬಟ್ಟೆ ಪತ್ತೆಯಾಗಿವೆ. ಬಟ್ಟೆ ಬಂಡಲ್ನಲ್ಲಿ ಹಣ ಸಾಗಿಸಲಾಗುತ್ತಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ವೀರಭದ್ರೇಶ್ವರ ಟಾಕೀಸ್ ಬಳಿಯಿರುವ ಈಸ್ಟ್ ವೆಸ್ಟ್ ಕಚೇರಿ ಬಳಿ ಪ್ರಯಾಣಿಕರನ್ನೂ ತಪಾಸಣೆಗೆ ಒಳಪಡಿಸಲಾಗಿದೆ.
ವಿವಿಧ ಬಟ್ಟೆ ಅಂಗಡಿಗಳಿಗೆ ಸೇರಿದ ಬಟ್ಟೆಗಳ ಮೌಲ್ಯ 8 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಎಲ್ಲ ಬಟ್ಟೆ ಸರಕುಗಳನ್ನು ವಾಣಿಜ್ಯ ತೆರಿಗೆ ಸಿಟಿಒ ಅಧಿಕಾರಿ ನಾಗರಾಜ್ ಅವರಿಗೆ ಹಸ್ತಾಂತರಿಸಲಾಗಿದೆ.
ಹೊಸನಗರ: ತಾಲ್ಲೂಕಿನ ವಾರಂಬಳ್ಳಿಯ ಗ್ರಾಮಸ್ಥರು ತಮ್ಮ ಗ್ರಾಮದಲ್ಲಿ ಮೊಬೈಲ್ ಟವರ್ ನಿರ್ಮಾಣಕ್ಕೆ ಮನವಿ ಮಾಡಿಕೊಂಡಿದ್ದು ಈವರೆಗೂ ಬೇಡಿಕೆ ಈಡೇರದೆ ಚುನಾವಣೆ…
ರಿಪ್ಪನ್ಪೇಟೆ : ಅರಸಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿಂದು ದರಗೆಲೆ ತರಲೆಂದು ಕಾಡಿಗೆ ತೆರಳಿದ್ದ ಕೂಲಿ ಕೆಲಸಗಾರ ತಿಮ್ಮಪ್ಪ…
ರಿಪ್ಪನ್ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿಯಾದ ಘಟನೆ ನಡೆದಿದೆ. ತಿಮ್ಮಪ್ಪ ಬಿನ್…
ರಿಪ್ಪನ್ಪೇಟೆ: ಕಳೆದ ವಿಧಾನಸಭಾ ಚುನಾವಣೆಯ ವೇಳೆ ನಮ್ಮ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಮನೆಗೆ ತಲುಪಿಸುವಾಗ ಬಿಜೆಪಿಯವರು ಗ್ಯಾರಂಟಿ…
ಶಿವಮೊಗ್ಗ: ಪ್ರಜ್ವಲ್ ರೇವಣ್ಣನಂತಹ ಅತ್ಯಾಚಾರಿಯ ಪರ ಮತಯಾಚಿಸಿದ ಪ್ರಧಾನಿ ಮೋದಿ ಅವರು ಈ ದೇಶದ ಹೆಣ್ಣುಮಕ್ಕಳ ಕ್ಷಮೆ ಕೇಳಬೇಕು ಎಂದು…
ರಿಪ್ಪನ್ಪೇಟೆ: ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. ಮಧ್ಯಾಹ್ನ 12:30…