Categories: Shivamogga

ಶಿವಮೊಗ್ಗ ಜಿಲ್ಲೆಯಲ್ಲಿ 4ನೇ ದಿನಕ್ಕೆ ಕಾಲಿಟ್ಟ ಜೆಡಿಎಸ್ ಪಂಚರತ್ನ ರಥಯಾತ್ರೆ

ತೀರ್ಥಹಳ್ಳಿ: ಶಿವಮೊಗ್ಗ ಜಿಲ್ಲೆಯಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆ 4ನೇ ದಿನಕ್ಕೆ ಕಾಲಿಟ್ಟಿದ್ದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಲ್ಲಿ ಇಂದು ಮುಂದುವರೆಯಲಿದೆ.

ಹುಂಚದಕಟ್ಟೆಯಿಂದ ಇಂದು ಪಂಚರತ್ನ ರಥಯಾತ್ರೆ ಆರಂಭವಾಗಲಿದ್ದು ಮಾಜಿ ಸಿಎಂ ಹೆಚ್ ಡಿಕೆ ನೇತೃತ್ವದಲ್ಲಿ ಜೆಡಿಎಸ್ ಅಭ್ಯರ್ಥಿ ಯಡೂರು ರಾಜಾರಾಮ್ ಪರ ಮತಯಾಚನೆ ಮಾಡಲಿದ್ದಾರೆ.

ನಿಟ್ಟೂರು ನಾರಾಯಣ ಗುರು ಮಠದಲ್ಲಿ ಜನರೊಂದಿಗೆ ಸಂವಾದ ನಡೆಸಲಿರುವ ಹೆಚ್ ಡಿಕೆ, ನಂತರ ಹೊಂಬುಜ ಪದ್ಮಾವತಿ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲ್ಲಿದ್ದಾರೆ.

ಆರಗ ಗ್ರಾಮದಲ್ಲಿ ಜೆಡಿಎಸ್ ಮುಖಂಡರ ಸಭೆ ನಡೆಸಿ ನಂತರ ತೀರ್ಥಹಳ್ಳಿಯಲ್ಲಿ ಸಭೆ ನಡೆಸಿ ಭೀಮನಕಟ್ಟೆ ಮಠ ಮಾರ್ಗವಾಗಿ ಮೇಗರವಳಿ ಗ್ರಾಮದ ಬಳಿ ಎಲೆಚುಕ್ಕಿ ರೋಗದ ತೋಟ ವೀಕ್ಷಣೆ ಮಾಡಿ ರೈತರ ಸಂಕಷ್ಟ ಹೆಚ್ಡಿಕೆ ಆಲಿಸಲಿದ್ದಾರೆ.

ಹೆಗ್ಗೋಡು ಬಳಿಕ ಕಮ್ಮರಡಿ ಗ್ರಾಮದಲ್ಲಿ ಸಭೆ ನಂತರ ಕ್ಷೇತ್ರ ಹಲವು ಗ್ರಾಮಗಳಲ್ಲಿ ಸಂಚರಿಸಲಿದ್ದು ಮಧ್ಯಾಹ್ನ ಶೃಂಗೇರಿಯತ್ತ ಪಂಚರತ್ನ ರಥಯಾತ್ರೆ ಪ್ರಯಾಣ ಬೆಳೆಯಲಿದೆ.

ಶೃಂಗೇರಿ ಕ್ಷೇತ್ರದ ಬೇಗೂರು ಕೈಮರ, ಹೊಳೆಕೊಪ್ಪ ಸೇರಿದಂತೆ ಹಲವು ಗ್ರಾಮಗಳಲ್ಲಿ ಪ್ರಚಾರ ನಡೆಸಿ ನಂತರ ಶೃಂಗೇರಿ ಮಠಕ್ಕೆ ಹೆಚ್ಡಿಕೆ ಭೇಟಿ ನೀಡಲಿದ್ದಾರೆ‌. ಅಂತಿಮವಾಗಿ ಶೃಂಗೇರಿ ವೈಕುಂಠಪುರದ ಮೈದಾನದಲ್ಲಿ ವಾಸ್ತವ್ಯ ಹೂಡಲಿದ್ದಾರೆ‌.

Malnad Times

Recent Posts

ಫಲಿತಾಂಶ ಹೊರಬರಲಿ ಗ್ಯಾರಂಟಿಯೋ, ಅಭಿವೃದ್ದಿಯೋ ತಿಳಿಯಲಿದೆ ; ಬಿ.ವೈ. ರಾಘವೇಂದ್ರ

ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…

7 hours ago

ಹೆಮ್ಮಕ್ಕಿ ಶ್ರೀ ಭದ್ರಕಾಳಿ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಜೀರ್ಣಾಷ್ಟಬಂಧ ಮತ್ತು ಬ್ರಹ್ಮ ಕಲಶಾಭಿಷೇಕ

ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…

9 hours ago

ರಜತ ಉತ್ಸವದ ಗಣಪತಿ ಮೂರ್ತಿಯನ್ನು ದೇವಸ್ಥಾನಕ್ಕೆ ಸಮರ್ಪಣೆ

ರಿಪ್ಪನ್‌ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್‌ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…

10 hours ago

ರಾಜಕೀಯದ ಪರಿಜ್ಞಾನವೇ ಇಲ್ಲದವರು ಸಂಸತ್‌ಗೆ ಹೋದರೆ ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಹೇಗೆ ಸಾಧ್ಯ ; ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…

10 hours ago

ಒಂದೇ ಪರವಾನಗಿಯಲ್ಲಿ ಎರಡು ಕಡೆ ನಾಟಾ ಸಾಗಾಟ ; ಅಕ್ರಮದ ಶಂಕೆ !?

ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…

11 hours ago

ಗೀತಕ್ಕ ಗೆಲುವು ಕ್ಷೇತ್ರದ ಸ್ವಾಭಿಮಾನದ ಪ್ರಶ್ನೆ, ಪ್ರಚಾರ ಸಭೆಯಲ್ಲಿ ನಟ ದುನಿಯಾ ವಿಜಯ್ ಹೇಳಿಕೆ

ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…

14 hours ago