Categories: Shivamogga

ಶಿವಮೊಗ್ಗ ವಿಮಾನ ಹಾರಾಟ ಆ.31ರಿಂದ ಆರಂಭ | ಉಡಾನ್ ಯೋಜನೆಯಡಿ ತಿರುಪತಿ, ಗೋವಾ, ಹೈದರಾಬಾದ್‌‌ಗೂ ವಿಮಾನ‌ ; ಎಂ.ಬಿ.ಪಾಟೀಲ

ಶಿವಮೊಗ್ಗ : ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 31ರಿಂದ ತನ್ನ‌ ಕಾರ್ಯಾಚರಣೆ ಆರಂಭಿಸಲಿದ್ದು ಅಂದು‌ ಮೊದಲ ವಿಮಾನದಲ್ಲಿ ಪ್ರಯಾಣಿಸುವ ಭಾಗ್ಯ ಮಲೆನಾಡಿನ ಜನರಿಗೆ ಸಿಗಲಿದೆ.

ಈ ಮುಂಚೆ ಆಗಸ್ಟ್ 11ರಿಂದ ಆರಂಭವಾಗಬೇಕಿತ್ತು. ತಾಂತ್ರಿಕ ಕಾರಣಗಳಿಂದ 31ಕ್ಕೆ ಹೋಗಿದ್ದು ಇಂಡಿಗೊ‌ ಏರ್ ಲೈನ್ಸ್ ತನ್ನ ಬುಕ್ಕಿಂಗ್ ಅನ್ನು ಆರಂಭಿಸಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

ತಿರುಪತಿಗೂ ಸಂಪರ್ಕ:
ಶಿವಮೊಗ್ಗದಿಂದ ತಿರುಪತಿ, ಗೋವಾ ಮತ್ತು ಹೈದರಾಬಾದ್ ನಗರಗಳಿಗೆ ಉಡಾನ್ ಯೋಜನೆಯಡಿ ವಿಮಾನಯಾನ ಸೇವೆ ನೀಡಲು ಮೂರು ಏರ್ ಲೈನ್ಸ್ ಸಂಸ್ಥೆಗಳಿಗೆ ಅನುಮತಿ ಸಿಕ್ಕಿದೆ ಎಂದೂ ಸಚಿವರು ತಿಳಿಸಿದ್ದಾರೆ.


ಸ್ಪೈಸ್ ಜೆಟ್, ಸ್ಟಾರ್ ಏರ್ ಲೈನ್ಸ್ ಮತ್ತು ಅಲಯನ್ಸ್ ಏರ್ ಸಂಸ್ಥೆಗಳು ಈ ರಹದಾರಿಗಳಲ್ಲಿ ವಿಮಾನ ಸಂಚಾರ ಮಾಡುವ ಸಂಬಂಧ ಕರೆದಿದ್ದ ಟೆಂಡರ್ ನಲ್ಲಿ ಭಾಗವಹಿಸಿ ಯಶಸ್ವಿಯಾಗಿವೆ.
ಸದ್ಯಕ್ಕೆ ಹಗಲು ವೇಳೆಯ ವಿಮಾನ ಸಂಚಾರ ಮಾತ್ರ ಇರುತ್ತದೆ. ರಾತ್ರಿ ವೇಳೆ ಲ್ಯಾಂಡಿಂಗ್ ವ್ಯವಸ್ಥೆಗೆ ಸಂಬಂಧಿಸಿದ ಕಾಮಗಾರಿ ಪ್ರಗತಿಯಲ್ಲಿದ್ದು ಆದಷ್ಟು ಬೇಗ ಮುಗಿಯಲಿದೆ ಎಂದು ಅವರು ವಿವರಿಸಿದ್ದಾರೆ.

ಉಡಾನ್ ಯೋಜನೆಯಡಿ ಅನುಮತಿ ಪಡೆದಿರುವ ವಿಮಾನಯಾನ ಸಂಸ್ಥೆಗಳೂ ವಿಮಾನ ಸಂಚಾರಕ್ಕೆ ಸಿದ್ಧತೆ ನಡೆಸಿದ್ದು, ನಾಗರಿಕ ವಿಮಾನಯಾನ ನಿರ್ದೇಶನಾಲಯದ ಅನುಮತಿ ಸಿಕ್ಕ ನಂತರ ಅವೂ ಕಾರ್ಯಾಚರಣೆ ನಡೆಸಲಿವೆ ಎಂದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

22 hours ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

1 day ago