ಶಿವಮೊಗ್ಗ ಹಾಗೂ ಹೊಸನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳ ದಾಳಿ

0 77

ಶಿವಮೊಗ್ಗ/ಹೊಸನಗರ : ಶಿವಮೊಗ್ಗ ನಗರದ ಗಾಂಧಿ ಬಜಾರ್ ಹಾಗೂ ಹೊಸನಗರದಲ್ಲಿ ಲೋಕಾಯುಕ್ತ ಅಧಿಕಾರಿಗಳು ಇಂದು ಬೆಳಂಬೆಳಗ್ಗೆ ದಾಳಿ ನಡೆಸಿದ್ದಾರೆ‌.

4 ಜೀಪ್’ನಲ್ಲಿ ಬಂದ 10ಕ್ಕೂ ಹೆಚ್ಚು ಅಧಿಕಾರಿಗಳು ಬಿಬಿಎಂಪಿ ಚೀಫ್ ಇಂಜಿನಿಯರ್ ರಂಗನಾಥ್ ಅವರ ಪತ್ನಿ ಮನೆ ಮತ್ತು ಕಾಂಪ್ಲೆಕ್ಸ್ ಮೇಲೆ ದಾಳಿ ನಡಿಸಿದ್ದಾರೆ.

ಶಿವಮೊಗ್ಗ ನಗರದ ಗಾಂಧಿಬಜಾರ್ ನ ಕರಿದೇವರ ಕೆರೆಯಲ್ಲಿರುವ ರಂಗನಾಥ ನಿಲಯ ಹಾಗೂ ನಾರಾಯಣ ಕಾಂಪ್ಲೆಕ್ಸ್ ಮೇಲೆ ದಾಳಿ ನಡೆಸಿ ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ.

ಅದೇ ರೀತಿ ಕಾರವಾರದ ಅಬಕಾರಿ ಅಧಿಕಾರಿ ಡಿ. ರೂಪ ಎಂಬುವರಿಗೆ ಸೇರಿದ ಹೊಸನಗರ ತಾಲೂಕಿನ ಮಳಲಿ ಗ್ರಾಮದಲ್ಲಿರುವ ತೋಟದ ಮನೆ ಮೇಲೂ ಸಹ ದಾಳಿ ನಡೆಸಿದ್ದಾರೆ‌.

ಸತತ ಎರಡು ಗಂಟೆಗಳಿಗೂ ಹೆಚ್ಚು ಕಾಲ ದಾಖಲೆ ಪರಿಶೀಲನೆ ನಡೆಸಿದ್ದಾರೆ.

Leave A Reply

Your email address will not be published.

error: Content is protected !!