Categories: Shivamogga

ಶಿವಮೊಗ್ಗ ; 11.45 ಲಕ್ಷ ಪಡಿತರದಾರರ ಖಾತೆಗೆ ₹18.49 ಕೋಟಿ ಜಮೆ

ಶಿವಮೊಗ್ಗ : ಅನ್ನ ದೇವರಿಗಿಂತ ಇನ್ನು ದೇವರು ಇಲ್ಲ ಎನ್ನುವ ಸರ್ವಜ್ಞರ ಕವಿವಾಣಿಯಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೊದಲ ಬಾರಿ ಮುಖ್ಯಮಂತ್ರಿಯಾದ ಅವಧಿಯಲ್ಲಿ ಉಚಿತ ಅಕ್ಕಿ ನೀಡುವ ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದರು.


ಹಸಿವು ಮುಕ್ತ ರಾಜ್ಯ ಮಾಡುವ ಗುರಿಯನ್ನಿಟ್ಟುಕೊಂಡು 2013 ರಲ್ಲಿ ರಾಜ್ಯದ ಚುಕ್ಕಾಣಿ ಹಿಡಿದಾಗ ಬಸವಣ್ಣನವರ ದಾಸೋಹ ಸಂಸ್ಕೃತಿಯಂತೆ ಹಸಿವು ಮುಕ್ತ ಕರ್ನಾಟಕ ಮಾಡುವ ತಮ್ಮ ಜೀವಮಾನದ ಆಶಯ ಮತ್ತು ಕಾಳಜಿಯ ಭಾಗವಾಗಿ ರೂಪಿಸಿದ ಯೋಜನೆ ಅನ್ನಭಾಗ್ಯ.
ಆಹಾರ ಭದ್ರತಾ ಯೋಜನೆಯಡಿ ಪ್ರತಿಯೊಬ್ಬ ಪಡಿತರದಾರನಿಗೆ ತಲಾ 10 ಕೆಜಿ ಆಹಾರಧಾನ್ಯ ಒದಗಿಸುವ ಯೋಜನೆ ಅನ್ನಭಾಗ್ಯ. ಪ್ರಸ್ತುತ ಹೆಚ್ಚುವರಿ ಅಕ್ಕಿಯ ಅಲಭ್ಯತೆಯ ಹೊರತಾಗಿಯೂ ಸರ್ಕಾರ ಕೈಚೆಲ್ಲಿ ಕುಳಿತಿಲ್ಲ. ಜನರಿಗೆ ನೀಡದ ವಾಗ್ದಾನದಂತೆ ಬಿಪಿಎಲ್ ಕುಟುಂಬದ ಸದಸ್ಯರಿಗೆ 5 ಕೆಜಿ ಅಕ್ಕಿಯ ಬದಲಾಗಿ ತಲಾ ರೂ.170 ಕುಟುಂಬದ ಯಜಮಾನಿಯ ಖಾತೆಗೆ ಹಾಕುವ ಕ್ರಾಂತಿಕಾರಕ ಕ್ರಮಕ್ಕೆ ಸರ್ಕಾರ ಈಗಾಗಲೇ ಚಾಲನೆ ನೀಡಿದೆ.


ಅಂತ್ಯೋದಯ ಅನ್ನ ಯೋಜನೆ, ಆದ್ಯತಾ ಕುಟುಂಬ ಪಡಿತರ ಚೀಟಿಗಳು ಮತ್ತು ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ವಿತರಿಸಲಾಗಿರುವ ಆದ್ಯತಾ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ ಈ ಯೋಜನೆ ಅನ್ವಯ.
ಸರ್ಕಾರ ರಚನೆಯಾದ ನಂತರ ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ 5 ಕೆಜಿ ಅಕ್ಕಿ ನೀಡಲು ಸಿದ್ದತೆಗಳನ್ನು ನಡೆಸಲಾಯಿತು. ಆದರೆ ರಾಜ್ಯದಲ್ಲಿ ಅಷ್ಟೊಂದು ಅಕ್ಕಿ ದಾಸ್ತಾನು ಇಲ್ಲದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಅಕ್ಕಿ ಖರೀದಿಸಲು ಪ್ರಯತ್ನ ನಡೆಸಿತು. ಜೂನ್ 23 ರಂದು ಸ್ವತಃ ಮುಖ್ಯಮಂತ್ರಿ ಅವರೇ ದೆಹಲಿಗೆ ತೆರಳಿ ಕೇಂದ್ರ ಗೃಹ ಮಂತ್ರಿಗಳಾದ ಅಮಿತ್ ಷಾ ಅವರನ್ನು ಭೇಟಿ ಮಾಡಿ ತಮ್ಮ ಬೇಡಿಕೆಗಳನ್ನು ಸಲ್ಲಿಸಿ ಬಂದಿದ್ದರು.

ಕೇಂದ್ರ ಸರ್ಕಾರ ಅಕ್ಕಿಯನ್ನು ನೀಡಲು ಸಾಧ್ಯವಿಲ್ಲವೆಂದಾಗ, ಫಲಾನುಭವಿಗಳಿಗೆ ನಗದು ನೀಡುವುದರಿಂದ ಅನುಕೂಲವಾಗುತ್ತದೆ ಎಂದರಿತು ಈ ನಿಟ್ಟಿನಲ್ಲಿ ತೀರ್ಮಾನ ಕೈಗೊಳ್ಳಲಾಯಿತು.

‘ನೆಮ್ಮದಿಯ ಬದುಕಿಗೆ ಆಹಾರ ಭದ್ರತೆ ಅನ್ನಭಾಗ್ಯ’ ಎನ್ನುವ ಘೋಷವಾಕ್ಯದೊಂದಿಗೆ ಜುಲೈ 10 ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳು ಹಾಗೂ ಕಾನೂನು ಮಾಪನಶಾಸ್ತ್ರ ಇಲಾಖೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅನ್ನಭಾಗ್ಯ ಯೋಜನೆಯ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆಗೆ ಚಾಲನೆ ನೀಡಲಾಯಿತು.

ಆ.28 ಕ್ಕೆ ಪ್ರಸ್ತುತ ಸರ್ಕಾರ ಅಧಿಕಾರಕ್ಕೆ ಬಂದು 100 ದಿನ ಪೂರೈಸಲಿದೆ. ಸರ್ಕಾರದ ವಾಗ್ದಾನದಂತೆ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಅನುಷ್ಟಾನಗೊಂಡಿದ್ದು, ಅತ್ಯುತ್ತಮ ಸ್ಪಂದನೆ ಮತ್ತು ಪ್ರತಿಕ್ರಿಯೆ ಜನರಿಂದ ಲಭ್ಯವಾಗಿದೆ.

“ನಿರೀಕ್ಷೆಗೆ ತಕ್ಕಂತೆ ಅಕ್ಕಿ ಸಿಗದ ಹಿನ್ನೆಲೆಯಲ್ಲಿ ಸರ್ಕಾರ ಫಲಾನುಭವಿಗಳ ಖಾತೆಗೆ ಐದು ಕೆಜಿ ಅಕ್ಕಿ ಬದಲು ತಲಾ ಸದಸ್ಯರಿಗೆ ರೂ.170 ಜಮೆ ಮಾಡುತ್ತಿದೆ. ಜಿಲ್ಲೆಯಲ್ಲಿ ಜುಲೈ ಮಾಹೆಯಲ್ಲಿ ಒಟ್ಟು 3,08,429 ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್‌ದಾರರಿದ್ದು ಈ ಕುಟುಂಬಗಳ 10,03.264 ಸದಸ್ಯರಿಗೆ ರೂ.17,46,73,810/- ಗಳನ್ನು ಜಮೆ ಮಾಡಲಾಗಿದೆ. ಹಾಗೂ ಆಗಸ್ಟ್ ಮಾಹೆಯಲ್ಲಿ ಒಟ್ಟು 3,25,156 ಕಾರ್ಡ್‌ಗಳ ಕುಟುಂಬದ 11,45,683 ಸದಸ್ಯರಿಗೆ ರೂ.18,49,56,430 ಜಮೆ ಮಾಡಲಾಗಿದೆ.
ಅನ್ನಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಸಾರ್ವಜನಿಕರಲ್ಲಿ ಯಾವುದೇ ದೂರುಗಳಿದ್ದರೆ ಉಚಿತ ಸಹಾಯವಾಣಿ ಸಂಖ್ಯೆ 1967 ಹಾಗೂ 1800 425 9339 ಕ್ಕೆ ಕರೆ ಮಾಡಬಹುದು. ಹಾಗೂ ನ್ಯಾಯಬೆಲೆ ಅಂಗಡಿಯ ವ್ಯಾಪ್ತಿಯಲ್ಲಿ ಅಧಿಕಾರಿಯೊಬ್ಬರ ಸಮ್ಮುಖದಲ್ಲಿ ನಿರ್ದಿಷ್ಟ ದಿನಾಂಕದಂದು ಅನ್ನಭಾಗ್ಯ ಅದಾಲತ್ ನಡೆಸಲಾಗುತ್ತದೆ.”
– ಅವಿನ್ ಆರ್, ಉಪ ನಿರ್ದೇಶಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಶಿವಮೊಗ್ಗ.

“ಅನ್ನಭಾಗ್ಯ ಯೋಜನೆ ನಮ್ಮಂತಹ ಬಡವರಿಗೆ ವರದಾನವಾಗಿದೆ. ಅನೇಕರು ಏನೇನೋ ಟೀಕೆ ಮಾಡುತ್ತಿದ್ದಾರೆ. ಆದರೆ ಆ ಟೀಕೆಗಳಿಗೆ ಅರ್ಥವಿಲ್ಲ. ಮುಖ್ಯಮಂತ್ರಿಯವರು 5 ಕೆಜಿ ಅಕ್ಕಿ ಬದಲಾಗಿ ಹಣ ನೀಡುತ್ತಿರುವುದು ಸಹ ತುಂಬಾ ಉಪಯೋಗವಾಗಿದೆ. ಈ ಹಣದಿಂದ ಅಕ್ಕಿ ಅಥವಾ ಇತರೆ ದಿನಸಿ, ಆರೋಗ್ಯ ಇನ್ನಿತರೆ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದೇವೆ.”
– ಮಂಜಣ್ಣ, ಮಾಚೇನಹಳ್ಳಿ ಫಲಾನುಭವಿ

“ನಾನು ಮತ್ತು ನನ್ನ ಪತಿ ಕೂಲಿ ಮಾಡುತ್ತಿದ್ದು, ಅದರಿಂದಲೇ ಮಕ್ಕಳ ಶಿಕ್ಷಣ ಹಾಗೂ ನಮ್ಮ ಕುಟುಂಬ ನಿರ್ವಹಣೆ ಮಾಡಬೇಕಿದೆ. ಹಸಿದವರಿಗೇ ಗೊತ್ತು ಅನ್ನದ ಬೆಲೆ. ಸರ್ಕಾರ ನೀಡುತ್ತಿರುವ ಅಕ್ಕಿಯಿಂದ ನಮ್ಮ ಜೀವನ ಸಾಗುತ್ತಿದೆ. ಈಗ ಅಕ್ಕಿ ಬದಲು ಹಣ ನೀಡುತ್ತಿರುವುದರಿಂದ ಇತರೆ ಅಗತ್ಯಗಳನ್ನು ಪೂರೈಸಿಕೊಳ್ಳುತ್ತಿದ್ದೇವೆ. ಸರ್ಕಾರಕ್ಕೆ ಧನ್ಯವಾದಗಳು”
– ರಾಮಕ್ಕ, ಸೋಗಾನೆ ಫಲಾನುಭವಿ

Malnad Times

Recent Posts

ಕಾಫಿನಾಡಿನಲ್ಲಿ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಸುರಿದ ಭಾರಿ ಮಳೆ

ಚಿಕ್ಕಮಗಳೂರು: ಕಳೆದ ಹಲವು ದಿನಗಳಿಂದ ಬೇಸಿಗೆಯ ಬಿಸಿ ಗಾಳಿಯಿಂದ ಕಂಗೆಟ್ಟಿದ್ದ ಜನರಿಗೆ ಮಂಗಳವಾರ ಮಧ್ಯಾಹ್ನ ಆಲಿಕಲ್ಲು ಸಹಿತ ಗುಡುಗು, ಸಿಡಿಲಬ್ಬರದಿಂದ ಭಾರಿ…

1 hour ago

ಪತಿ ಸಾವಿನ ನೋವಿನಲ್ಲೂ ಮತದಾನ ಮಾಡಿದ ಮಹಿಳೆ !

ತೀರ್ಥಹಳ್ಳಿ : ಪತಿ ಸಾವಿನ ನೋವಿನಲ್ಲೂ ಮತಗಟ್ಟೆ ಕೇಂದ್ರಕ್ಕೆ ಆಗಮಿಸಿ ಮಹಿಳೆ ಮತದಾನ ಮಾಡಿರುವಂತಹ ಘಟನೆ ಗುಡ್ಡೇಕೊಪ್ಪ ಗ್ರಾಪಂ ವ್ಯಾಪ್ತಿಯ…

11 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆ | ಶೇ. 78.24 ಮತದಾನ

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ನಡೆದ ಚುನಾವಣೆಯಲ್ಲಿ ಶೇ. 78.24 ರಷ್ಟು ಮತ ಚಲಾವಣೆಯಾಗಿದ್ದು, ಅಂಕಿ ಅಂಶಗಳ…

13 hours ago

Accident | ಗೂಡ್ಸ್ ವಾಹನ ಮತ್ತು ಬೈಕ್ ನಡುವೆ ಭೀಕರ ಅಪಘಾತ, ಸವಾರ ಸ್ಥಳದಲ್ಲೇ ಸಾವು !

ಶಿವಮೊಗ್ಗ : ಗೂಡ್ಸ್ ವಾಹನ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ…

14 hours ago

ಹೊಸನಗರ ಪಟ್ಟಣದ ಮತಗಟ್ಟೆ ಸಂಖ್ಯೆ 258 ರಲ್ಲಿ ಮತಯಂತ್ರ ದೋಷ, ಅರ್ಧ ಗಂಟೆ ಸ್ಥಗಿತಗೊಂಡ ಮತದಾನ

ಹೊಸನಗರ: ಪಟ್ಟಣದ ಹೈಸ್ಕೂಲ್‌ನಲ್ಲಿನ ಮತಗಟ್ಟೆ ಸಂಖ್ಯೆ 258 ರಲ್ಲಿ ಅಲ್ಪ ಸಮಯದ ಕಾಲ ಇ.ವಿ.ಎಂ ತಾಂತ್ರಿಕ ದೋಷದಿಂದ ಮತದಾನ ಸ್ಥಗಿತಗೊಂಡ…

15 hours ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಸಂಜೆ 5:00 ಗಂಟೆವರೆಗೆ‌ ಶೇ. 72.36 ಮತ ಚಲಾವಣೆ, ಎಲ್ಲೆಲ್ಲಿ ಎಷ್ಟೆಷ್ಟು ?

ಶಿವಮೊಗ್ಗ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಇಂದು ಮತದಾನ ನಡೆಯುತ್ತಿದ್ದು ಸಂಜೆ 5:00 ಗಂಟೆವರೆಗೆ‌ ಶೇ. 72.36 ಮತ ಚಲಾವಣೆಯಾಗಿದೆ.…

15 hours ago