Categories: Shivamogga

ಶೀಘ್ರವೇ ವಿಪಕ್ಷ ನಾಯಕನ ಆಯ್ಕೆ ; ಬಿಎಸ್‌ವೈ

ಶಿವಮೊಗ್ಗ: ಬರ ಅಧ್ಯಯನ ಪ್ರವಾಸ ಈಗಾಗಲೇ ಬಿಜೆಪಿ ಮುಖಂಡರು ಪ್ರಾರಂಭಿಸಿದ್ದಾರೆ. ನಾನು ಕೂಡ ನ.05ರಿಂದ ರಾಜ್ಯದ ವಿವಿಧೆಡೆ ನಾಯಕರೊಂದಿಗೆ ಪ್ರವಾಸ ಮಾಡಲಿದ್ದೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಭದ್ರಾವತಿ ಪ್ರತಿಷ್ಠಿತ ವಿಎಎಸ್‌ಎಲ್ ಕಾರ್ಖಾನೆ ನೂರು ವಸಂತ ದಾಟ್ಟಿದ್ದು, ಖ್ಯಾತ ನಟ ಹಾಗೂ ವಿಎಎಸ್‌ಎಲ್ ಮಾಜಿ ಉದ್ಯೋಗಿ ದೊಡ್ಡಣ್ಣರವರ ನೇತೃತ್ವದಲ್ಲಿ ನ.04 ಮತ್ತು 05ರಂದು ದೊಡ್ಡ ಸಮಾರಂಭ ಹಮ್ಮಿಕೊಳ್ಳಲಾಗಿದೆ. ಅದರಲ್ಲಿ ಭಾಗವಹಿಸಲು ಬಂದಿದ್ದೇನೆ. ಆ ಕಾರ್ಯಕ್ರಮ ಮುಗಿದ ನಂತರ ಬರ ಅಧ್ಯಯನ ಪ್ರವಾಸದಲ್ಲಿ ಭಾಗವಹಿಸುತ್ತೇನೆ. ಈಗಾಗಲೇ 18 ತಂಡಗಳ ಮೂಲಕ ಬಿಜೆಪಿ ನಾಯಕರು ರಾಜ್ಯದ ಮೂಲೆ ಮೂಲೆಗೂ ತೆರಳುತ್ತಿದ್ದಾರೆ ಎಂದರು.

ವಿಪಕ್ಷ ನಾಯಕನ ಸ್ಥಾನ ವಿಳಂಬವಾಗಿದ್ದು ನಿಜ. ಇನ್ನೂ ಕೆಲವೇ ದಿನಗಳಲ್ಲಿ ವರಿಷ್ಠರು ಪ್ರಕಟ ಮಾಡುತ್ತಾರೆ. ರಾಜ್ಯಾಧ್ಯಕ್ಷ ಸ್ಥಾನ ಕೂಡ ಪ್ರಕಟಗೊಳ್ಳಲಿದೆ. ಕಾಂಗ್ರೆಸ್ ಪಕ್ಷದಲ್ಲಿ ಇನ್ನೂ ನಾಲ್ಕು ದಿನಗಳಲ್ಲಿ ಎಂಪಿ ಚುನಾವಣೆಯ ಅಭ್ಯರ್ಥಿಗಳ ಘೋಷಣೆಯಾಗಲಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದಕ್ಕೂ ನಮಗು ಸಂಬಂಧವಿಲ್ಲ. ನಮ್ಮ ಪಕ್ಷದಿಂದ ಆದಷ್ಟು ಬೇಗ ಉತ್ತಮ ಅಭ್ಯರ್ಥಿಗಳನ್ನು ಘೋಷಣೆ ಮಾಡಲಾಗುವುದು ಮತ್ತು ಅತಿ ಹೆಚ್ಚಿನ ಸ್ಥಾನವನ್ನು ಕೂಡ ಗೆಲ್ಲುತ್ತೇವೆ. ಮೋದಿಯವರು ಮತ್ತೊಮ್ಮೆ ಅಧಿಕಾರಕ್ಕೆ ಬರುವುದು ನಿಶ್ಚಿತ. ನಮ್ಮ ಪಕ್ಷ ತನ್ನದೇ ಆದ ರೀತಿಯಲ್ಲಿ ಅಭ್ಯರ್ಥಿಗಳ ಆಯ್ಕೆ ಮಾಡುತ್ತದೆ ಎಂದರು.

ರಾಜ್ಯ ನಾಯಕರುಗಳಾದ ಕೆ.ಎಸ್.ಈಶ್ವರಪ್ಪ, ಸದಾನಂದಗೌಡ, ಕೋಟಾ ಶ್ರೀನಿವಾಸ್ ಪೂಜಾರಿ ಅವರನ್ನು  ಕೇಂದ್ರ ನಾಯಕರು ಕರೆದಿರುವ ಬಗ್ಗೆ ಉತ್ತರಿಸಿದ ಅವರು ಪಕ್ಷದ ಸಂಘಟನೆಯ ಬಗ್ಗೆ ಚರ್ಚೆಗೆ ಕರೆದಿರುತ್ತಾರೆ. ಅದರಲ್ಲಿ ಏನು ವಿಶೇಷ ಇಲ್ಲ ಎಂದರು.
ಈ ಸಂದರ್ಭದಲ್ಲಿ ಸಂಸದ ಬಿ.ವೈ.ರಾಘವೇಂದ್ರ, ನಟ ದೊಡ್ಡಣ್ಣ ರವರು ಇದ್ದರು.

ಸಿಗಂದೂರು, ತುಮುರಿ ಸೇತುವೆಯ ವಿಳಂಬಕ್ಕೆ ಪ್ರತಿಕ್ರಿಯಿಸಿದ ಸಂಸದ ಬಿ.ವೈ.ರಾಘವೇಂದ್ರ ಕೆಲವೊಂದು ತಾಂತ್ರಿಕ ತೊಂದರೆಗಳಿಂದ ಎರಡು ತಿಂಗಳು ವಿಳಂಬವಾಗುವುದು ನಿಜ. ಆದರೆ, ಪ್ರಕೃತಿಯ ಮತ್ತು ಹವಾಮಾನದ ವೈಪರಿತ್ಯದಿಂದಾಗಿ ಮಳೆ ಹೆಚ್ಚಿದ್ದರು, ಕಡಿಮೆ ಇದ್ದರೂ ಆ ಪ್ರದೇಶದಲ್ಲಿ ಕಾಮಗಾರಿ ಸ್ವಲ್ಪ ಕಠಿಣವಾಗಿರುವುದರಿಂದ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಆಗಿಲ್ಲ. ಲೋಕಸಭಾ ಚುನಾವಣೆಯ ಒಳಗೆ ಈ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದ್ದು, ಸಚಿವ ನಿತಿನ್‌ಗಡ್ಕರಿ ರವರು ಲೋಕಾರ್ಪಣೆ ಮಾಡಲಿದ್ದಾರೆ.
– ಬಿ.ವೈ. ರಾಘವೇಂದ್ರ, ಸಂಸದ

Malnad Times

Recent Posts

ಚುನಾವಣಾ ಬಹಿಷ್ಕಾರದಿಂದ ಹಿಂದೆ ಸರಿದ ಈಚಲುಕೊಪ್ಪ, ಕಾಪೇರಮನೆ ಗ್ರಾಮಸ್ಥರು

ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…

3 hours ago

ಆನೆ ದಾಳಿಯಿಂದ ಮೃತಪಟ್ಟ ರೈತನ ಕುಟುಂಬಕ್ಕೆ ತಕ್ಷಣ ₹ 15 ಲಕ್ಷ ಪರಿಹಾರ ನೀಡಿ ; ಹರತಾಳು ಹಾಲಪ್ಪ ಆಗ್ರಹ

ಹೊಸನಗರ: ಶುಕ್ರವಾರ ಬೆಳಿಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ ರೈತ ತಿಮ್ಮಪ್ಪ ಎಂಬ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದ್ದು…

4 hours ago

ಶಿವಮೊಗ್ಗ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್‌ಕುಮಾರ್ ಪರ ರೋಡ್ ಷೋ | ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ ; ಪ್ರದೀಪ್ ಈಶ್ವರ್

ಶಿವಮೊಗ್ಗ: ರಾಜ್ಯದ ಬಡವರ ಕಲ್ಯಾಣಕ್ಕೆ ಬಿಜೆಪಿ ಕೊಡುಗೆ ಶೂನ್ಯ. ಆದ್ದರಿಂದ ಕ್ಷೇತ್ರದ ಹಿತ ಕಾಯಲು ಗೀತಕ್ಕಗೆ ಮತ ನೀಡಿ, ಆಶೀರ್ವದಿಸಿ…

5 hours ago

ಬಂಗಾರಪ್ಪರ ಋಣ ತೀರಿಸಲು ಗೀತಾಗೆ ಮತ ನೀಡಿ ; ಮಧು ಬಂಗಾರಪ್ಪ

ಸೊರಬ : ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಬಡವರ ಪರವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದರು. ಅವರ ಋಣವನ್ನು…

7 hours ago

ನೈರುತ್ಯ ಶಿಕ್ಷಕರ, ನೈರುತ್ಯ ಪದವೀಧರರ ಕ್ಷೇತ್ರಗಳಿಗೆ ಜೂ. 03 ರಂದು ಚುನಾವಣೆ | ಮತದಾರರ ಪಟ್ಟಿಗೆ ಹೆಸರು ನೊಂದಾಯಿಸಲು ಮೇ 6 ಕಡೆಯ ದಿನ

ಚಿಕ್ಕಮಗಳೂರು : ಕರ್ನಾಟಕ ವಿಧಾನ ಪರಿಷತ್ತಿನ ನೈರುತ್ಯ ಪದವೀಧರರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳಿಗೆ ಜೂನ್ 03 ರಂದು…

20 hours ago

ಆನೆ ದಾಳಿಯಿಂದ ಮೃತನಾದ ರೈತನ ಕುಟುಂಬಕ್ಕೆ 24 ಗಂಟೆಯೊಳಗೆ ಪರಿಹಾರ ನೀಡದಿದ್ದಲ್ಲಿ ಸರ್ಕಾರಕ್ಕೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಹಾಲಪ್ಪ

ರಿಪ್ಪನ್‌ಪೇಟೆ: ಇಂದು ಬೆಳಗ್ಗೆ ದರಗೆಲೆ ತರಲು ಕಾಡಿಗೆ ತೆರಳಿದ್ದ ರೈತ ತಿಮ್ಮಪ್ಬ ಎಂಬ ರೈತ ಆನೆ ದಾಳಿಗೆ ಬಲಿಯಾಗಿದ್ದು ಮೃತ…

20 hours ago