ಸಂಸ್ಕಾರಯುತ ಶಿಕ್ಷಣ ಕಲಿತು ಧರ್ಮವಂತರಾಗಿ ಬಾಳಲು ವಿದ್ಯಾರ್ಥಿಗಳಿಗೆ ಮಳಲಿ ಮಠದ ಶ್ರೀಗಳು ಕರೆ

ಹೊಸನಗರ : ಮನುಷ್ಯತ್ವ ಮಾನವೀಯತೆ ಹೊಂದಬೇಕಾದರೆ ಸಂಸ್ಕೃತವಾದ ಶಿಕ್ಷಣ ಅಗತ್ಯ ವಿದ್ಯೆ. ವ್ಯಕ್ತಿಯ ಆಕರ್ಷಣೆ ಸಂಸ್ಕಾರಯುತ ಶಿಕ್ಷಣ ಕಲಿತು ಧರ್ಮವಂತರಾಗಿ ಬಾಳುವಂತೆ ಕೋಣಂದೂರು ಸಮೀಪದ ಮಳಲಿ ಮಠದ ಶ್ರೀ ಡಾ ಗುರು ನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಅವರು ಪಟ್ಟಣದ ಕುವೆಂಪು ವಸತಿ ವಿದ್ಯಾ ಸಂಸ್ಥೆಯ ಪ್ರತಿಭಾ ಪುರಸ್ಕಾರ ಹಾಗೂ ಪ್ರದರ್ಶನ ಸಮಾರಂಭದಲ್ಲಿ ಆಶೀರ್ವಚನ ನೀಡಿ ಕ್ಷಮಾ ಮತ್ತು ಅಹಂ ಎರಡು ಗುಣಗಳು ಕ್ಷಮಾ ಎನ್ನುವುದು ಸಂಬಂಧವನ್ನು ಉಳಿಸಿದರೆ ಅಹಂ ಎನ್ನುವುದು ಸಂಬಂಧಗಳನ್ನು ನಾಶಪಡಿಸುತ್ತದೆ‌‌. ಪ್ರತಿಯೊಬ್ಬರಿಗೂ ಕ್ಷಮಾಗುಣ ಅತ್ಯಂತ ಅವಶ್ಯಕ ಆದ್ದರಿಂದ ಶ್ರೀ ಜಗದ್ಗುರು ರೇಣುಕ ಭಗವತ್ಪಾದರು ಸಿದ್ಧಾಂತ ಶಿಖಾಮಣಿಯಲ್ಲಿ ದಶ ಸೂತ್ರಗಳನ್ನು ಬೋಧಿಸುವಾಗ ಕ್ಷಮಾ ಗುಣದ ಬಗ್ಗೆ ಅತ್ಯಂತ ಅಮೂಲ್ಯವಾಗಿ ಭೋದಿಸಿದ್ದಾರೆ ಹಾಗಾದರೆ ಕ್ಷಮಾ ಗುಣವನ್ನು ಬದುಕಿನಲ್ಲಿ ಅಳವಡಿಸಿಕೊಳ್ಳುವುದರಿಂದ ಪಾವನ ಬದುಕನ್ನು ಕಾಣಬಹುದೆಂದರು.

ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರು ಶುದ್ಧವಾದ ಕ್ಷಮಾ ಗುಣವನ್ನು ಅಳವಡಿಸಿಕೊಂಡು ಅಧ್ಯಯನ ನಡೆಸಿದರೆ ವಿದ್ಯೆಯು ಸಮೃದ್ಧಿಗೊಂಡು ಬದುಕು ಸ್ವಚ್ಛಂದವಾಗಿರಲು ಸಾಧ್ಯ ಎಂದು ತಿಳಿಸಿ, ಮಾತಾ ಪಿತೃಗಳನ್ನು ಗುರುಹಿರಿಯರನ್ನು ಗೌರವವಾಗಿ ಕಾಣುವುದೇ ಉತ್ತಮ ಹಾಗೂ ನಿಜ ಜೀವನದ ಸಾರಾಂಶವಾಗಿದೆ ಎಂದರು.

ಕುವೆಂಪು ವಸತಿ ವಿದ್ಯಾಲಯದ ವ್ಯವಸ್ಥಾಪಕರು ಭಾರತ ಸೇವಾರತ್ನ ಮತ್ತು ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿ ಪುರಸ್ಕೃತರಾದ ಡಾ. ಸೊನಲೆ ಶ್ರೀನಿವಾಸ್ ಅಧ್ಯಕ್ಷತೆ ವಹಿಸಿದ್ದ ಸಮಾರಂಭವನ್ನು ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ ವಿ ಜಯರಾಮ್ ಉದ್ಘಾಟಿಸಿದರು.

ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸುಧಾ ಚೆನ್ನಪ್ಪ ಸಂಸ್ಥೆಯ ನವಚೈತನ್ಯ ಕೃತಿ ಬಿಡುಗಡೆ ಮಾಡಿದರೆ FLAIR ಆಂಗ್ಲ ಭಾಷೆ ಕೃತಿಯನ್ನು ಸಾಹಿತಿಗಳು ಹಾಗೂ ಶಿಕ್ಷಣ ತಜ್ಞರಾದ ತಿರುಪತಿ ನಾಯಕ್ ಬಿಡುಗಡೆ ಮಾಡಿದರು.

ಸಾಮಾಜಿಕ ಕಾರ್ಯಕರ್ತ ಎನ್ ಆರ್ ದೇವಾನಂದ್, ಎನ್ ಶ್ರೀಧರ ಉಡುಪ, ಪರಿಸರ ಪ್ರೇಮಿ ಚಕ್ರವಾಕ ಸುಬ್ರಹ್ಮಣ್ಯ, ಪಟ್ಟಣ ಪಂಚಾಯತಿ ಮಾಜಿ ಉಪಾಧ್ಯಕ್ಷೆ ಕೃಷ್ಣವೇಣಿ, ನಗರ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ಕೆ‌.ಎನ್ ಗಂಗಾಧರ, ಅಂತರಗಂಗೆಯ ಕರ್ನಾಟಕ ಪಬ್ಲಿಕ್ ಸ್ಕೂಲ್ ಶಿಕ್ಷಕ ಕೆ ಕೆ ಸುರೇಶ್, ಶಿಕ್ಷಣ ಇಲಾಖೆಯ ಪರಮೇಶ್ವರಪ್ಪ, ಸಿಆರ್‌ಪಿ ಮಂಜಪ್ಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಿ ವಿಜೇತರಾದ ವರಿಗೆ ಪ್ರಶಸ್ತಿ ಪತ್ರ ಹಾಗೂ ಪಾರಿತೋಷಕ ವಿತರಿಸಿದರು.

ಕುವೆಂಪು ವಿದ್ಯಾ ಶಾಲೆಯ ಮುಖ್ಯೋಪಾಧ್ಯಾಯ ಎನ್ ನಾಗೇಂದ್ರ ಸ್ವಾಗತಿಸಿದರು. ಅಶ್ವಿನಿ ಕಾರ್ಯಕ್ರಮ ನಿರೂಪಿಸಿದರು. ಆಶಾ ನಾಗಭೂಷಣ ಅಭಾರ ಮನ್ನಿಸಿದರು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು.

Malnad Times

Recent Posts

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

20 mins ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

38 mins ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 hours ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 hours ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

10 hours ago

Rain Alert | ಮುಂದಿನ 48 ಗಂಟೆಗಳಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ಮುಂದಿನ 48 ಗಂಟೆಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುವ (Heavy Rain) ಸಾಧ್ಯತೆ…

11 hours ago