Categories: RipponpeteShivamogga

ಸನಾತನ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತ ; ನಿಟ್ಟೂರು ಶ್ರೀಗಳು

ರಿಪ್ಪನ್‌ಪೇಟೆ: ಸನಾನತ ಧರ್ಮ ಸಂಸ್ಕೃತಿ ಸಾರುವ ವಿಶಿಷ್ಟ ದೇಶ ಭಾರತವಾಗಿದೆ.ವಿಶ್ವಕ್ಕೆ ಶಾಂತಿ ನೆಮ್ಮದಿಯನ್ನು ಸಾರುವ ಧರ್ಮ ಹಿಂದು ಧರ್ಮದಾಗಿದೆ ಎಂದು ನಿಟ್ಟೂರು ಆರ್ಯ ಈಡಿಗ ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಮಹಾಸ್ವಾಮೀಜಿ ಹೇಳಿದರು.

ರಿಪ್ಪನ್‌ಪೇಟೆಯಲ್ಲಿ ಇಂದು ಆಯೋಧ್ಯೆ ಶ್ರೀರಾಮ ಮಂದಿರ ಮಂತ್ರಾಕ್ಷತೆ ಅಭಿಯಾನ ಮನೆಮನೆ ಸಂಪರ್ಕ ಅಭಿಯಾನ ಸಮಿತಿಯವರು ಆಯೋಜಿಸಲಾದ ಬೃಹತ್ ಆಭಿಯಾನ ಕಾರ್ಯಕರ್ತರ ಸಮಾವೇಶವನ್ನು ಉದ್ಘಾಟಿಸಿ ಆಶೀರ್ವಚನ ನೀಡಿ ಭಾರತ ಪುಣ್ಯ ಪುರುಷರ ಸಂತರ ಶರಣರ ಪುಣ್ಯ ಭೂಮಿ ಮನುಕುಲದ ಉದ್ದಾರಕ್ಕಾಗಿ ಮಾನವೀಯ ಗುಣ ಕೊಟ್ಟ ಮಾರ್ಯಾಧಪುರುಷೋತ್ತಮ ಜನ್ಮ ಭೂಮಿಯ ಶಾಂತಿ ನೆಮ್ಮದಿಯ ಕರುಣಿಸಿದ ಈ ದೇಶ ಭಾರತದಲ್ಲಿ ನಮ್ಮಗಳ ಜೀವಿತಾವಧಿಯಲ್ಲಿ ಇಂತಹ ಒಂದು ಹಿಂದು ದೇವಸ್ಥಾನವನ್ನು ಹೋರಾಟದ ಮೂಲಕ ನಿರ್ಮಿಸುತ್ತಿರುವುದು ಇತಿಹಾಸ ವಾಗಿದೆ ಎಂದರು.ಇದನ್ನು ಜನವರಿ 1 ರಿಂದ 15 ರವರಗೆ ಮನೆಮನೆಗಳಿಗೆ ಪ್ರಚಾರ ಪಡಿಸಿ ರಾಮನ ಅದರ್ಶತತ್ವಗಳನ್ನು ಇಂದಿನ ಯುವಜನಾಂಗದಲ್ಲಿ ಬೆಳಸುವಂತಾಗಬೇಕು ಎಂದರು.

ಸಂಘ ಪ್ರಾಂತ್ಯ ವ್ಯವಸ್ಥಾಪಕ ಯಾದವಕೃಷ್ಣ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಭೆಯಲ್ಲಿ ತಾಲ್ಲೂಕ್ ಆರ್.ಎಸ್.ಎಸ್. ಕಾರ್ಯನಿರ್ವಾಹಕ ಶ್ಯಾಮಸುಂದರ್ ಕಗ್ಗಲಿ, ಮಾಜಿ ಸಚಿವ ಹರತಾಳು ಹಾಲಪ್ಪ, ತಾಲ್ಲೂಕ್ ಬಿಜೆಪಿ ಆಧ್ಯಕ್ಷ ಬೆಳಗೋಡು ಗಣಪತಿ, ಹನಿಯ ರವಿ ಇನ್ನಿತರರು ಹಾಜರಿದ್ದರು.

ಪ್ರಾರಂಭದಲ್ಲಿ ನಾಗರತ್ನ ದೇವರಾಜ್ ಪ್ರಾರ್ಥಿಸಿದರು. ಎನ್.ಸತೀಶ್ ಸ್ವಾಗತಿಸಿದರು. ಲೀಲಾ ಉಮಾಶಂಕರ್ ಕಾರ್ಯಕ್ರಮ ನಿರೂಪಿಸಿದರು.

ಪೂರ್ಣಕುಂಭ ಸ್ವಾಗತದೊಂದಿಗೆ ಮೆರವಣಿಗೆ: ರಿಪ್ಪನ್‌ಪೇಟೆಯಲ್ಲಿ ಇಂದು ಆಯೋಧ್ಯೆ ಶ್ರೀರಾಮ ಮಂದಿರ ಮಂತ್ರಾಕ್ಷತೆ ಅಭಿಯಾನ ಮನೆಮನೆ ಸಂಪರ್ಕ ಅಭಿಯಾನ ಸಮಿತಿಯವರು ಆಯೋಜಿಸಲಾದ ಬೃಹತ್ ಅಭಿಯಾನ ಕಾರ್ಯಕರ್ತರ ಸಮಾವೇಶ ಕಾರ್ಯಕ್ರಮಕ್ಕೆ ಆಗಮಿಸಿದ ನಿಟ್ಟೂರು ಆರ್ಯ ಈಡಿಗ ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಮಹಾಸ್ವಾಮೀಜಿಯವರನ್ನು ಮುತ್ತೈದೆಯರು ಪೂರ್ಣಕುಂಭ ಸ್ವಾಗತದೊಂದಿಗೆ ವಿನಾಯಕ ವೃತ್ತದಿಂದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನಕ್ಕೆ ಮೆರವಣಿಗೆ ಮೂಲಕ ಸ್ವಾಗತಿಸುವುದರೊಂದಿಗೆ ಭರಮಾಡಿಕೊಂಡರು.

Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

6 days ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

7 days ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 days ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

7 days ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago