ಸನ್ಮಾನಿಸುವುದರಲ್ಲಿ ಸಂತೋಷವಿದೆ ; ಸಿಪಿಐ ಗುರಣ್ಣ ಎಸ್ ಹೆಬ್ಬಾಳ್

ಹೊಸನಗರ: ಸರ್ಕಾರಿ ಕೆಲಸವೆಂದರೆ ದೇವರು ನಮಗೆ ನೀಡಿರುವ ವರ. ಅದೇ ಸರ್ಕಾರಿ ಕೆಲಸದಲ್ಲಿ ಬಡ್ತಿ ಹೊಂದಿ ಮೇಲ್ದರ್ಜೆಗೆ ಹೋಗುವುದೆಂದರೆ ಇನ್ನೂ ಸಂತೋಷ. ಅವರನ್ನು ಅಭಿನಂದಿಸಿ ಕಳುಹಿಸಿದರೆ ಇನ್ನೂ ಆನಂದವೆಂದು ಹೊಸನಗರ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರು ಹೇಳಿದರು.


ಇಲ್ಲಿನ ಸರ್ಕಲ್ ಇನ್ಸ್‌ಪೆಕ್ಟರ್ ಕಛೇರಿಯ ಆವರಣದಲ್ಲಿ ಹೊಸನಗರ ನ್ಯಾಯಾಲಯದಲ್ಲಿ ಸುಮಾರು 09 ವರ್ಷಗಳ ಕಾಲ ಎಪಿಪಿ ಆಗಿ ಸೇವೆ ಸಲ್ಲಿಸಿ ಈಗ ಎಡಿಪಿ ಆಗಿ ಪದೋನ್ನತಿ ಹೊಂದಿ ಬೆಂಗಳೂರಿಗೆ ವರ್ಗಾವಣೆ ಆಗಿರುವ ಗೋಪಾಲ್ ನಾಯ್ಕ್ ರವರನ್ನು ಹಾಗೂ ನೂತನವಾಗಿ ನ್ಯಾಯಾಲಯಕ್ಕೆ ಎಪಿಪಿಯಾಗಿ ಅಗಮಿಸಿದ ರವಿಕುಮಾರ್‌ರವರನ್ನು ಅಭಿನಂದಿಸಿ ಮಾತನಾಡಿದರು.


ಯಾವುದೋ ಜನ್ಮದ ಪುಣ್ಯದ ಫಲ ಹಾಗೂ ಗುರು ಹಿರಿಯರ ಆಶೀರ್ವಾದದಿಂದ ನಮಗೆ ಜನರ ಸೇವೆ ಮಾಡುವ ಉದ್ದೇಶದಿಂದ ಸರ್ಕಾರಿ ಕೆಲಸ ಸಿಕ್ಕಿದೆ. ಸಿಕ್ಕಿರುವ ಕೆಲಸದಿಂದ ಜನರ ಸೇವೆ ಮಾಡುವ ಭಾಗ್ಯ ನಮಗೆ ಸಿಕ್ಕಿದ್ದು ಅದನ್ನು ದುರುಪಯೋಗ ಪಡಿಸಿಕೊಳ್ಳದೇ ಸದ್ಗುಣಗಳಿಂದ ಸೇವೆ ಸಲ್ಲಿಸಿದರೆ ನಮಗೆ ಪುಣ್ಯ ಸಿಗುವುದು. ತಡವಾದರೂ ನಮ್ಮ ಮಕ್ಕಳಿಗಾದರೂ ಸಿಗುತ್ತದೆ ಎಂಬ ಆಶಾ ಭಾವನೆಯೊಂದಿಗೆ ನಾವು ಮಾಡುವ ಕೆಲಸದಿಂದ ತೃಪ್ತಿ ಪಟ್ಟಿಕೊಳ್ಳಬೇಕು. ಅದರಲ್ಲಿಯೂ ಇರುವ ಕೆಲಸದಿಂದ ಬಡ್ತಿ ಹೊಂದಿ ಮೇಲ್ದರ್ಜೆಗೆ ಹೋದರೆ ಇನ್ನೂ ಜವಾಬ್ದಾರಿಯ ಜೊತೆಗೆ ಆತ್ಮತೃಪ್ತಿಯು ಸಿಗುತ್ತದೆ ಎಂದರು.


ಈ ಅಭಿನಂದನೆ ಸಮಾರಂಭದಲ್ಲಿ ಪೊಲೀಸ್ ಇಲಾಖೆಯ ಎ.ಎಸ್.ಐ ಶಿವಪುತ್ರ, ಸಿಬ್ಬಂದಿಗಳಾದ ಗಿರೀಶ್, ಗಂಗಪ್ಪ, ಸಂತೋಷ್, ಆಶಾ, ಯಶೋಧಮ್ಮ, ಶರತ್ ಇನ್ನೂ ಮುಂತಾದವರು ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

3 days ago