ರಿಪ್ಪನ್ಪೇಟೆ: ಗ್ರಾಮೀಣ ಭಾಗದಲ್ಲಿ ಪ್ರತಿಭಾ ಕಾರಂಜಿಯ ಮಕ್ಕಳ ಕಲೋತ್ಸವವನ್ನು ತಮ್ಮೂರಿನ ಜಾತ್ರೆ ಹಬ್ಬದ ರೀತಿಯಲ್ಲಿ ಸಂಭ್ರಮದಿಂದ ಆಚರಿಸುತ್ತಾರೆ ಎಂದು ಹುಂಚಾ ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಸುಮಂಗಲ ದೇವರಾಜ್ ಹೇಳಿದರು.
ಹುಂಚ ಗ್ರಾಪಂ ವ್ಯಾಪ್ತಿಯ ಸಮಟಗಾರು ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲಾ ಆವರಣದಲ್ಲಿ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ನೂತನ ಕೊಠಡಿ ಉದ್ಘಾಟಿಸಿ ಮಾತನಾಡಿ, ಪ್ರತಿಭಾ ಕಾರಂಜಿ ನಡೆಸಲು ಎಲ್ಲರ ಸಹಕಾರ ಮುಖ್ಯ. ಮಕ್ಕಳು ಪಠ್ಯ ಪುಸ್ತಕ ಕಲಿಕೆ ಜೊತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಭಾಗವಹಿಸಬೇಕು ಎಂಬ ಉದ್ದೇಶದಿಂದ ಪ್ರತಿಭಾ ಕಾರಂಜಿ ನಡೆಸಲಾಗುತ್ತದೆ. ಜೀವನದಲ್ಲಿ ಗುರಿ ಇಟ್ಟುಕೊಂಡು ಅದನ್ನು ಸಾಕಾರಗೊಳಿಸಲು ಪ್ರಯತ್ನ ನಡೆಸಬೇಕು ಎಂದು ಸಲಹೆ ನೀಡಿದರು.
ಮಕ್ಕಳ ಸುಪ್ತ ಪ್ರತಿಭೆಗೆ ರಂಗಮಂಚಿಕೆಯಾದ ಪರಿಸರ ಸ್ನೇಹಿ ಆ್ಯಂಪಿ ಥಿಯೇಟರ್ಯನ್ನು ವಿನಾಯಕ ಭಟ್ ಉದ್ಘಾಟಿಸಿದರು.
ಪ್ರತಿಭಾ ಕಾರ್ಯಕ್ರಮದ ಸಮಾರಂಭವನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್.ಕೃಷ್ಣಮೂರ್ತಿ ಉದ್ಘಾಟಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಹುಂಚ ಗ್ರಾ.ಪಂ.ಉಪಾಧ್ಯಕ್ಷ ವೆಂಕಟೆಶ್,ಸದಸ್ಯರಾದ ರಾಘವೇಂದ್ರ,ಎಸ್.ಡಿ.ಎಂ.ಸಿ. ಅಧ್ಯಕ್ಷರು, ಉಪಾಧ್ಯಕ್ಷ ಕೃಷ್ಣನಾಯ್ಕ್, ಆಶಾ, ಪದ್ಮನಾಭರಾವ್, ಶ್ರೀಧರಮೂರ್ತಿ, ಈಶ್ವರಪ್ಪಗೌಡ, ಸಮೂಹ ಸಂಪನ್ಮೂಲ ವ್ಯಕ್ತಿಗಳಾದ ದೀಪ, ಮುಖ್ಯಶಿಕ್ಷಕರಾದ ರತ್ನಕುಮಾರಿ, ಸಹಶಿಕ್ಷಕಿ ಅಂಬಿಕಾ ಇನ್ನಿತರರು ಹಾಜರಿದ್ದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…