ರಿಪ್ಪನ್ಪೇಟೆ : ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀಮಠದ ಜಿನಾಲಯದಲ್ಲಿ ಶ್ರೀ ಸರಸ್ವತಿದೇವಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಬಳಿಕ ಶ್ರೀ ಪಾರ್ಶ್ವನಾಥ ಸ್ವಾಮಿ ಮತ್ತು ಜಗನ್ಮಾತೆ ವರಪ್ರದಾಯಿನಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಸಹಸ್ರನಾಮ ಸ್ತುತಿಸಿ, ಭಕ್ತವೃಂದದವರು ಇಷ್ಟಾರ್ಥ ಸಿದ್ಧಗಾಗಿ ಪ್ರಾರ್ಥಿಸಿದರು.
ಪೂರ್ವಪರಂಪರೆಯಂತೆ ಪೀಠಾಧಿಪತಿ ಜಗದ್ಗುರು ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ದಿವ್ಯ ನೇತೃತ್ವದಲ್ಲಿ ಶ್ರೀ ನೇಮಿನಾಥ ಸ್ವಾಮಿ ಶ್ರೀ ಕೂಷ್ಮಾಂಡಿನಿ ದೇವಿ ಶ್ರೀ ಕ್ಷೇತ್ರಪಾಲ ಶ್ರೀ ನಾಗಸನ್ನಿಧಿಯಲ್ಲಿ ಪೂಜಾ ವಿಧಾನ ನೆರವೇರಿತು. ಶುಭ ಮೂಲ ನಕ್ಷತ್ರದ ನವರಾತ್ರಿಯ ಆರನೇಯ ದಿನ ಊರ ಪರವೂರ ಭಕ್ತರು ಜಿನವಾಣಿ ಸ್ತುತಿಸಿ, ಅಕ್ಷರಾಭ್ಯಾಸವನ್ನು ಮಕ್ಕಳಿಗೆ ಆರಂಭಿಸಿ ಭವಿಷ್ಯದಲ್ಲಿ ನಿರ್ವಿಘ್ನವಾಗಿ ವಿದ್ಯಾಭ್ಯಾಸ, ಉನ್ನತ ವ್ಯಾಸಂಗಕ್ಕಾಗಿ ಭಕ್ತರು ನಿವೇದಿಸಿದರು.
ಡಾ. ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಗಳವರು ಜ್ಞಾನಾರಾಧನೆಯ ಪ್ರತೀಕವಾಗಿ ವಿದ್ಯಾದೇವತೆ ಶ್ರೀ ಸರಸ್ವತಿ ದೇವಿ ಮತ್ತು ವಿಶ್ವವಂದ್ಯ ಶ್ರೀ ಪದ್ಮಾವತಿ ದೇವಿ ಸರ್ವರ ಆಶಯ-ಅಪೇಕ್ಷೆ ಈಡೇರಿಸಿ ಲೋಕಕಲ್ಯಾಣವಾಗಲಿ, ಭಾರತ ಸಮೃದ್ಧವಾಗಲೆಂದು ಹರಸಿದರು.
ರಾತ್ರಿ ಅಷ್ಟಾವಧಾನ ಪರಂಪರಾನುಗತ ಪೂಜೆ, ಸಂಗೀತ, ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತರು ಭಾಗಿಯಾಗಿದ್ದರು. ಸೇವಾಕರ್ತೃರಾದ ಶ್ರೀಮತಿ ನೀತು ನವೀನ್ ಜೈನ್, ಶ್ರುತಾಂಜನ ಮೂಡುಬಿದಿರೆಯವರನ್ನು ಶ್ರೀಗಳವರು ಹರಸಿದರು. ಪುರೋಹಿತ ಪದ್ಮರಾಜ ಇಂದ್ರರವರು ಪೂಜಾ ವಿಧಿ ನೆರವೇರಿಸಿದರು.
ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…
ರಿಪ್ಪನ್ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…
ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…
ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…
ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…
ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…