ಸರಸ್ವತಿ ದೇವಿ ಸಹಸ್ರನಾಮ ಆರಾಧನೆ | ಜ್ಞಾನ ಸಂಪನ್ನರಾಗಿರಿ ಭಾರತ ಸಮೃದ್ಧವಾಗಲಿ ; ಹೊಂಬುಜ ಶ್ರೀಗಳು

ರಿಪ್ಪನ್‌ಪೇಟೆ : ಅತಿಶಯ ಶ್ರೀಕ್ಷೇತ್ರ ಹೊಂಬುಜದಲ್ಲಿ ಶ್ರೀಮಠದ ಜಿನಾಲಯದಲ್ಲಿ ಶ್ರೀ ಸರಸ್ವತಿದೇವಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಬಳಿಕ ಶ್ರೀ ಪಾರ್ಶ್ವನಾಥ ಸ್ವಾಮಿ ಮತ್ತು ಜಗನ್ಮಾತೆ ವರಪ್ರದಾಯಿನಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಸಹಸ್ರನಾಮ ಸ್ತುತಿಸಿ, ಭಕ್ತವೃಂದದವರು ಇಷ್ಟಾರ್ಥ ಸಿದ್ಧಗಾಗಿ ಪ್ರಾರ್ಥಿಸಿದರು.

ಪೂರ್ವಪರಂಪರೆಯಂತೆ ಪೀಠಾಧಿಪತಿ ಜಗದ್ಗುರು ಸ್ವಸ್ತಿಶ್ರೀ ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ದಿವ್ಯ ನೇತೃತ್ವದಲ್ಲಿ ಶ್ರೀ ನೇಮಿನಾಥ ಸ್ವಾಮಿ ಶ್ರೀ ಕೂಷ್ಮಾಂಡಿನಿ ದೇವಿ ಶ್ರೀ ಕ್ಷೇತ್ರಪಾಲ ಶ್ರೀ ನಾಗಸನ್ನಿಧಿಯಲ್ಲಿ ಪೂಜಾ ವಿಧಾನ ನೆರವೇರಿತು. ಶುಭ ಮೂಲ ನಕ್ಷತ್ರದ ನವರಾತ್ರಿಯ ಆರನೇಯ ದಿನ ಊರ ಪರವೂರ ಭಕ್ತರು ಜಿನವಾಣಿ ಸ್ತುತಿಸಿ, ಅಕ್ಷರಾಭ್ಯಾಸವನ್ನು ಮಕ್ಕಳಿಗೆ ಆರಂಭಿಸಿ ಭವಿಷ್ಯದಲ್ಲಿ ನಿರ್ವಿಘ್ನವಾಗಿ ವಿದ್ಯಾಭ್ಯಾಸ, ಉನ್ನತ ವ್ಯಾಸಂಗಕ್ಕಾಗಿ ಭಕ್ತರು ನಿವೇದಿಸಿದರು.


ಡಾ. ದೇವೇಂದ್ರಕೀರ್ತಿ ಭಟ್ಟಾರಕ ಸ್ವಾಮೀಜಿಗಳವರು ಜ್ಞಾನಾರಾಧನೆಯ ಪ್ರತೀಕವಾಗಿ ವಿದ್ಯಾದೇವತೆ ಶ್ರೀ ಸರಸ್ವತಿ ದೇವಿ ಮತ್ತು ವಿಶ್ವವಂದ್ಯ ಶ್ರೀ ಪದ್ಮಾವತಿ ದೇವಿ ಸರ್ವರ ಆಶಯ-ಅಪೇಕ್ಷೆ ಈಡೇರಿಸಿ ಲೋಕಕಲ್ಯಾಣವಾಗಲಿ, ಭಾರತ ಸಮೃದ್ಧವಾಗಲೆಂದು ಹರಸಿದರು.


ರಾತ್ರಿ ಅಷ್ಟಾವಧಾನ ಪರಂಪರಾನುಗತ ಪೂಜೆ, ಸಂಗೀತ, ಧಾರ್ಮಿಕ ಕಾರ್ಯಕ್ರಮದಲ್ಲಿ ಭಕ್ತರು ಭಾಗಿಯಾಗಿದ್ದರು. ಸೇವಾಕರ್ತೃರಾದ ಶ್ರೀಮತಿ ನೀತು ನವೀನ್ ಜೈನ್, ಶ್ರುತಾಂಜನ ಮೂಡುಬಿದಿರೆಯವರನ್ನು ಶ್ರೀಗಳವರು ಹರಸಿದರು. ಪುರೋಹಿತ ಪದ್ಮರಾಜ ಇಂದ್ರರವರು ಪೂಜಾ ವಿಧಿ ನೆರವೇರಿಸಿದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago