ಹೊಸನಗರ : ಮಲೆನಾಡಿನ ಜನರ ಬಹುದಿನದ ಅಪೇಕ್ಷೆಯ ಸಾಗರ – ಹೊಸನಗರ – ಸಿದ್ದಾಪುರ – ಬಾರಕೂರು – ಬ್ರಹ್ಮಾವರ – ಉಡುಪಿ – ಮಣಿಪಾಲ ಹೋಗಿ ಅದೇ ಮಾರ್ಗದಲ್ಲಿ ವಾಪಸ್ ಸಾಗರ ಬರುವ ಕೆ.ಎಸ್.ಆರ್.ಟಿ.ಸಿ ಬಸ್ ಸಂಚಾರಕ್ಕೆ ಶಾಸಕರು, ಅರಣ್ಯ ಮತ್ತು ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಗುರುವಾರ ಸಂಜೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.
ಪ್ರತಿದಿನ ಬೆಳಿಗ್ಗೆ 6:00ಕ್ಕೆ ಸಾಗರ ಬಿಡುವ ಬಸ್ ಏಳು ಗಂಟೆಗೆ ಹೊಸನಗರ ಬಿಟ್ಟು ಮೇಲೆ ತಿಳಿಸಿದ ಮಾರ್ಗದಲ್ಲಿ ಉಡುಪಿ ಮೂಲಕ 10:15ಕ್ಕೆ ಮಣಿಪಾಲ ತಲುಪಲಿದೆ.
ಪುನಃ ಮಧ್ಯಾಹ್ನ 2:00ಕ್ಕೆ ಮಣಿಪಾಲ 2:45ಕ್ಕೆ ಉಡುಪಿ ಬಿಟ್ಟು ಸಂಜೆ 5:15ಕ್ಕೆ ಹೊಸನಗರ ಬಂದು ಸಾಗರ ತಲುಪಲಿದೆ.
ಶಾಸಕರ ಈ ಪ್ರಯತ್ನಕ್ಕೆ ಕ್ಷೇತ್ರದ ಜನತೆ ಸಾರ್ವಜನಿಕರು ಅಭಿನಂದಿಸಿದ್ದಾರೆ. ಇದು ಶಾಸಕರ ಹುಟ್ಟು ಹಬ್ಬದ ಕೊಡುಗೆಯಾಗಿದೆ ಎಂದು ಅವರ ಅಭಿಮಾನಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ : ಗ್ಯಾರಂಟಿ ಯೋಜನೆಯ ಮೂಲಕ ಕೋಟ್ಯಂತರ ಬಡವರು ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ ಇದು ಕಾಂಗ್ರೆಸ್ಸಿನ ಐತಿಹಾಸಿಕ ಕೊಡುಗೆಯಾಗಿದೆ. ಈ…
ಶಿವಮೊಗ್ಗ : ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿನ ಮತದಾನ ಪ್ರಮಾಣ ಏರ್ ಬಲೂನ್ ರೀತಿಯಲ್ಲಿ ಆಕಾಶದ ಎತ್ತರಕ್ಕೆ ಏರಲಿ ಎಂದು ಜಿಲ್ಲಾ…
ಹೊಸನಗರ : ಪಟ್ಟಣದ ಮಾರಿಗುಡ್ಡ ನಿವಾಸಿ ಮಮತಾ ಚಂದ್ರಶೇಖರ್ (43) ಶನಿವಾರ ಬೆಳಿಗ್ಗೆ ತಮ್ಮ ಸ್ವಂತ ಮನೆಯಲ್ಲಿ ಹೃದಯಘಾತದಿಂದ ನಿಧನರಾದರು.…
ರಿಪ್ಪನ್ಪೇಟೆ: ಪುರಾಣ ಪ್ರಸಿದ್ದ ರಿಪ್ಪನ್ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು…
ರಿಪ್ಪನ್ಪೇಟೆ: ಕುಮದ್ವತಿ ನದಿ ತೀರದ ಬಟಾಣಿಜಡ್ಡು ಗ್ರಾಮದ ರೈತ ದಾನಪ್ಪ ಎಂಬುವರ ಭತ್ತದ ಬೆಳೆಗೆ ಎರಡು ಕಾಡಾನೆಗಳು ನುಗ್ಗಿ ಬೇಸಿಗೆ…
ಹೊಸನಗರ: ತಾಲ್ಲೂಕಿನ ಪುರಪ್ಪೆಮನೆ ಗ್ರಾಪಂ ವ್ಯಾಪ್ತಿಯ ವ್ಯಾಪ್ತಿ ಹಲುಸಾಲೆ - ಮಳವಳ್ಳಿ, ಕಾಪೇರಮನೆ ಗ್ರಾಮದ ಗ್ರಾಮಸ್ಥರು ಸಾಗರ-ಹೊಸನಗರದ ಮಧ್ಯ ಭಾಗದಲ್ಲಿದ್ದು…