ಹೊಸನಗರ : ಈಗಾಗಲೇ ಕೆರೆಗಳ ಜೀರ್ಣೋದ್ಧಾರ ಮಾಡುವ ಮೂಲಕ ರಾಜ್ಯವ್ಯಾಪಿ ಹೆಸರಾಗಿರುವ ತಾಲೂಕಿನ ಬಟ್ಟೆಮಲ್ಲಪ್ಪದ ಸಾರಾ ಸಂಸ್ಥೆಯ ಸಹಯೋಗದಲ್ಲಿ ಮಾರುತಿಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೊಸಕೆಸರೆ ಗ್ರಾಮಸ್ಥರು ಸಂಘಟಿತರಾಗಿ ಇಲ್ಲಿನ ತುಂಬ್ರಿಕೊಪ್ಪ ಕೆರೆಯ ಜೀರ್ಣೋದ್ದಾರ ಕಾಮಗಾರಿಗೆ ಚಾಲನೆ ನೀಡಿದ್ದಾರೆ.
ಸರ್ಕಾರದ ನಕಾಶೆ ಕಂಡ ಈ ಕೆರೆಯು ಒಂದು ಎಕರೆ ವಿಸ್ತೀರ್ಣ ಹೊಂದಿದ್ದು, ಈ ಕೆರೆಗೆ ಆರೇಳು ದಶಕಗಳ ಇತಿಹಾಸವಿದೆ. ಸುಮಾರು 25 ಎಕರೆ ಅಚ್ಚುಕಟ್ಟು ಪ್ರದೇಶದ ರೈತಾಪಿಗಳು ಈ ಕೆರೆ ನೀರನ್ನೇ ತಮ್ಮ ಕೃಷಿ ಚಟುವಟಿಕೆಗಳಿಗೆ ಆಶ್ರಯಿಸಿದ್ದಾರೆ. ಈ ಹಿನ್ನಲೆಯಲ್ಲಿ ಗ್ರಾಮಾಭಿವೃದ್ದಿಯನ್ನೇ ತನ್ನ ಮೂಲ ಉದ್ದೇಶ ಎಂಬಿ ಬಿಂಬಿಸಿಕೊಂಡಿರುವ ಸ್ಥಳೀಯ ಸಾರಾ ಸಂಸ್ಥೆ ಗ್ರಾಮಸ್ಥರ ಹಿತ ಕಾಪಾಡಲು ಕೆರೆ ಅಭಿವೃದ್ದಿ ಕಾಮಗಾರಿಗೆ ಮುಂದಾಗಿದೆ.
ಸುಮಾರು 5 ಲಕ್ಷ ರೂ. ಮೊತ್ತದಲ್ಲಿ ಈ ಕಾಮಗಾರಿ ನಡೆಯುತ್ತಿದ್ದು, ಸರ್ಕಾರದ ನಯಾಪೈಸೆ ಬಯಸದೇ ಗ್ರಾಮಸ್ಥರೇ ಹಣ ಹೂಡಲು ಮುಂದಾಗಿರುವುದು ವಿಶೇಷ.
ಹೊಸಕೆಸರೆ ಗ್ರಾಮದ ಸರ್ವೆ ನಂಬರ್ 40ರಲ್ಲಿರುವ ಈ ಕೆರೆಗೆ ಕಾಯಕಲ್ಪ ಸೂಕ್ತ ದೊರೆತಲ್ಲಿ ಸುತ್ತಮುತ್ತಲ ರೈತಾಪಿ ವರ್ಗಕ್ಕೆ, ಜನ-ಜಾನುವಾರುಗಳಿಗೆ ಬೇಸಿಗೆಯಲ್ಲಿ ನೀರಿನ ಕೊರತೆ ನೀಗಿಸಲು ಸಹಕಾರಿ ಆಗಲಿದೆ.
– ರಾಘವೇಂದ್ರ, ಕೆರೆ ಅಭಿವೃದ್ದಿ ಸಮಿತಿ ಸದಸ್ಯ
ಈವರೆಗೆ ಜಿಲ್ಲೆಯಲ್ಲಿ ನೂರಾರು ಕೆರೆಗಳ ಕಾಯಕಲ್ಪ ನೀಡುವಲ್ಲಿ ಸಾಫಲ್ಯ ಕಂಡಿರುವ ಸಾರಾ ಸಂಸ್ಥೆ ಮುಂಬರುವ ದಿನಗಳಲ್ಲಿ ಮತ್ತಷ್ಟು ಜನಪರ ಕಾರ್ಯಕ್ರಮ ಹಮ್ಮಿಕೊಳ್ಳಲಿ ಎಂಬುದು ಗ್ರಾಮಸ್ಥರ ಆಶಯವೂ ಆಗಿದೆ.
ಹೊಸನಗರ : ಈ ಬಾರಿಯ ಚುನಾವಣೆ ಭಾಗ್ಯ ಗ್ಯಾರಂಟಿಗಳ ಮೂಲಕ ಜನರನ್ನು ಸೆಳೆಯುವ ಚುನಾವಣೆಯಲ್ಲ, ಹಾಡು ಡ್ಯಾನ್ಸ್ ಮೂಲಕ ಲೋಕಸಭೆಗೆ…
ಕಳಸ : ತಾಲ್ಲೂಕಿನ ಹೆಮ್ಮಕ್ಕಿಯ ಶ್ರೀ ಭದ್ರಕಾಳಿ ಅಮ್ಮನವರಿಗೆ ಮತ್ತು ಶ್ರೀ ಸೋಮೇಶ್ವರ ಸ್ವಾಮಿಗೆ ಮೇ 01 ರಿಂದ ಮೇ…
ರಿಪ್ಪನ್ಪೇಟೆ: ನಾಳೆ ನಡೆಯುವ ಶ್ರೀಸಿದ್ದಿವಿನಾಯಕ ಸ್ವಾಮಿ ಶ್ರೀಮನ್ಮಹಾರಥೋತ್ಸವಕ್ಕೆ ಇಲ್ಲಿನ ಗಣೇಶಪ್ರಸಾದ್ ಹೋಟೆಲ್ನ ದಿ.ರೇವತಿ ಹೆಬ್ಬಾರ್ ಮತ್ತು ಸತ್ಯನಾರಾಯಣ ಹೆಬ್ಬಾರ್ ಸ್ಮರಣಾರ್ಥ…
ರಿಪ್ಪನ್ಪೇಟೆ: ಕಾಂಗ್ರೆಸ್ ಅಭ್ಯರ್ಥಿಗೆ ಸ್ಥಳೀಯ ಭೌಗೋಳಿಕ ಹಿನ್ನಲೆಯ ಅರಿವೇ ಇಲ್ಲದೆ, ಜಿಲ್ಲೆಯ ಮತದಾರರ ಪಟ್ಟಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಸರೇ ಇಲ್ಲದ…
ಹೊಸನಗರ : ತಾಲೂಕಿನ ಪುಣಜೆ ಗ್ರಾಮದಲ್ಲಿ ಖಾಸಗಿ ವ್ಯಕ್ತಿಯೊಬ್ಬರು ನಿರ್ಮಿಸುತ್ತಿರುವ ನೂತನ ಮನೆಗೆ ಅಕ್ರಮ ನಾಟಾ ಸರಬರಾಜು ಆಗಿರುವುದಾಗಿ ಸ್ಥಳೀಯ…
ಸಾಗರ: ಕ್ಷೇತ್ರದ ಅಭಿವೃದ್ಧಿಗೆ ಆಸರೆಯಾಗಿದ್ದ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಕೊಡುಗೆ ಮರೆಯಕೂಡದು. ಇಲ್ಲಿ ಗೀತಕ್ಕ ಅವರ ಗೆಲುವು…