Categories: Shivamogga

ಸಾಲ ವಸೂಲಾತಿಗಾಗಿ ಕೆನರಾ ಬ್ಯಾಂಕ್‌ನವರ ದೌರ್ಜನ್ಯ ಆರೋಪ ; ಪ್ರತಿಭಟನೆ

ಶಿವಮೊಗ್ಗ: ರೈತರ ಸಾಲ ವಸೂಲಾತಿಗಾಗಿ ಕೆನರಾ ಬ್ಯಾಂಕ್‌ನವರು ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಇಂದು ಕುವೆಂಪು ರಸ್ತೆಯಲ್ಲಿರುವ ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಎದುರು ಧರಣಿ ಸತ್ಯಾಗ್ರಹ ನಡೆಸಲಾಯಿತು.


ಶಿವಮೊಗ್ಗ ತಾಲೂಕು ಹೊಳೆಹಟ್ಟಿ ಗ್ರಾಮದ ಕುಪೇಂದ್ರಪ್ಪ ಎನ್ನುವವರು ಕೆನರಾ ಬ್ಯಾಂಕ್‌ನಲ್ಲಿ ಬೆಳೆ ಸಾಲ ಸೇರಿದಂತೆ 9.52 ಲಕ್ಷ ರೂ. ಸಾಲ ಪಡೆದಿದ್ದರು ಇದರಲ್ಲಿ 4.50 ಲಕ್ಷ ಜಮಾ ಮಾಡಿದ್ದಾರೆ. ಉಳಿದ ಹಣ ಪಾವತಿಸಲು ಸಿದ್ಧರಾಗಿದ್ದಾರೆ. ಆದರೆ ಸಾಲಗಾರ ರೈತ ಕುಪೇಂದ್ರಪ್ಪ ಅನಾರೋಗ್ಯದಿಂದ ಬಳಲುತ್ತಿದ್ದಾನೆ. ಪತ್ನಿಗೂ ಕೂಡ ಅನಾರೋಗ್ಯವಿದೆ. ಮಕ್ಕಳ ಮದುವೆಗೆ ಜಮೀನು ಮಾರಿದ್ದಾರೆ. ಇಂತಹ ಸಂದರ್ಭದಲ್ಲಿ ಕೆನರಾ ಬ್ಯಾಂಕಿನವರು ಮನೆ ಮುಂದೆ ಬಂದು ನಿಮ್ಮ ಮನೆಯನ್ನು ಸ್ವಾಧೀನಪಡಿಸಿಕೊಳ್ಳಲಾಗುವುದು ಎಂದು ನೋಟೀಸ್ ಅಂಟಿಸಿದ್ದಾರೆ. ಇದರಿಂದ ರೈತ ಮತ್ತು ಮನೆಯವರು ಭಯಭೀತರಾಗಿ ಆತ್ಮಹತ್ಯೆ ಮಾಡಿಕೊಳ್ಳುವುದೇ ಲೇಸು ಎಂದು ಯೋಚಿಸುತ್ತಿದ್ದಾರೆ ಎಂದು ರೈತ ಸಂಘದವರು ದೂರಿದರು.


ಈ ಬಗ್ಗೆ ಬ್ಯಾಂಕಿಗೆ ಹೋಗಿ ಪರಿಶೀಲಿಸಿದರೆ 9.52ಲಕ್ಷ ಅಸಲಿನಲ್ಲಿ 4.50 ಲಕ್ಷ ಕಟ್ಟಿದ್ದರೆ 5.02 ಲಕ್ಷ ಅಸಲು ಉಳಿದಿದೆ. ಈ ಹಣಕ್ಕೆ 1ಕೋಟಿ1ಲಕ್ಷ ಬಾಕಿ ಇದೆ ಎಂದು ಬ್ಯಾಂಕಿನವರು ತಿಳಿಸುತ್ತಾರೆ. ಇದೇನು ಮೀಟರ್ ಬಡ್ಡಿಯೇ. ಶೇ.ಎಷ್ಟು ಬಡ್ಡಿ ಹಾಕಬೇಕು. ಚಕ್ರಬಡ್ಡಿ ಹಾಕಲು ಬ್ಯಾಂಕಿನವರಿಗೆ ಅಧಿಕಾರ ಇದೆಯೇ. ಕೈಗಾರಿಕೋದ್ಯಮಿಗಳ 14ಲಕ್ಷ ಕೋಟಿ ರೂ.ಗಳ ಸಾಲ ಮನ್ನಾ ಮಾಡಿದ ಬ್ಯಾಂಕುಗಳು ಬಡ ರೈತನಿಗೆ ಬೆದರಿಸಿ ಮನೆಯಿಂದ ಹೊರಹಾಕುತ್ತೇವೆ ಎಂದು ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ದೂರಿದರು.


ಕೆನರಾ ಬ್ಯಾಂಕಿನವರು ಪ್ರಾಮಾಣಿಕವಾಗಿ ಬಡ್ಡಿ ಹಾಕಲಿ. ಉಳಿದ ಹಣ 5.02 ಲಕ್ಷವನ್ನು ಕಟ್ಟಲು ಅವರು ಸಿದ್ಧರಿದ್ದಾರೆ. ಈ ಹಣ ಕಟ್ಟಿಸಿಕೊಂಡು ಸಾಲ ಚುಕ್ತಾಮಾಡಲಿ ಎಂದು ಧರಣಿನಿರತು ಆಗ್ರಹಿಸಿದ್ದಾರೆ.


ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ, ಪದಾಧಿಕಾರಿಗಳಾದ ಈಶಣ್ಣ ಅರಬಿಳಚಿ, ಎಸ್.ಶಿವಮೂರ್ತಿ, ಹಿಟ್ಟೂರು ರಾಜು, ಕಸೆಟ್ಟಿ ರುದ್ರೇಶ್, ಪಂಚಾಕ್ಷರಿ, ಸಿ. ಚಂದ್ರಪ್ಪ, ಪಿ.ಡಿ. ಮಂಜಪ್ಪ, ಕೆ. ರಾಘವೇಂದ್ರ ಇದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

5 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

5 days ago