Categories: ShivamoggaSoraba

ಸೂಕ್ತ ಶಿಕ್ಷಣ, ಆರೈಕೆ ಮಾಡಿದರೆ ಬುದ್ಧಿಮಾಂದ್ಯರು ಸಮಾಜದಲ್ಲಿ ಎಲ್ಲರಂತೆ ಬದುಕಬಲ್ಲರು

ಸೊರಬ: ಬುದ್ದಿಮಾಂದ್ಯತೆ ಕಾಯಿಲೆಯಲ್ಲ. ಮಕ್ಕಳು ಅವರ ಬೌದ್ಧಿಕ ಬೆಳವಣಿಗೆಗೆ ಅನುಗುಣವಾಗಿ ಹಾಗೆ ವರ್ತಿಸುತ್ತಾರೆ. ಅವರಿಗೆ ಸೂಕ್ತ ಶಿಕ್ಷಣ, ಆರೈಕೆ ಮಾಡಿದರೆ ಅವರು ಸಹ ಸಮಾಜದಲ್ಲಿ ಎಲ್ಲರಂತೆ ಬದುಕಬಲ್ಲರು ಎಂದು ನ್ಯಾಯವಾದಿ ಕುಮಾರಸ್ವಾಮಿ ಅಭಿಮಾನಿ ಬಳಗದ ಕುಶಾಲ್ ಆರೇಕೊಪ್ಪ ಹೇಳಿದರು.

ಸರ್ಕಾರದ ಅನುದಾನವಿಲ್ಲದೆ ದಾನಿಗಳ ನೆರನಿಂದ ನಡೆಯುತ್ತಿರುವ ಪಟ್ಟಣದ ಹೊಸಪೇಟೆ ಬಡಾವಣೆಯ ನವಚೇತನ ಬುದ್ದಿಮಾಂದ್ಯ ಮಕ್ಕಳ ಶಾಲೆ ವಿದ್ಯಾರ್ಥಿಗಳಿಗೆ ವಕೀಲ ಕುಮಾಸ್ವಾಮಿ ಅಭಿಮಾನಿ ಬಳಗದಿಂದ ವಾಷಿಂಗ್ ಮಷಿನ್ ನೀಡಿ ಅವರು ಮಾತನಾಡಿದರು.

ಬುದ್ದಿಮಾಂದ್ಯ ಮಕ್ಕಳ ಜೀವನ, ಹಾದಿ ಸವಾಲಿನಿಂದ ಕೂಡಿದೆ. ಇವರ ಬಗ್ಗೆ ಕರುಣೆ ತೋರಿದರೇ ಸಾಲದು, ಸಮಾಜದಲ್ಲಿಅವರಿಗೂ ಎಲ್ಲರಂತೆ ಬದುಕುವ ಹಕ್ಕು, ಅವಕಾಶಗಳಿವೆ. ಇಂತಹವರ ಬಾಳು ಹಸನುಗೊಳಿಸಿ, ಬೆಳಕು ಚೆಲ್ಲುವಲ್ಲಿ ಅನಾವಶ್ಯಕ ದುಂದುವೆಚ್ಚಗಳಿಗೆ ಕಡಿವಾಣ ಹಾಕಿ ಇಂತಹ ಮಕ್ಕಳಿಗೆ ಸಹಾಯ ಹಸ್ತ ನೀಡಲು ಪ್ರತಿಯೊಬ್ಬರೂ ಪ್ರತಿಯೊಬ್ಬರು ಮುಂದಾಗಬೇಕು ಎಂದರು.

ಈ ಮಕ್ಕಳಿಗೆ ನ್ಯಾಯವಾದಿ ಕುಮಾರಸ್ವಾಮಿಯವರ ಜನ್ಮ ದಿನದ ಸಂದರ್ಭದಲ್ಲಿ ಏನಾದರೂ ಕೊಡುಗೆ ನೀಡಬೇಕು ಎಂದು ವಕೀಲರು ನವಚೇತನ ಶಾಲೆಯಾರೊಂದಿಗೆ ಚರ್ಚಿಸಿದ ಸಂದರ್ಭದಲ್ಲಿ ವಾಷಿಂಗ್ ಮೆಷಿನ್ ನ ಕೊರತೆ ಇದೆ ಎಂದು ತಿಳಿಸಿದಾಗ ವಾಷಿಂಗ್ ಮೆಷಿನ್ ನೀಡಿ ಕೊರತೆ ನೀಗಿಸಿದ್ದಕ್ಕೆ ಸಂತಸ ತಂದಿದೆ ಎಂದರು.

ರಾಜ್ಯ ಪ್ರಶಸ್ತಿ ಪುರಸ್ಕೃತ ಶಾಲಾ ಶಿಕ್ಷಕ ಪುಟ್ಟರಾಜು ಮಾತನಾಡಿ ಬುದ್ದಿಮಾಂದ್ಯರ ಬಗ್ಗೆ ಕರುಣೆ, ಅನುಕಂಪ ತೋರುವುದು ಬೇಡ, ಸಮಾಜದಲ್ಲಿ ಸಮಾನ ಅವಕಾಶಗಳನ್ನು ನೀಡಿ ಮುಂಚೂಣಿಗೆ ತರುವ ಮೂಲಕ ಸಹಾಯಹಸ್ತ ಚಾಚಬೇಕು. ಯಾವುದೋ ಒಂದು ಕಾರಣದಿಂದ ಇಂತಹ ಪರಿಸ್ಥಿತಿಯಲ್ಲಿ ಬದುಕುತ್ತಿರುವ ಇಂತಹ ಮಕ್ಕಳನ್ನು ತಾತ್ಸಾರ ಮನೋಭಾವದಿಂದ ಕಾಣದೇ ಅವರನ್ನು ಸಮಾಜ ಒಳ್ಳೆಯ ದೃಷ್ಠಿಯಿಂದ ಕಂಡು ಅವರಿಗೂ ಸಹ ನಮ್ಮಂತೆ ಬದುಕುವ ವ್ಯವಸ್ಥೆ ಕಲ್ಪಿಸಿಕೊಡಲು ಮುಂದಾಗಬೇಕು ಎಂದರು.

ಈ ಸಂದರ್ಭದಲ್ಲಿ ನ್ಯಾಯವಾದಿ ಕುಮಾಸ್ವಾಮಿ ಅಭಿಮಾನಿ ಬಳಗದ ಆನಂದ್ ಹಿರೆಕಸವಿ, ಶಶಿಕುಮಾರ್, ಮಹೇಶ್, ಸಂತೋಷ್,ಶಿವರಾಜ್, ಶಾಲಾ ಶಿಕ್ಷಕರಾದ ಪುಟ್ಟರಾಜು, ರವೀಂದ್ರ, ಪಲ್ಲವಿ, ಗಾಯತ್ರಿ, ಮಂಗಳ ಮತ್ತಿತರರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

1 day ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

1 day ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

1 day ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

1 day ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

1 day ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

2 days ago