Categories: Shivamogga

ಸೆ.10 ರಂದು ಕಾಂಗ್ರೆಸ್ ಹೌಸ್ ಕಾದಂಬರಿ ಬಿಡುಗಡೆ

ಶಿವಮೊಗ್ಗ: ಬಿಡುಗಡೆಗೆ ಮುನ್ನವೇ ಸಂಚಲನ ಮೂಡಿಸಿದ ವಾಣಿ ಗೌಡರ `ಕಾಂಗ್ರೆಸ್ ಹೌಸ್’ ಕಾದಂಬರಿ ಸೆ.10ರಂದು ಸಂಜೆ 6 ಗಂಟೆಗೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಲ್ಲಿ ಬಿಡುಗಡೆಯಾಗಲಿದೆ ಎಂದು ರಕ್ಷಣಾ ಫೌಂಡೇಷನ್ನಿನ ಪ್ರತಿಭಾ ಡಾಕಪ್ಪ ಗೌಡ ಹೇಳಿದರು.


ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪುಸ್ತಕ ಬಿಡುಗಡೆ ಸಮಾರಂಭವನ್ನು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಿ.ಮಂಜುನಾಥ್ ಉದ್ಘಾಟಿಸುವರು. ಬೆಂಗಳೂರು ಜಿಲ್ಲಾಧಿಕಾರಿ ಕೆ.ಎ. ದಯಾನಂದ, ಹಿರಿಯ ಸಾಹಿತಿ ಸವಿತಾ ನಾಗಭೂಷಣ್, ಪ್ರಕಾಶಕ ಶರವಣ ಕುಮಾರ್ ಮುಂತಾದವರು ಉಪಸ್ಥಿತರಿರುವರು ಎಂದರು.


ಕಾದಂಬರಿ ಲೇಖಕಿ ವಾಣಿಗೌಡ ಮಾತನಾಡಿ, ಕಾಂಗ್ರೆಸ್ ಹೌಸ್ ಕಾದಂಬರಿ ನನ್ನ ಮೊದಲ ಕಾದಂಬರಿಯಾಗಿದೆ. ಈ ಕಾದಂಬರಿಯು ಒಂದು ಹೆಣ್ಣಿನ ಸಂಕಟಗಳ ಹೋರಾಟದ ನೈಜ ಕಥೆಯಾಗಿದೆ. ಆ ಹೆಣ್ಣಿನ ಅನುಭವಗಳನ್ನು ಆಕೆಯಿಂದಲೇ ಕೇಳಿ ಈ ಕೃತಿಯನ್ನು ರಚಿಸಲಾಗಿದೆ. ಇದಕ್ಕಾಗಿ 6 ತಿಂಗಳು ಅಧ್ಯಯನ ಮಾಡಿದ್ದೇನೆ. ಕಾದಂಬರಿ ಪೂರ್ಣಗೊಳಿಸಲು ಎರಡು ವರ್ಷ ಬೇಕಾಯಿತು ಎಂದರು.
ಕಾಂಗ್ರೆಸ್ ಹೌಸ್ ಎಂಬ ಹೆಸರೇ ಒಂದು ರೀತಿಯಲ್ಲಿ ಕುತೂಹಲ ಮೂಡಿಸಿದೆ. ಕಾದಂಬರಿ ಬಿಡುಗಡೆಗೂ ಮುನ್ನವೇ ಕಾದಂಬರಿಯ ವಸ್ತುವಿನ ಬಗ್ಗೆ ಚರ್ಚೆಯಾಯಿತು. ಇದು ಕಾಂಗ್ರೆಸ ಪಕ್ಷದ ಹಿನ್ನೆಲೆಯಲ್ಲಿ ಇರಬೇಕು ಎಂದುಕೊಂಡವರು ಬಹಳ ಜನ. ಈ ಬಗ್ಗೆ ಅನೇಕರು ನನ್ನ ಬಳಿ ಚರ್ಚಿಸಿದ್ದಾರೆ. ಆದರೆ ಈ ಕಾದಂಬರಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವ ಸಂಬAಧವೂ ಇಲ್ಲ ಎಂದರು.


ಈ ಕಾದಂಬರಿಯ ಪ್ರಮುಖ ಪಾತ್ರಗಳು ಮತ್ತು ಸನ್ನಿವೇಶ ಬಾಂಬೆಯದು. ಬಾಂಬೆಯಲ್ಲಿ ಕಾಂಗ್ರೆಸ್ ಹೌಸ್ ಎಂಬ ಬಡಾವಣೆಯೇ ಇದೆ. ಇದನ್ನು ರೆಡ್‌ಲೈಟ್ ಏರಿಯಾ ಎಂದು ಕೂಡ ಕರೆಯುತ್ತಿದ್ದರು. ಅಲ್ಲಿ ವಾಸಿಸುವ ಜನರು ಹೊರ ಜಗತ್ತಿನಿಂದ ವಿಮುಖವಾಗಿರುತ್ತಾರೆ. ಅಲ್ಲಿಯ ಬದುಕು, ಬವಣೆ, ಇವೆಲ್ಲವೂ ಮಾನವೀಯತೆಯೊಳಗಿನ ಮರ್ಮಗಳನ್ನು ಅಣಕಿಸುತ್ತವೆ. ಕೆಣಕಿಸುತ್ತವೆ. ಈ ಎಲ್ಲಾ ಘಟನೆಗಳನ್ನು ಇಟ್ಟುಕೊಂಡು ನನ್ನ ಅಭಿಪ್ರಾಯಗಳನ್ನು ಇದರ ಜೊತೆಗೆ ಹೆಣೆದು ಈ ಕಾದಂಬರಿಯನ್ನು ಬರೆದಿದ್ದೇನೆ. ಓದುಗರು ಸ್ವಾಗತಿಸುತ್ತಾರೆ ಎಂದುಕೊಂಡಿದ್ದೇನೆ ಎಂದರು.


ಈ ಪುಸ್ತಕವು 130 ಪುಟಗಳನ್ನು ಒಳಗೊಂಡಿದ್ದು, 199 ರೂ.ಗಳನ್ನು ಮುಖಬೆಲೆ ಇಡಲಾಗಿದೆ. ಬಿಡುಗಡೆಯ ದಿನದಂದು 150ರೂ.ಗಳಿಗೆ ನೀಡಲಾಗುವುದು ಎಂದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago