ಸೆ.25 ರಂದು ಧರಣಿ ಸತ್ಯಾಗ್ರಹ | ಇಡೀ ರಾಜ್ಯವನ್ನು ಬರಗಾಲ ಎಂದು ಘೋಷಿಸಿ ರೈತರ ಸಾಲ ವಸೂಲಾತಿ ಕಿರುಕುಳ ನಿಲ್ಲಸಿ ; ಹೆಚ್.ಆರ್ ಬಸವರಾಜಪ್ಪ

ಶಿವಮೊಗ್ಗ: ಇಡೀ ರಾಜ್ಯವನ್ನು ಬರಗಾಲ ಎಂದು ಘೋಷಿಸಬೇಕು. ರೈತರ ಸಾಲ ವಸೂಲಾತಿ ಕಿರುಕುಳ ನಿಲ್ಲಬೇಕು ಎಂಬುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಸೆ.25ರಂದು ಬೆ.11ರಿಂದ ಸಂಜೆ 4ರವರೆಗೆ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಧರಣಿ ಸತ್ಯಾಗ್ರಹ ನಡೆಸಲಿದೆ ಎಂದು ರೈತಸಂಘದ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜಪ್ಪ ಹೇಳಿದರು.


ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಬರಗಾಲ ಕಾಲಿಟ್ಟಿದೆ. ರೈತರ ಬೆಳೆ ಒಣಗಿದೆ. ಹಲವು ಕಡೆ ಬಿತ್ತನೆಯೇ ಆಗಿಲ್ಲ. ರೈತರು ನಿರೀಕ್ಷೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಂತಹ ಸಂದರ್ಬದಲ್ಲಿ ರಾಜ್ಯ ಸರ್ಕಾರ ಕೇವಲ 161 ತಾಲೂಕುಗಳನ್ನು ಮಾತ್ರ ಬರಗಾಲ ಎಂದು ಘೋಷಣೆ ಮಾಡದೆ ಉಳಿದ 74 ತಾಲೂಕುಗಳನ್ನೂ ಬರಗಾಲ ಎಂದು ಘೋಷಿಸಬೇಕೆಂದು ಆಗ್ರಹಿಸಿದರು.


ರಾಜ್ಯ ಸರ್ಕಾರ ರೈತರ ಸಂಕಷ್ಟಗಳನ್ನು ಮರೆತಿದೆ. ಗ್ಯಾರಂಟಿಗಳೇ ಅವರಿಗೆ ಮುಖ್ಯವಾಗಿದೆ. ವಿರೋಧ ಪಕ್ಷಗಳು ತಮ್ಮ ಜವಾಬ್ದಾರಿ ಮರೆತಿವೆ. ಮುಂದಿನ ಲೋಕಸಭೆ ಚುನಾವಣೆಯ ಹವಣಿಕೆಯಲ್ಲಿದ್ದಾರೆ. ಇದರ ನಡುವೆ ಬ್ಯಾಂಕುಗಳು, ಫೈನಾನ್ಸ್ ಗಳು ಸಾಲ ವಸೂಲಾತಿಗಾಗಿ ರೈತರಿಗೆ ಕರುಕುಳ ನೀಡುತ್ತಿವೆ. ರೈತ ನಿಜಕ್ಕೂ ಸಂಕಷ್ಟದಲ್ಲಿದ್ದಾನೆ. ಆತನ ನೆರವಿಗೆ ಸರ್ಕಾರ ತಕ್ಷಣ ಬರಬೇಕು ಎಂದರು.


ಇಡೀ ರಾಜ್ಯವನ್ನು ಬರಗಾಲ ಎಂದು ಘೋಷಿಸಬೇಕು. ರೈತರಿಗೆ  ಬೆಳೆ ಪರಿಹಾರವಾಗಿ ಎಕರೆಗೆ 25ಸಾವಿರ ರೂ. ನೀಡಬೇಕು. ರೈತರ ಪಂಪ್‌ಸೆಟ್‌ಗಳಿಗೆ 7 ಗಂಟೆ ವಿದ್ಯುತ್ ನೀಡಬೇಕು. ಸುಟ್ಟುಹೋದ ಟಿಸಿಗಳನ್ನು ತಕ್ಷಣ ಬದಲಿಸಬೇಕು. ರೈತರ ಎಲ್ಲಾ ರೀತಿಯ ಸಾಲ ವಸೂಲಾತಿಯನ್ನು ತಡೆ ಹಿಡಿಯಬೇಕು. ಸಾಲ ಮನ್ನಾ ಮಾಡಬೇಕು. ಒಕ್ಕಲೆಬ್ಬಿಸುವುದನ್ನು ನಿಲ್ಲಿಸಬೇಕು. ಬೆಳೆ ವಿಮೆ ಪಡೆದುಕೊಂಡ ಕಂಪೆನಿಗಳು ತಕ್ಷಣವೇ ರೈತರಿಗೆ ಮಧ್ಯಂತರ ಪರಿಹಾರ ನೀಡಬೇಕು ಎಂದು ಅವರು ಆಗ್ರಹಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಪಿ.ಡಿ.ಮಂಜಪ್ಪ, ಕೆ. ರಾಘವೇಂದ್ರ, ಎಸ್. ಶಿವಮೂರ್ತಿ, ಸಿ. ಚಂದ್ರಪ್ಪ, ಕಸೆಟ್ಟಿ ರುದ್ರೇಶ್ ಇದ್ದರು.

Malnad Times

Recent Posts

ಪೆನ್‌ಡ್ರೈವ್ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದ ಹಸ್ತಕ್ಷೇಪವಿಲ್ಲ ; ಸುಧೀರ್‌ಕುಮಾರ್ ಮುರೊಳ್ಳಿ ಸ್ಪಷ್ಟನೆ

ಹೊಸನಗರ : ಅಂತರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿರುವ ಹಾಸನದ ಪ್ರಜ್ವಲ್ ರೇವಣ್ಣ ಅವರ ಪ್ರಕರಣ ಅತ್ಯಂತ ಹೇಯವಾದದ್ದು. ಹೆಣ್ಣು ಮಕ್ಕಳ ಮಾನಹಾನಿಯಾಗುವಂತಹ…

2 hours ago

ಕಾಡಾನೆ ದಾಳಿಯಿಂದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ ಬಿವೈಆರ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ರಿಪ್ಪನ್‌ಪೇಟೆ : ಅರಸಾಳು ಗ್ರಾಪಂ ವ್ಯಾಪ್ತಿಯ ಬಸವಾಪುರ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿದ್ದ ಮೃತಪಟ್ಟ ತಿಮ್ಮಪ್ಪ ನಿವಾಸಕ್ಕೆ…

4 hours ago

Shivamogga | ನಗರದಲ್ಲಿ ಗಮನ ಸೆಳೆದ ಮತದಾನ ಜಾಗೃತಿ ‘ಮ್ಯಾರಾಥಾನ್’

ಶಿವಮೊಗ್ಗ : ನಮ್ಮನ್ನು ಯಾರು ಆಳಬೇಕೆಂಬ ತೀರ್ಮಾನ ಮತದಾರರ ಕೈಯಲಿದೆ. ಆದ್ದರಿಂದ ಎಲ್ಲ ಮತದಾರರು ತಪ್ಪದೇ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ…

5 hours ago

ಮಲೆನಾಡಿನಲ್ಲಿ ಮುಂದುವರೆದ ಕಾಡಾನೆಗಳ ಹಾವಳಿ, ತೋಟದ ಕೆಲಸಕ್ಕೆ ತೆರಳಿದ್ದ ಕಾರ್ಮಿಕ ಆನೆ ದಾಳಿಗೆ ಬಲಿ !

ಮುಂದುವರೆದ ಕಾಡಾನೆಗಳ ಹಾವಳಿ, ತೋಟದ ಕೆಲಸಕ್ಕೆ ತೆರಳಿದ್ದ ಕಾರ್ಮಿಕ ಆನೆ ದಾಳಿಗೆ ಬಲಿ ! ಚಿಕ್ಕಮಗಳೂರು : ತೋಟದ ಕೆಲಸಕ್ಕೆ…

6 hours ago

Rain Alert | ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು : ಮೇ 7ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ…

9 hours ago

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿಯಲ್ಲಿ ಮುಳುಗಿ ಸಾವು !

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿ ನದಿಯಲ್ಲಿ ಮುಳುಗಿ ಸಾವು ! ಕಳಸ : ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿಯೊಬ್ಬಳು ಸ್ನಾನ…

11 hours ago