Categories: Shivamogga

ಸೇವಿಸುವ ಗಾಳಿ, ನೀರು ಮತ್ತು ಆಹಾರ ಎಲ್ಲವೂ ಕಲುಷಿತ ; ಡಾ. ಧನಂಜಯ ಸರ್ಜಿ

ಶಿವಮೊಗ್ಗ : ನಾವು ಸೇವಿಸುವ ಗಾಳಿ, ನೀರು ಮತ್ತು ಆಹಾರ ಎಲ್ಲವೂ ಕಲುಷಿತಗೊಳ್ಳುತ್ತಿದ್ದು, ಪರಿಸರವನ್ನು ಸಂರಕ್ಷಣೆ ಮಾಡುವ ಕೆಲಸವನ್ನು ಎಲ್ಲರೂ ಸೇರಿ ಮಾಡಬೇಕಿದೆ ಎಂದು ಸರ್ಜಿ ಆಸ್ಪತ್ರೆಗಳ ಸಮೂಹದ ವ್ಯವಸ್ಥಾಪಕ ನಿದೇರ್ಶಕರಾದ ಡಾ.ಧನಂಜಯ ಸರ್ಜಿ ಸಲಹೆ ನೀಡಿದರು.

ಆಲ್ಕೊಳದ ದಿ ಶಿವಮೊಗ್ಗ ಮಲ್ಟಿಪರ್ಪಸ್‌ ಸೋಷಿಯಲ್‌ ಸೊಸೈಟಿ , ಸರ್ಜಿ ಸಮೂಹ ಆಸ್ಪತ್ರೆ ಇವರ ಸಹಯೋಗದಲ್ಲಿ ಶುಕ್ರವಾರ ಅನುಪಿನ ಕಟ್ಟೆಯ ಘನ ತ್ಯಾಜ್ಯ ವಿಲೇವಾರಿ ಘಟಕದ ಆವರಣದಲ್ಲಿ ಹಮ್ಮಿಕೊಂಡಿದ್ದ ಒಂದು ಸಾವಿರ ಹಣ್ಣಿನ ಗಿಡಗಳನ್ನು ನೆಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಪರಿಸರ ಸಂರಕ್ಷಣೆ ಹಾಗೂ ತ್ಯಾಜ್ಯ ವಿಲೇವಾರಿ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸುವ ಮೂಲಕ ಜಾಗೃತಿ ಉಂಟು ಮಾಡಬೇಕಿದೆ ಎಂದರು.

ಎಷ್ಟೇ ತಂತ್ರಜ್ಞಾನ ಮುಂದುವರಿದರೂ ನೀರು, ನೈಸರ್ಗಿಕ ಗಾಳಿಯನ್ನು ಉತ್ಪಾದನೆ ಮಾಡಲಾಗಿಲ್ಲ, ಹಾಗೆಯೇ ಸೂರ್ಯನ ಬೆಳಕು ಹಾಗೂ ರಕ್ತವನ್ನು ಉತ್ಪಾದನೆ ಮಾಡಲಾಗಿಲ್ಲ,ಗಿಡ, ಮರವನ್ನು ಬೆಳೆಸುವ ಕಾಯಕವನ್ನು ಮಾಡಬೇಕಿದೆ. ಹಾಗೆಯೇ ಕೆರೆ ಕಟ್ಟೆಗಳನ್ನು ನಿರ್ಮಿಸಬೇಕಿದೆ. ಪ್ರತಿಯೊಬ್ಬರಲ್ಲೂ ಪ್ಲಾಸ್ಟಿಕ್‌ ಬಳಕೆ ಮಾಡದಂತೆ ಜಾಗೃತಿ ಮೂಡಿಸಬೇಕಿದೆ. ಬಳಸಿ ಭೂಮಿಗೆಸೆಯುವ ಪ್ಲಾಸ್ಟಿಕ್‌ 200 ವರ್ಷವಾದರೂ ಕೊಳೆಯುವುದಿಲ್ಲ, ಬಳಿಕ ಅದು ಗಾಳಿ, ನೀರು ಹಾಗೂ ಆಹಾರದ ಮೂಲ ಮೈಕ್ರೋ ಆಗಿ ದೇಹವನ್ನು ಸೇರುತ್ತಿದೆ. ಈ ಬಗ್ಗೆ ಎಲ್ಲರೂ ಅರಿವು ಹೊಂದಬೇಕು. ಭಗವಂತ ಕೊಟ್ಟಿರುವ ಸಂಪತ್ತು ಹಾಗೂ ಸಂಪನ್ಮೂಲವನ್ನು ಉಳಿಸಿಕೊಳ್ಳುವ ಬದಲು ಹಾಳು ಮಾಡುತ್ತಿದ್ದೇವೆ . ಇನ್ನು ಮುಂದಾದರೂ ನಾವೆಲ್ಲರೂ ಎಚ್ಚೆತ್ತುಕೊಳ್ಳಬೇಕಿದೆ ಎಂದರು.

ಶಿವಮೊಗ್ಗ ಮಲ್ಟಿ ಪರ್ಪಸ್‌ ಸೋಷಿಯಲ್‌ ಸೊಸೈಟಿ ನಿರ್ದೇಶಕರಾದ ಫಾ.ಕ್ಲಿಫರ್ಡ್‌ ರೋಷನ್‌ ಪಿಂಟೋ ಮಾತನಾಡಿ, ನಮ್ಮ ಸಂಸ್ಥೆಯ ಸಂಸ್ಥಾಪನಾ ದಿನದ ಅಂಗವಾಗಿ ನಗರದೆಲ್ಲೆಡೆ ಹಣ್ಣಿನ ಗಿಡ ಹಾಗೂ ಇತರೆ ಸಸಿಗಳನ್ನುನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಂಸ್ಥೆಯು 34 ವರ್ಷಗಳನ್ನು ಯಶಸ್ವಿಯಾಗಿ ಪೂರೈಸಿದ್ದು, ನಾನಾ ರೀತಿಯ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬರುತ್ತಿದೆ. ಪರಿಸರ ಸಂರಕ್ಷಣೆ ಸಲುವಾಗಿ ಬೇರೆ ಬೇರೆ ಕಡೆ ಈಗಾಗಲೇ ಆರು ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಡಲಾಗಿದೆ. ನೆಟ್ಟ ಗಿಡಗಳನ್ನು ಎಲ್ಲರೂ ಪೋಷಣೆ ಮಾಡುವ ಕೆಲಸವನ್ನು ಮಾಡಬೇಕು. ಅಲ್ಲದೇ ಪ್ರತಿಯೊಬ್ಬರೂ ಪ್ಲಾಸ್ಟಿಕ್‌ ನ್ನು ಮಿತವಾಗಿ ಬಳಸಬೇಕು, ನೀರು ಮತ್ತು ಮಣ್ಣಿನ ಸಂರಕ್ಷಣೆ ಮಾಡುವ ನಿಟ್ಟಿನಲ್ಲಿ ಎಲ್ಲರೂ ಮುಂದಾಗಬೇಕು ಎಂದು ಸಲಹೆ ನೀಡಿದರು.

ವಕೀಲರಾದ ಕೆ.ಪಿ.ಶ್ರೀಪಾಲ್‌, ಬೆಂಗಳೂರು ಕ್ರಾಸ್‌ ಸಂಸ್ಥೆಯ ಮಹಿಳಾ ಸಬಲೀಕರಣ ಯೋಜನೆ ಸಿಸ್ಟರ್‌ ನ್ಯಾನರ‍ಸಿ ಹಾಗೂ ಘಟಕದ ಸಿಬ್ಬಂದಿ, ಸ್ವ ಸಹಾಯ ಮಹಿಳೆಯರು ಪ್ರತಿನಿಧಿಗಳು, ಸಂಸ್ಥೆಯ ಸಿಬ್ಬಂದಿ ಹಾಜರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

4 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

4 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

4 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

4 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

4 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago