Categories: ShivamoggaSoraba

ಸೊರಬ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕೊರತೆ ; ಸರ್ಕಾರಿ ಆಸ್ಪತ್ರೆಗಳಿಗೆ ವೈದ್ಯರ ನೇಮಕಕ್ಕೆ ಒತ್ತಾಯ

ಸೊರಬ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯರ ಕೊರತೆಯಿಂದ ಗ್ರಾಮೀಣ ಪ್ರದೇಶದ ರೋಗಿಗಳು ಪರದಾಡುವಂತಾಗಿದ್ದು, ಸರ್ಕಾರ ಕೂಡಲೇ ವೈದ್ಯರನ್ನು ನೇಮಕ ಮಾಡಬೇಕು ಎಂದು ಬಿಜೆಪಿ ಮುಖಂಡ ಹಾಗೂ ಸಮಾಜ ಸೇವಕ ಡಾ. ಎಚ್.ಇ. ಜ್ಞಾನೇಶ್ ಆಗ್ರಹಿಸಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವವರ ಸಂಖ್ಯೆ ಹೆಚ್ಚುತ್ತಿದೆ. ಕಳೆದ ನಾಲ್ಕೈದು ವರ್ಷಗಳ ಹಿಂದೆ 250ವರೆಗೆ ಇದ್ದ ಒಳರೋಗಿಗಳ ಸಂಖ್ಯೆ 600ರವರೆಗೆ ತಲುಪಿದೆ. ಆಸ್ಪತ್ರೆಯಲ್ಲಿ 14 ವೈದ್ಯರ ಪೈಕಿ ಕೇವಲ ಮೂರು ವೈದ್ಯರು ಕಾರ್ಯನಿರ್ವಹಿಸುತ್ತಿದ್ದು, ತಾಲೂಕು ಕೇಂದ್ರದಲ್ಲಿ ವೈದ್ಯರ ಕೊರತೆ ಇರುವುದು ದುರಂತದ ವಿಷಯ. ಅನೇಕ ತಜ್ಞ ವೈದ್ಯರೇ ಇಲ್ಲ. ಇರುವ ವೈದ್ಯರಿಗೂ ಕರ್ತವ್ಯದ ಒತ್ತಡವಾಗುತ್ತಿದ್ದು ಈ ನಿಟ್ಟಿನಲ್ಲಿ ವರ್ಗಾವಣೆ ಬಯಸುತ್ತಿದ್ದಾರೆ ಎನ್ನುವ ಮಾಹಿತಿ ಇದೆ ಎಂದರು.

ಬಹುತೇಕ ಗ್ರಾಮೀಣ ಪ್ರದೇಶದಲ್ಲಿ ಇದೇ ಪರಿಸ್ಥಿತಿ ಇದೆ. ಗ್ರಾಮೀಣ ಪ್ರದೇಶದಿಂದ ತೆರಳಿ ವೈದ್ಯಕೀಯ ಶಿಕ್ಷಣ ಪಡೆದವರು ಉತ್ತಮ ವೇತನಕ್ಕಾಗಿ ಮಹಾನಗರಗಳು ಹಾಗೂ ವಿದೇಶಗಳಿಗೆ ತೆರಳುತ್ತಿದ್ದಾರೆ. ಅವರನ್ನು ಗ್ರಾಮೀಣ ಪ್ರದೇಶದತ್ತ ಸೆಳೆಯುವ ಯತ್ನವಾಗಬೇಕು. ಸರ್ಕಾರದ ಮಟ್ಟದಲ್ಲಿ ಶಾಸನ ಸಭೆಯಲ್ಲಿ ಚರ್ಚಿಸಿ ಗ್ರಾಮೀಣ ಪ್ರದೇಶದಲ್ಲಿ ಕರ್ತವ್ಯ ನಿರ್ವಹಿಸುವ ವೈದ್ಯರಿಗೆ ಅರ್ಹ ವೇತನ ನೀಡುವ ವ್ಯವಸ್ಥೆಯಾಗಬೇಕು. ವಸತಿ ಮತ್ತು ಮೂಲ ಸೌಲಭ್ಯಗಳನ್ನು ಒದಗಿಸಬೇಕು ಎಂದರು.

ಕೇವಲ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಮಾತ್ರವಲ್ಲ ಬಹುತೇಕ ಗ್ರಾಮೀಣ ಪ್ರದೇಶದಲ್ಲಿ ವೈದ್ಯರ ಕೊರತೆಯನ್ನು ಕಾಣುತ್ತಿದ್ದೇವೆ. ತಾಲೂಕಿನ 16 ಪ್ರಾಥಮಿಕ ಚಿಕಿತ್ಸಾಲಯಗಳಲ್ಲಿ ಏಳು ವೈದ್ಯರ ಕೊರತೆ ಇದೆ. ಆನವಟ್ಟಿಯ ಆಸ್ಪತ್ರೆಯಲ್ಲಿ 6 ವೈದ್ಯರು ಇರಬೇಕಿದ್ದು, ಕೇವಲ ಇಬ್ಬರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿಯ 90 ಹುದ್ದೆಗಳ ಪೈಕಿ 60 ಹುದ್ದೆಗಳು ಖಾಲಿ ಇದೆ. ವೈದ್ಯರ ಕೊರತೆ ನೀಗಿಸಿ ಜನತೆಗೆ ಆರೋಗ್ಯ ಸೌಲಭ್ಯ ಒದಗಿಸುವತ್ತ ಸರ್ಕಾರ ಗಮನ ನೀಡಬೇಕು. ಜೊತೆಗೆ ಕ್ಷೇತ್ರದ ಜನಪ್ರತಿನಿಧಿಗಳು ಸದನದಲ್ಲಿ ಸರ್ಕಾರಿ ಆಸ್ಪತ್ರೆಗಳ ವೈದ್ಯರ ಕೊರತೆ ಕುರಿತು ಧ್ವನಿ ಎತ್ತಬೇಕು ಎಂದು ಒತ್ತಾಯಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ತಾಲೂಕು ಉಪಾಧ್ಯಕ್ಷ ಈಶ್ವರಪ್ಪ ಚನ್ನಪಟ್ಟಣ, ಪ್ರಮುಖರಾದ ಪರಮೇಶ್ವರ ಮಣ್ಣತ್ತಿ, ಶರತ್‍ಗೌಡ, ಎಸ್.ಆರ್. ಶಿವಾನಂದ, ಯಶೋಧರಾ ಉಪಸ್ಥಿತರಿದ್ದರು.

Malnad Times

Recent Posts

ಕರ್ನಾಟಕ SSLC ಪರೀಕ್ಷೆ 2024ರ ಫಲಿತಾಂಶ ನಾಳೆ ಪ್ರಕಟ

ಬೆಂಗಳೂರು : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು…

3 days ago

ಮೇ 12 ರಂದು ನಾಗರಹಳ್ಳಿ ಶ್ರೀನಾಗೇಂದ್ರಸ್ವಾಮಿ ಪ್ರತಿಷ್ಠಾಪನಾ ವರ್ಧಂತ್ಯುತ್ಸವ, ಜಗದ್ಗುರು ಶಂಕರಾಚಾರ್ಯರ ಜಯಂತಿ

ರಿಪ್ಪನ್‌ಪೇಟೆ: ಹುಂಚ ಗ್ರಾಪಂ ವ್ಯಾಪ್ತಿಯ ಇತಿಹಾಸ ಪ್ರಸಿದ್ದ ನಾಗರಹಳ್ಳಿ ಶ್ರೀನಾಗೇಂದ್ರ ಸ್ವಾಮಿ ದೇವಸ್ಥಾನದಲ್ಲಿ ಮೇ 12 ರಂದು ಭಾನುವಾರ ನಾಗೇಂದ್ರಸ್ವಾಮಿಯ…

3 days ago

CRIME NEWS |  ಹಾಡಹಗಲೇ ಚಪ್ಪಡಿ ಕಲ್ಲು, ಸೈಕಲ್ ಎತ್ತಿಹಾಕಿ ಡಬ್ಬಲ್ ಮರ್ಡರ್ !

ಶಿವಮೊಗ್ಗ : ಹಾಡಹಗಲೇ ಚಪ್ಪಡಿ ಕಲ್ಲು ಮತ್ತು ಸೈಕಲ್ ಎತ್ತಿಹಾಕಿ ಇಬ್ಬರು ಯುವಕರನ್ನು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಗರದ…

3 days ago

ಶಿವಮೊಗ್ಗ ಲೋಕಸಭಾ ಕ್ಷೇತ್ರ | ಹೊಸನಗರ ತಾಲ್ಲೂಕಿನಲ್ಲಿ ಶೇ. 83.64ರಷ್ಟು ಮತದಾನ, ಎಲ್ಲೆಲ್ಲಿ ಎಷ್ಟೆಷ್ಟು?

ಹೊಸನಗರ: ಮೇ 7ರಂದು ನಡೆದ 2024ನೇ ಲೋಕಸಭೆ ಚುನಾವಣೆಯಲ್ಲಿ ಹೊಸನಗರ ತಾಲೂಕಿನಲ್ಲಿ ಶೇ. 83.64ರಷ್ಟು ಮತದಾನ ನಡೆದಿದೆ. ತಾಲ್ಲೂಕಿನಲ್ಲಿ ಒಟ್ಟು…

3 days ago

ಅಗ್ನಿ ಅವಘಡ, ಮನೆ ಸುಟ್ಟು ಭಸ್ಮ ! ಲಕ್ಷಾಂತರ ರೂ. ನಷ್ಟ

ತೀರ್ಥಹಳ್ಳಿ : ತಾಲೂಕಿನ ದೇವಂಗಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಪ್ಪಳಿ ಸಮೀಪದ ಗಿಣಿಯ ಎಂಬ ಗ್ರಾಮದಲ್ಲಿ ಗುರುಮೂರ್ತಿ ಭಟ್ ಎಂಬುವವರಿಗೆ…

3 days ago

ಭಾರತ ದೇಶದ ಸೈನಿಕರಿಗೆ ಕುಟುಂಬ ಸೇವೆಗಿಂತ ದೇಶ ಸೇವೆಯೇ ಮುಖ್ಯ ; ಕೃಷ್ಣಪೂಜಾರಿ ದಂಪತಿ

ಹೊಸನಗರ: ದೇಶ ಸೇವೆಯಲ್ಲಿ ಸಿಗುವ ತೃಪ್ತಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ, ಕುಟುಂಬಕ್ಕಿಂತ ಭಾರತ ದೇಶದ ಸೈನಿಕರಿಗೆ ದೇಶವೇ ಮುಖ್ಯ ಹೊರತು…

4 days ago